ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2022ರ ಮೇವರೆಗೂ ಉಚಿತ ಪಡಿತರ ವಿತರಣೆ: ಕೇಜ್ರಿವಾಲ್

|
Google Oneindia Kannada News

ನವದೆಹಲಿ, ಡಿಸೆಂಬರ್ 20: ಉಚಿತ ಪಡಿತರ ವಿತರಣೆ ವ್ಯವಸ್ಥೆಯನ್ನು 2022ರ ಮೇವರೆಗೂ ವಿಸ್ತರಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುಮಾರು 2,000 ನ್ಯಾಯ ಬೆಲೆ ಅಂಗಡಿಗಳಿದ್ದು, 17, 77 ಲಕ್ಷ ಪಡಿತರ ಕಾರ್ಡ್ ದಾರರು ಮತ್ತು ಸುಮಾರು 72. 78 ಲಕ್ಷ ಫಲಾನುಭವಿಗಳಿದ್ದಾರೆ. ಪಡಿತರ ಅಂಗಡಿಗಳ ಮೂಲಕ ಉಚಿತವಾಗಿ ಪಡಿತರ ನೀಡಲಾಗುತ್ತಿದೆ.

E- KYC: ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರ 'ರೇಷನ್'ಗೆ ಕಿರಿಕಿರಿ!E- KYC: ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರ 'ರೇಷನ್'ಗೆ ಕಿರಿಕಿರಿ!

ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾವೈರಸ್ ಪ್ರಾರಂಭವಾದಾಗಿನಿಂದ ಆರಂಭಿಸಲಾದ ಉಚಿತ ಪಡಿತರ ವಿತರಣೆ ಅವಧಿ ಪೂರ್ಣಗೊಂಡಿದೆ.

Delhi Cabinet Decides To Extend Distribution Of Free Ration Till May Next Year

ಆದ್ದರಿಂದ ಇದನ್ನೂ ಇನ್ನು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಮುಂದಿನ ವರ್ಷದ ಮೇ ತಿಂಗಳವರೆಗೂ ಮುಂದುವರೆಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕೇಜ್ರಿವಾಲ್ ವರ್ಚುಯಲ್ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಹೇಳಿದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಮತ್ತು ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಫಲಾನುಭವಿಗಳಿಗೆ ದೆಹಲಿ ಸರ್ಕಾರ ಉಚಿತವಾಗಿ ಪಡಿತರ ವಿತರಿಸುತ್ತಿದೆ.

ರಾಷ್ಟ್ರ ರಾಜಧಾನಿಯಲ್ಲಿ ಹೊಸ ಯೋಜನೆಯಡಿ ಪಡಿತರ ಚೀಟಿ ಹೊಂದಿಲ್ಲದ 4.5 ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರ ಧಾನ್ಯಗಳನ್ನು ಒದಗಗಿಸಲಾಗುತ್ತಿದೆ. ಪಡಿತರ ಚೀಟಿ ಹೊಂದಿಲ್ಲದವರಿಗೆ ಈ ರಾಜ್ಯ ಸರ್ಕಾರದ ವತಿಯಿಂದ 4 ಕೆಜಿ ಗೋಧಿ ಮತ್ತು 1 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ.

ಈ ಯೋಜನೆಯು ಅಸಂಘಟಿತ ಕಾರ್ಮಿಕರು, ವಲಸೆ ಕಾರ್ಮಿಕರು, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಮತ್ತು ಗೃಹ ಸಹಾಯಕರು ಸೇರಿದಂತೆ ಪಡಿತರ ಚೀಟಿಗಳನ್ನು ಹೊಂದಿರದ ಜನರಿಗೆ ಪೂರೈಸುತ್ತದೆ. ಈ ಯೋಜನೆಯ ಮೂಲಕ ಇಲ್ಲಿಯವರೆಗೆ 4.5 ಲಕ್ಷಕ್ಕೂ ಹೆಚ್ಚು ಜನರಿಗೆ ನೆರವು ನೀಡಲಾಗಿದೆ

ದೆಹಲಿಯಲ್ಲಿ ಪಡಿತರ ಚೀಟಿ ಹೊಂದಿಲ್ಲದವರಿಗೂ ದೆಹಲಿ ಸರ್ಕಾರದ ವತಿಯಿಂದ 4 ಕೆಜಿ ಗೋಧಿ ಮತ್ತು 1 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಹೊಸ ಯೋಜನೆಯಡಿ ಪಡಿತರ ಚೀಟಿ ಹೊಂದಿಲ್ಲದ 4.5 ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತಿದೆ.

ಈ ಯೋಜನೆಯಡಿ ಪಡಿತರ ಚೀಟಿ ಇಲ್ಲದವರಿಗೆ ತಮ್ಮ ಆಧಾರ್ ಕಾರ್ಡ್ ತೋರಿಸುವ ಮೂಲಕ ಐದು ಕಿಲೋಗ್ರಾಂಗಳಷ್ಟು ಆಹಾರ ಧಾನ್ಯಗಳನ್ನು ಪಡೆಯಲು ಅವಕಾಶ ನೀಡುತ್ತದೆ.

ಈ ಯೋಜನೆಯು ಅಸಂಘಟಿತ ಕಾರ್ಮಿಕರು, ವಲಸೆ ಕಾರ್ಮಿಕರು, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಮತ್ತು ಗೃಹ ಸಹಾಯಕರು ಸೇರಿದಂತೆ ಪಡಿತರ ಚೀಟಿಗಳನ್ನು ಹೊಂದಿರದ ಜನರಿಗೆ ಪೂರೈಸುತ್ತದೆ. ಈ ಯೋಜನೆಯ ಮೂಲಕ ಇಲ್ಲಿಯವರೆಗೆ 4.5 ಲಕ್ಷಕ್ಕೂ ಹೆಚ್ಚು ಜನರಿಗೆ ನೆರವು ನೀಡಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ಯೋಜನೆಯಡಿ ಫಲಾನುಭವಿಗಳು ತಲಾ ನಾಲ್ಕು ಕೆಜಿ ಗೋಧಿ ಮತ್ತು ಒಂದು ಕೆಜಿ ಅಕ್ಕಿ ಪಡೆಯುತ್ತಾರೆ. ಜನರಿಗೆ 5,000 ಮೆಟ್ರಿಕ್ ಟನ್ ಪಡಿತರವನ್ನು ಒದಗಿಸಲಾಗಿದ್ದು, ಇನ್ನೂ 5,000 ಮೆಟ್ರಿಕ್ ಟನ್ ವಿತರಣಾ ಕೇಂದ್ರಗಳನ್ನು ತಲುಪಲಿದೆ ಎಂದು ಹೇಳಲಾಗಿದೆ.

ಒಟ್ಟು 280 ದೆಹಲಿ ಸರ್ಕಾರಿ ಶಾಲೆಗಳು, ಪ್ರತಿ ಪುರಸಭೆಯ ವಾರ್ಡ್‌ಗಳಲ್ಲಿ ಒಂದನ್ನು ಆಹಾರ ಧಾನ್ಯಗಳ ವಿತರಣೆಗೆ ಗೊತ್ತುಪಡಿಸಲಾಗಿದೆ.

"ಮುಂದಿನ ದಿನಗಳಲ್ಲಿ ಸಂಪೂರ್ಣ ಪ್ರಕ್ರಿಯೆಯನ್ನು ಸುಗಮವಾಗಿ ಮತ್ತು ತೊಂದರೆಯಿಲ್ಲದೆ ಮಾಡಲು ವಿಷಯಗಳನ್ನು ಇನ್ನಷ್ಟು ಸುವ್ಯವಸ್ಥಿತಗೊಳಿಸಲಾಗುವುದು. ಪಡಿತರ ಜನರ ಹಕ್ಕು ಎಂದು ಆಪ್ ಸರ್ಕಾರ ನಂಬುತ್ತದೆ" ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಇಮ್ರಾನ್ ಹುಸೇನ್ ಹೇಳಿದ್ದಾರೆ.

ಗೆಜೆಟೆಡ್ ರಜಾದಿನಗಳು ಮತ್ತು ಭಾನುವಾರಗಳನ್ನು ಹೊರತುಪಡಿಸಿ ಗೊತ್ತುಪಡಿಸಿದ ಕೇಂದ್ರಗಳಲ್ಲಿ ಎಲ್ಲಾ ಕೆಲಸದ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಪಡಿತರವನ್ನು ಪಡೆಯಬಹುದು ಎಂದು ಹೇಳಲಾಗಿದೆ.

English summary
Chief Minister Arvind Kejriwal on Monday said the Delhi government has decided to extend the distribution of free ration in the city for six months till May 31, 2022. The decision was taken in a Cabinet meeting on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X