ರಾಮ್ ರಹೀಮ್ ಜತೆಗಿನ ಸಂಬಂಧ ಬಗ್ಗೆ ಹನಿಪ್ರೀತ್
ನವದೆಹಲಿ, ಅಕ್ಟೋಬರ್ 03: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಅವರ ದತ್ತುಪುತ್ರಿ ಹನಿಪ್ರೀತ್ ಅವರು ಸುದ್ದಿವಾಹಿನಿವೊಂದಕ್ಕೆ ಸಂದರ್ಶನ ನೀಡಿದ್ದಾರೆ. ರಾಮ್ ರಹೀಮ್ ಜತೆಗಿನ ಸಂಬಂಧದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಡೇರಾ ಸಚ್ಚ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂ ಸಿಂಗ್ ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಹನಿಪ್ರೀತ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಮ್ ರಹೀಂ ಮುಗ್ಧರಾಗಿದ್ದು, ಶುದ್ಧ ವ್ಯಕ್ತಿತ್ವದವರಾಗಿದ್ದಾರೆ. ಅವರು ಕೋರ್ಟ್, ಜೈಲಿಗೆ ಹೋದ ಸಂದರ್ಭದಲ್ಲಿ ಮಗಳಾಗಿ ನಾನು ನನ್ನ ಕೆಲಸ ಮಾಡಿದ್ದೇನೆ. ಅವರ ಹಾಗೂ ನನ್ನ ನಡುವಿನ ಸಂಬಂಧ ಪರಿಶುದ್ಧವಾದ ತಂದೆ, ಮಗಳ ಸಂಬಂಧವಾಗಿದೆ.ಮಾಧ್ಯಮಗಳಲ್ಲಿ ನನ್ನ ಹಾಗೂ ಬಾಬಾ ಸಂಬಂಧದ ಬಗ್ಗೆ ಬಂದ ವರದಿಗಳಿಂದ ಘಾಸಿಯಾಗಿದೆ ಎಂದು ಹನಿಪ್ರೀತ್ ಹೇಳಿದ್ದಾರೆ.
ಬಂಧನ ಭೀತಿಯಲ್ಲಿರುವ ಹನಿಪ್ರೀತ್ ಇನ್ಸಾನ್ ಅವರು ಹರಿಯಾಣ ಪೊಲೀಸರ ಕಣ್ಣಿಗೆ ಬೀಳದೆ ಸುದ್ದಿ ವಾಹಿನಿ ಜತೆ ಮಾತನಾಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ನನಗೆ ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಇದ್ದು, ಪಂಜಾಬ್ ಹಾಗೂ ಹರ್ಯಾಣ ಹೈಕೋರ್ಟಿನಲ್ಲಿ ಕಾನೂನು ಸಮರ ಮುಂದುವರೆಸುತ್ತೇನೆ ಎಂದಿದ್ದಾರೆ.
ನನ್ನ ಮಾಜಿ ಪತಿ ನೀಡಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಲಾರೆ. ನನಗೆ ಜೀವ ಭಯವಿದೆ. ನಾನು ನಿರ್ದೇಶಕಿಯಾಗುವ ಕನಸು ಕಂಡಿದ್ದೆ. ನನ್ನನ್ನು ದೇಶದ್ರೋಹಿ ಎನ್ನುವಂತೆ ಬಿಂಬಿಸಲಾಗಿದೆ. ಇದರಿಂದ ನೊಂದಿದ್ದೇನೆ.ನನ್ನ ತಂದೆ ಜೈಲಿಗೆ ಹೋದ ನಂತರ ಅಸಹಾಯಕಳಾಗಿದ್ದೇನೆ. ನಾನು ಕೋರ್ಟ್ ಗೆ ಹೋಗುತ್ತೇನೆ. ನನಗೆ ನ್ಯಾಯ ಸಿಗುತ್ತದೆ ಎಂದು ಹನಿಪ್ರೀತ್ ತಮ್ಮ ಗೋಳು ತೋಡಿಕೊಂಡಿದ್ದಾರೆ.
ಸೆಪ್ಟೆಂಬರ್ 27ರಂದು ಹನಿಪ್ರೀತ್ ಪರ ವಕೀಲರು ದೆಹಲಿ ಹೈಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಹಾಕಿದ್ದು ತಿರಸ್ಕೃತಗೊಂಡಿದೆ. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಗಲಭೆ, ಘರ್ಷಣೆಗೆ ಕಾರಣರಾದರು ಎಂಬ ಆರೋಪವನ್ನು ಹನಿಪ್ರೀತ್ ಮೇಲೆ ಹಾಕಲಾಗಿದ್ದು, ಲುಕ್ ಔಟ್ ನೋಟಿಸ್ ಕೂಡಾ ಜಾರಿಯಲ್ಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications