ಸಿಬಿಐ ವಿವಾದ: ರಾಕೇಶ್ ಅಸ್ಥಾನಾ ವಿರುದ್ಧದ ಕೇಸುಗಳೇ ನಾಪತ್ತೆ!
ನವದೆಹಲಿ, ಡಿಸೆಂಬರ್ 21: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ನಡುವಿನ ಜಗಳ ಸಿಬಿಐನ ಗೌರವವನ್ನು ಬೀದಿಗೆ ತಂದಿದೆ.
ಕೇವಲ ಮೂರು ತಿಂಗಳ ಹಿಂದೆ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅವರ ವಿರುದ್ಧ ಆರು ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ತಿಳಿಸಿತ್ತು. ಆದರೆ, ಈಗ ಆಸ್ಥಾನಾ ಅವರ ವಿರುದ್ಧ ಇರುವುದು ಕೇವಲ ಒಂದೇ ಒಂದು ಪ್ರಕರಣ ಎಂದು ಮಾಹಿತಿ ನೀಡಿದೆ ಎಂಬುದಾಗಿ 'ದಿ ಇಂಡಿಯನ್ ಎಕ್ಸ್ ಪ್ರೆಸ್' ವರದಿ ಮಾಡಿದೆ.
ಪತ್ರಿಕೆ ಸಲ್ಲಿಸಿದ್ದ ಮಾಹಿತಿ ಹಕ್ಕು ಅರ್ಜಿಯಲ್ಲಿ ಸಿಬಿಐ, ಮೋಯಿನ್ ಖುರೇಷಿ ಲಂಚ ಪ್ರಕರಣದಲ್ಲಿ ಹೈದರಾಬಾದ್ ಉದ್ಯಮಿ ಸನಾ ಸತೀಶ್ ಬಾಬು ಅವರಿಂದ ಮೂರು ಕೋಟಿ ರೂ. ಪಡೆದುಕೊಂಡ ಆರೋಪದಡಿ ಅಕ್ಟೋಬರ್ 15ರಂದು ದಾಖಲಾದ ಎಫ್ ಐಆರ್ ಹೊರತುಪಡಿಸಿದರೆ ಬೇರೆ ಯಾವ ಪ್ರಕರಣವನ್ನೂ ತನಿಖೆ ನಡೆಸುತ್ತಿಲ್ಲ ಎಂದು ಸಿಬಿಐ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಸಿಬಿಐ ಆರು ಪ್ರಕರಣಗಳ ತನಿಖೆ ನಡೆಯುತ್ತಿರುವುದಾಗಿ ತಿಳಿಸಿತ್ತು. ಅವುಗಳ ವಿವರ ನೀಡುವಂತೆ ಪತ್ರಿಕೆ ಅಕ್ಟೋಬರ್ 23ರಂದು ಆರ್ ಟಿಐ ಅರ್ಜಿ ಸಲ್ಲಿಸಿತ್ತು.
ನವೆಂಬರ್ 2ರಂದು ಪ್ರತಿಕ್ರಿಯೆ ನೀಡಿದ್ದ ಸಿಬಿಐ, ಆಸ್ಥಾನಾ ಅವರ ವಿರುದ್ಧದ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 120 ಬಿ (ಅಪರಾಧ ಸಂಚು) ಅಡಿಯಲ್ಲಿ ದಾಖಲಾದ ಪ್ರಕರಣದ ಮಾಹಿತಿಯನ್ನು ಮಾತ್ರ ಒದಗಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications