ಖಾತೆ ಹಂಚಿಕೆಯಲ್ಲಿ ಭಾರೀ ಬದಲಾವಣೆ, ಸ್ಮೃತಿಗೆ ಶಾಕ್!
ನವದೆಹಲಿ, ಜುಲೈ 05 : ಒಂದಿಲ್ಲೊಂದು ವಿವಾದದಲ್ಲಿ ಸಿಲುಕಿಕೊಳ್ಳುತ್ತಲೇ ಇದ್ದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆ ಮಹತ್ವದ ಖಾತೆಯನ್ನು ಕಳೆದುಕೊಂಡಿದ್ದಾರೆ.
ಮಂಗಳವಾರ 19 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡ ಬಳಿಕ, ಖಾತೆ ಹಂಚಿಕೆಯಲ್ಲಿಯೂ ಭಾರೀ ಬದಲಾವಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸ್ಮೃತಿ ಇರಾನಿ ಅವರ ಖಾತೆಯನ್ನು ಹೊಸದಾಗಿ ಸಂಪುಟ ಸೇರಿಕೊಂಡಿರುವ ಪ್ರಕಾಶ್ ಜಾವ್ಡೇಕರ್ ಅವರಿಗೆ ವಹಿಸಿದ್ದಾರೆ. [ಮೋದಿ ಸಂಪುಟ ಸೇರಿದ 19 ಸಚಿವರ ಸಂಕ್ಷಿಪ್ತ ಪರಿಚಯ]

ಸ್ಮೃತಿ ಇರಾನಿಯವರು ಮಾತ್ರವಲ್ಲ ಕನ್ನಡಿಗ ಡಿವಿ ಸದಾನಂದ ಗೌಡ ಅವರು ಸೇರಿದಂತೆ ಹಲವಾರು ಸಚಿವರ ಖಾತೆಗಳು ಅದಲು ಬದಲು ಮಾಡಲಾಗಿದೆ. ಸ್ಮೃತಿ ಇರಾನಿ ಅವರಿಗೆ ಜವಳಿ ಖಾತೆ ದೊರೆತಿದ್ದರೆ, ಸದಾನಂದ ಗೌಡ ಅವರು ಕಾನೂನು ಸಚಿವ ಸ್ಥಾನ ಕಳೆದುಕೊಂಡಿದ್ದಾರೆ. ಅವರಿಗೆ ಅಷ್ಟೇನೂ ಮಹತ್ವವಲ್ಲದ ಸಾಂಖ್ಯಿಕ ಮತ್ತು ಯೋಜನೆ ಖಾತೆ ದೊರೆತಿದೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರಿಗೆ ಸಂಸದೀಯ ವ್ಯವಹಾರ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಹಾಗೆಯೆ, ರವಿ ಶಂಕರ್ ಪ್ರಸಾದ್ ಅವರು ನಿರ್ವಹಿಸುತ್ತಿದ್ದ ಮಾಹಿತಿ ಮತ್ತು ಪ್ರಸಾರ ಖಾತೆಯನ್ನು ವೆಂಕಯ್ಯ ಅವರಿಗೆ ವಹಿಸಲಾಗಿದೆ.
ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಅನುಪ್ರಿಯಾ ಪಟೇಲ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಎಂಜೆ ಅಕ್ಬರ್ ಅವರಿಗೆ ವಿದೇಶಾಂಗ ವ್ಯವಹಾರ ರಾಜ್ಯ ಸಚಿವ ಜವಾಬ್ದಾರಿಯನ್ನು ವಹಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications