ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಚಿವ ಸ್ಥಾನ ಆಕಾಂಕ್ಷಿಗಳ ಲಾಭಿ ಶುರು, ದೆಹಲಿಯಲ್ಲಿ ಅತೃಪ್ತ ಶಾಸಕರು
ನವದೆಹಲಿ, ಆಗಸ್ಟ್ 07: ಆಷಾಢ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ ಸಜ್ಜಾಗಿರುವ ಬೆನ್ನಲ್ಲೆ ಮತ್ತೆ ಸಚಿವ ಸ್ಥಾನ ಆಕಾಂಕ್ಷಿಗಳ ಲಾಭಿ ಶುರುವಾಗಿದ್ದು ಹಲವರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ತಮ್ಮ ಗುಂಪಿನ ಶಾಸಕರನ್ನು ಕರೆದುಕೊಂಡು ದೆಹಲಿಗೆ ತೆರಳಿದ್ದು ಅಲ್ಲಿ ವೇಣುಗೋಪಾಲ್ ಅವರೊಂದಿಗೆ ಮಾತುಕತೆಯಲ್ಲಿ ನಿರತರಾಗಿದ್ದಾರೆ.
ಅತೃಪ್ತ ಶಾಸಕರಿಗೆ ಆಷಾಢದ ಬಳಿಕ ಸಿಹಿ ಸುದ್ದಿ: ಈಶ್ವರ್ ಖಂಡ್ರೆ
ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕೆಲವು ಶಾಸಕರು ಅಜ್ಮೇರ್ ದರ್ಗಾ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಿಂದ ನೇರವಾಗಿ ದೆಹಲಿಗೆ ತೆರಳಿರುವ ಈ ತಂಡ ವೇಣುಗೋಪಾಲ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದೆ.
ರಮೇಶ್ ಜಾರಕಿಹೊಳಿ ಜತೆಯಲ್ಲಿ ಶಾಸಕರಾದ ನಾರಾಯಣ ರಾವ್, ಬಿ.ನಾಗೇಂದ್ರ, ರಹೀಮ್ ಖಾನ್ ಇದ್ದಾರೆ. ಎಂ.ಬಿ.ಪಾಟೀಲ್ ಸಹ ಪ್ರತ್ಯೇಕವಾಗಿ ದೆಹಲಿಗೆ ಬಂದಿದ್ದು, ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
Comments
cabinet expansion delhi mb patil ramesh jarkiholi minister congress ಸಂಪುಟ ವಿಸ್ತರಣೆ ದೆಹಲಿ ಎಂಬಿ ಪಾಟೀಲ ರಮೇಶ್ ಜಾರಕಿಹೊಳಿ ಸಚಿವ ಕಾಂಗ್ರೆಸ್
English summary
Minister Ramesh Jarkiholi and his follower MLAs were Delhi to ask minister post under Sc/St quota. minister post aspirant MB Patil is also in Delhi and he meeting Rahul Gandhi and Venugopal today.
Story first published: Tuesday, August 7, 2018, 7:48 [IST]