ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಮುಂಡೆ ಸಾವು
ನವದೆಹಲಿ, ಜೂನ್ 3: ಇಂದು ಬೆಳಗ್ಗೆ ದೆಹಲಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೇಂದ್ರದ ನೂತನ ಸಚಿವ ಗೋಪಿನಾಥ್ ಮುಂಡೆ ಅವರು ಹೃದಯಾಘಾತಕ್ಕೆ ಒಳಗಾಗಿ ಸಫ್ದರಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
'6.20ಕ್ಕೆ ಅಫಘಾತ ಸಂಭವಿಸಿದೆ. ಅಡ್ವಾಣಿ ನಿವಾಸವಿರುವ ರಸ್ತೆಯಲ್ಲಿ ಅಫಘಾತ ಸಂಭವಿಸಿದೆ. ಸಚಿವ ಗೋಪಿನಾಥ್ ಮುಂಡೆ ಅವರ ಮಾರುತಿ ಸುಜುಕಿ ಎಸೆಕ್ಸ್ 4 ಕಾರಿಗೆ ಹಿಂದಿನಿಂದ ಬಂದ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ. ಹಿಂದಿನ ಸೀಟಿನಲ್ಲಿ ಕುಳಿತಿದ್ದ ಸಚಿವ ಮುಂಡೆ ಕಾರಿನಲ್ಲೇ ಕುಸಿದುಬಿದ್ದಿದ್ದಾರೆ.'

'ತಕ್ಷಣ ಅವರನ್ನು ಕಾರಿನ ಚಾಲಕ ಆಸ್ಪತ್ರೆಗೆ ಸೇರಿಸಿದ್ದಾನೆ. ಆದರೆ ಆಸ್ಪತ್ರೆಗೆ ಬರುವ ವೇಳೆಗೆ ಅವರ ರಕ್ತದೊತ್ತಡ ಸಾಕಷ್ಟು ಏರುಪೇರಾಗಿತ್ತು. ಅವರನ್ನು ಸುಸ್ಥಿತಿಗೆ ತರಲು Cardio Pulmonary Resuscitation (CPR) ಯತ್ನಿಸಿದೆವು. ದೇಹಕ್ಕೆ ಬಾಹ್ಯ ಗಾಯಗಳು ಆಗಿರಲಿಲ್ಲವಾದರೂ ಆಘಾತಕ್ಕೊಳಗಾದ ಸಚಿವರು ಸಾವನ್ನಪ್ಪಿರಬಹುದು' ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೋದಿ ಟ್ವೀಟ್:
Extremely saddened & shocked by the demise of my friend & colleague Gopinath Munde ji. His demise is a major loss for the Nation & the Govt.
— Narendra Modi (@narendramodi) June 3, 2014 ಹಿಂದಿನ ಸುದ್ದಿ: ಕೇಂದ್ರದ ನೂತನ ಸಚಿವ ಗೋಪಿನಾಥ್ ಮುಂಡೆ ಅವರ ಕಾರು ಇಂದು ಬೆಳಗ್ಗೆ ಅಪಘಾತಕ್ಕೀಡಾಗಿದ್ದು ಸಚಿವರ ಸ್ಥಿತಿ ಗಂಭೀರವಾಗಿದೆ. ತಕ್ಷಣ ಅವರನ್ನು ದಿಲ್ಲಿಯ ಸಫ್ದರಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. (ಸಚಿವ ಮುಂಡೆ ಸಾವು, ಬುಧವಾರ ಅಂತಿಮ ಸಂಸ್ಕಾರ)
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ, ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರು ತೀವ್ರವಾಗಿ ಗಾಯಗೊಂಡಿದ್ದು, ಅವರಿಗೆ ಸಫ್ದರಜಂಗ್ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. (ಮುಂಡೆ ಸಾವು: ಇದೇನಿದು ಶೋಭಾ ಡೆ ಸಂಸ್ಕಾರ!?)
ಸಚಿವ ಮುಂಡೆ ಅವರು ಮುಂಬೈಗೆ ಹೋಗಲು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದಾಗ ಮೋತಿ ಭಾಗ್ ಬಳಿ ಈ ಅಪಘಾತ ಸಂಭವಿಸಿದೆ. ಸಚಿವರು ಬೆಳಗಿನ ಸಮಯವೆಂದು ಭದ್ರತೆಯಿಲ್ಲದೆ ಕಾರಿನಲ್ಲಿ ಹೊರಟಿದ್ದರು ಎಂದು ತಿಳಿದುಬಂದಿದೆ.
ಅಪಘಾತವು ಇಂದು ಬೆಳಗ್ಗೆ 6 ಗಂಟೆಯಲ್ಲಿ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications