ನಿವೃತ್ತ ಸಿಜೆಐ ರಂಜನ್ ಗೊಗೊಯ್ ವಿರುದ್ಧದ ಸಂಚನ್ನು ಅಲ್ಲಗಳೆಯಲಾಗದು: ಸುಪ್ರೀಂಕೋರ್ಟ್
ನವದೆಹಲಿ, ಫೆಬ್ರವರಿ 18: ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಂಗದ ವಿರುದ್ಧದ ಸಂಚಿನ ಆರೋಪದ ಬಗ್ಗೆ 2019ರಲ್ಲಿ ಆರಂಭಿಸಿದ್ದ ಸುಮೊಟೊ ಪ್ರಕ್ರಿಯೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಮುಕ್ತಾಯಗೊಳಿಸಿದೆ.
'ಗೊಗೊಯ್ ಅವರನ್ನು ಸಿಲುಕಿಸುವ ಸಂಚಿಗೆ ಸಂಬಂಧಿಸಿದ ತನಿಖೆಯಲ್ಲಿ ಎರಡು ವರ್ಷ ಕಳೆದಿದ್ದು, ವಿದ್ಯುನ್ಮಾನ ದಾಖಲೆಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳು ತೀರಾ ಕಡಿಮೆ' ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಗೌಲ್ ನೇತೃತ್ವದ ನ್ಯಾಯಪೀಠ ಹೇಳಿತು.
ಪ್ರಕರಣದ ಸುಮೊಟೊ ವಿಚಾರಣೆಯನ್ನು ಅಂತ್ಯಗೊಳಿಸಿದ ಸುಪ್ರೀಂಕೋರ್ಟ್, ನಿವೃತ್ತ ಸಿಜೆಐ ಗೊಗೊಯ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕ್ರಿಯೆಯ ತನಿಖೆಯನ್ನು ಆಂತರಿಕ ಪ್ರಕ್ರಿಯೆಯು ಈಗಾಗಲೇ ಪೂರ್ಣಗೊಳಿಸಿದೆ. ಹಾಗೆಯೇ ಈಗಿನ ಸಿಜೆಐ ಎಸ್ಎ ಬೊಬ್ಡೆ ನೇತೃತ್ವದ ಮೂವರು ಸದಸ್ಯರ ಸಮಿತಿಯು ಗೊಗೊಯ್ ಅವರನ್ನು ನಿರ್ದೋಷಿ ಎಂದು ವರದಿ ಸಲ್ಲಿಸಿದೆ ಎಂದು ಪೀಠ ಹೇಳಿದೆ.

ನಿವೃತ್ತ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಅವರ ಏಕ ಸದಸ್ಯ ನ್ಯಾಯಾಂಗ ಸಮಿತಿ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿದ್ದು, ಅದರಲ್ಲಿಯೂ ಗೊಗೊಯ್ ವಿರುದ್ಧದ ಸಂಚಿನ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದಿರುವುದಾಗಿ ನ್ಯಾಯಾಲಯ ತಿಳಿಸಿದೆ.
ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿಗೆ ಸಿದ್ಧತೆ ನಡೆಸುವಂತಹ ತೀರ್ಪು ಸೇರಿದಂತೆ ಅನೇಕ ಕಠಿಣ ನಿರ್ಧಾರಗಳನ್ನು ಗೊಗೊಯ್ ತೆಗೆದುಕೊಂಡಿದ್ದರು. ಇವುಗಳ ಕಾರಣದಿಂದ ಅವರ ವಿರುದ್ಧ ಸಂಚು ನಡೆದಿರಬಹುದು ಎಂದು ಗುಪ್ತಚರ ಸಂಸ್ಥೆಯ ನಿರ್ದೇಶಕರು ಪತ್ರದಲ್ಲಿ ತಿಳಿಸಿರುವುದಾಗಿಯೂ ಸುಪ್ರೀಂಕೋರ್ಟ್ ಉಲ್ಲೇಖಿಸಿದೆ.
ಗೊಗೊಯ್ ಅವರನ್ನು ಸಿಲುಕಿಸುವ ಸಂಚಿನ ತನಿಖೆಗೆ ವಾಟ್ಸಾಪ್ ಸಂದೇಶಗಳಂತಹ ವಿದ್ಯುನ್ಮಾನ ದಾಖಲೆಗಳನ್ನು ಪಡೆದುಕೊಳ್ಳಲು ಎ.ಕೆ. ಪಟ್ನಾಯಕ್ ಸಮಿತಿಗೆ ಸಾಧ್ಯವಾಗಿಲ್ಲ ಎಂದು ಹೇಳಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications