ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪಚುನಾವಣೆ ಸೋಲು ಬಿಜೆಪಿಗೆ ಎಚ್ಚರಿಕೆಯ ಪಾಠ: ಸ್ವಾಮಿ

|
Google Oneindia Kannada News

ನವದೆಹಲಿ, ಜೂನ್ 01: "ಉಪಚುನಾವಣೆಯಲ್ಲಿನ ಹೀನಾಯ ಸೋಲು ಬಿಜೆಪಿಗೆ ಎಚ್ಚರಿಕೆಯ ಪಾಠ" ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

4 ಲೋಕಸಭಾ ಮತ್ತು 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಕ್ರಮಾವಾಗಿ ಒಂದು-ಒಂದು ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲು ಬಿಜೆಪಿ ಉಪಚುನಾವಣೆಯಲ್ಲಿ ಹೀನಾಯ ಪ್ರದರ್ಶನ ತೋರಿದ್ದು ಚರ್ಚೆಗೆ ಗ್ರಾಸವಾಗಿತ್ತು.

ವಿಶ್ಲೇಷಣೆ: ಗೆಳೆಯರನ್ನು ಗೆಲ್ಲೋದು ಹೇಗೆ ಮೋದಿ-ಶಾಗೆ ಪಾಠಗಳಿವೆ!ವಿಶ್ಲೇಷಣೆ: ಗೆಳೆಯರನ್ನು ಗೆಲ್ಲೋದು ಹೇಗೆ ಮೋದಿ-ಶಾಗೆ ಪಾಠಗಳಿವೆ!

"ಬಿಜೆಪಿ ಸೋಲಿನಿಂದಾಗಿ ಪಕ್ಷದ ಕಾರ್ಯಕರ್ತರು ಬೇಸರಪಡುವ ಅಗತ್ಯವಿಲ್ಲ. ಪಕ್ಷ ಎಲ್ಲ ಕಾರ್ಯಕರ್ತರಿಗೂ ಗೌರವ ನೀಡಬೇಕು. ಪಕ್ಷವನ್ನು ಕಾರ್ಪೋರೇಟ್ ಆಫೀಸ್ ರೀತಿಯಲ್ಲಿ ನಡೆಸುವುದು ಸರಿಯಲ್ಲ. ಈ ಫಲಿತಾಂಶ ನಮಗೆ ಎಚ್ಚರಿಕೆಯ ಪಾಠ" ಎಮದು ಸ್ವಾಮಿ ಹೇಳಿದ್ದಾರೆ.

By election results wakeup call for BJP: Swamy

ಒಟ್ಟು 14 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಉತ್ತರಾಖಂಡ್ ನ ತರಾಲಿ ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ಪಲ್ಘರ್ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಉಳಿದೆಲ್ಲ ಕಡೆ ಆಯಾ ರಾಜ್ಯದ ಪ್ರಾದೇಶಿಕ ಪಕ್ಷಗಳೇ ಮೇಲುಗೈ ಸಾಧಿಸಿದ್ದವು. ಮೇ 28 ರಂದು ನಡೆದಿದ್ದ ಉಪಚುನಾವಣೆಗಳ ಫಲಿತಾಂಶ ಮೇ 31 ರಂದು ಹೊರಬಿದ್ದಿತ್ತು.

English summary
Scrutinising the results of four Lok Sabha and 10 assembly seats, where the ruling Bharatiya Janata Party (BJP) only managed to win one-one seats each, senior party leader Subramanian Swamy said it's a wakeup call for them ahead of the 2019 General Elections
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X