ಲೇಖಕಿ ಅರುಂಧತಿ ರಾಯ್ ಮೇಲೆ ಕೇಸ್ ದಾಖಲು
ನವದೆಹಲಿ, ಡಿಸೆಂಬರ್ 27: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಗೆ ಜನರು ಸುಳ್ಳು ಮಾಹಿತಿ ನೀಡಬೇಕೆಂದು ಎಂದು ಬಹಿರಂಗವಾಗಿ ಕರೆ ನೀಡಿರುವ ಲೇಖಕಿ ಅರುಂಧತಿ ರಾಯ್ ಮೇಲೆ ಸುಪ್ರೀಂ ಕೋರ್ಟ್ ವಕೀಲ ರಾಜೀವ್ ಕುಮಾರ್ ರಂಜನ್ ದೆಹಲಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
"ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮಾಡುವುದರಿಂದ ರಾಷ್ಟ್ರೀಯ ಪೌರತ್ವ ನೋಂದಣಿಗೆ ಡೇಟಾ ಬೇಸ್ ಆಗಿ ಕಾರ್ಯನಿರ್ವಹಿಸುತ್ತದೆ, ನಿಮ್ಮ ವೈಯಕ್ತಿಕ ಮಾಹಿತಿ ಸೋರಿಕೆಯಾಗದಂತೆ ತಡೆಯಲು, ಅಧಿಕಾರಿಗಳು ನಿಮ್ಮ ಮನೆಗೆ ಬಂದಾಗ ಸತ್ಯವನ್ನು ಮರೆಮಾಚಿ, ಸುಳ್ಳು ಹೆಸರು ಹಾಗೂ ಮಾಹಿತಿಯನ್ನು ಅವರಿಗೆ ಕೊಡಿ" ಎಂದು ಅರುಂಧತಿ ರಾಯ್ ಹೇಳಿಕೆ ನೀಡಿದ್ದರು.
"ಈ ದೇಶದ ಪ್ರಧಾನ ಮಂತ್ರಿ ನಮಗೆ ಸುಳ್ಳು ಹೇಳುವುದು ಸರಿಯೇ, ಆ ಸುಳ್ಳುಗಳಿಗೆ ಪ್ರತಿಕ್ರಿಯೆಯಾಗಿ ನಾನು ಎನ್ ಪಿಆರ್ ಗಾಗಿ ನಮ್ಮ ವೈಯಕ್ತಿಕ ಡೇಟಾವನ್ನು ಸಂಗ್ರಹಿಸಲು ಬಂದಾಗ ನಾವು ಒಟ್ಟಾಗಿ ಹಾಸ್ಯಾಸ್ಪದ ಮಾಹಿತಿಯನ್ನು ನಮೂದಿಸಬೇಕು ಎಂದು ನಾನು ಹೇಳಿದ್ದೇನೆ. ನಾನು ಪ್ರಸ್ತಾಪಿಸುತ್ತಿರುವುದು ನಗುವಿನೊಂದಿಗೆ ಕಾನೂನಿಗೆ ಅಸಹಕಾರ ನೀಡಿ" ಎಂದು ಅವರು ಹೇಳಿದರು.

ಈ ಬಗ್ಗೆ ದೆಹಲಿಯಲ್ಲಿ ಸುಪ್ರೀಂ ಕೋರ್ಟ್ ವಕೀಲರು, ಅರುಂಧತಿ ರಾಯ್ ಅವರು ಉದ್ದೇಶಪೂರ್ವಕವಾಗಿ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಅರುಂಧತಿ ರಾಯ್ ಅವರನ್ನು ತಕ್ಷಣವೇ ಬಂಧಿಸಬೇಕೆಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಇದರಿಂದ ಲೇಖಕಿ ಅರುಂಧತಿ ರಾಯ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದಿತ್ತು. ಅದರ ಜೊತೆಗೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಯನ್ನು ಜಾರಿಗೆ ತರುವುದಾಗಿ ಹೇಳಿತ್ತು.
ಎನ್ಆರ್ ಸಿ ಜಾರಿಗೆ ತರುವ ಮೊದಲು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಜಾರಿಗೆ ತರಲಾಗುತ್ತದೆ ಎಂದು ಹೇಳಿತ್ತು. ಇದನ್ನು ವಿರೋಧಿಸಿ ಲೇಖಕಿ ಅರುಂಧತಿ ರಾಯ್ ಅವರು ನಾಗರೀಕರು ನಗುನಗುತ್ತಾ ಅಸಹಕಾರವನ್ನು ಎನ್ ಪಿಆರ್ ಗೆ ನೀಡಿ ಎಂದು ಬಹಿರಂಗವಾಗಿ ಜನರಿಗೆ ಕರೆ ನೀಡಿದ್ದರಿಂದ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications