ಕರ್ನಾಟಕದಲ್ಲಿ ಜೂಜು ಕೇಂದ್ರ, ಸೀಕ್ರೆಟ್ ತೆರೆದಿಟ್ಟ ಸಚಿವ ಸಿ.ಟಿ.ರವಿ
ನವದೆಹಲಿ, ಫೆಬ್ರವರಿ.23: ಕರ್ನಾಟಕದಲ್ಲಿ ಜೂಜು ಕೇಂದ್ರ (ಕ್ಯಾಸಿನೋ) ಆರಂಭಿಸಲು ಸರ್ಕಾರವೇ ಚಿಂತನೆ ನಡೆಸಿರುವ ಬಗ್ಗೆ ಚರ್ಚೆ ಶುರುವಾಗಿದೆ. ರಾಜ್ಯದಲ್ಲಿ ಕ್ಯಾಸಿನೋ ಆರಂಭಿಸಲು ಕಾರಣ ಏನು ಎಂಬುದನ್ನು ರಾಜ್ಯ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಿದೆ ಎಂದರು. ಇಲ್ಲಿನ ಕಲೆ, ಸಂಸ್ಕೃತಿಯು ವಿದೇಶಿಗರನ್ನು ಆಕರ್ಷಿಸುತ್ತಿದೆ. ಆದರೆ, ರಾಜ್ಯದ ಜನರೇ ನೆರೆರಾಜ್ಯ ಮತ್ತು ವಿದೇಶಗಳಿಗೆ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಇದಕ್ಕೆ ಕಾರಣವಾಗಿರುವುದೇ ಅಲ್ಲಿರುವ ಕ್ಯಾಸಿನೋ ಕೇಂದ್ರಗಳು ಎಂದು ಸಿ.ಟಿ.ರವಿ ಹೇಳಿದ್ದಾರೆ.
ಜೂಜು ಪ್ರಿಯರಿಗೆ ಬಿಜೆಪಿ ಸರ್ಕಾರ ಕೊಡುತ್ತಿರುವ ಕೊಡುಗೆಯಾದರೂ ಏನು?
ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ಯಾಸಿನೋ ಕೇಂದ್ರಗಳು ಬಲುಮುಖ್ಯ ಪಾತ್ರವನ್ನು ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಂತಹ ಕ್ಯಾಸಿನೋ ಕೇಂದ್ರಗಳನ್ನು ಆರಂಭಿಸಿದರೆ, ರಾಜ್ಯದಲ್ಲಿರುವ ಹಣವು ಬೇರೆ ರಾಜ್ಯ ಮತ್ತು ರಾಷ್ಟ್ರಕ್ಕೆ ಹರಿದು ಹೋಗುವುದನ್ನು ತಪ್ಪಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಕ್ಯಾಸಿನೋಗಾಗಿ ವಿದೇಶಕ್ಕೆ ಹೋಗುತ್ತಾರಾ ಭಾರತೀಯರು?:
ಬಹುತೇಕ ಭಾರತೀಯರು ಕ್ಯಾಸಿನೋ ಆಟಕ್ಕಾಗಿ ಸಿಂಗಾಪುರ್ ನಂತಾ ದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಾರೆ. ಇನ್ನು, ಕರ್ನಾಟಕದ ಲಕ್ಷ ಲಕ್ಷ ಜನರು ಇದೇ ಕ್ಯಾಸಿನೋ ಆಟಕ್ಕಾಗಿ ಗೋವಾಗೆ ಪ್ರವಾಸ ಕೈಗೊಳ್ಳುತ್ತಾರೆ. ಹೀಗೆ ಪ್ರವಾಸಿಗರನ್ನು ಆಕರ್ಷಿಸುವ ಕೇಂದ್ರವನ್ನು ರಾಜ್ಯದಲ್ಲಿ ಆರಂಭಿಸಿದರೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ನೆರವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಆರ್ಥಿಕ ವಹಿವಾಟು ಹೆಚ್ಚಾಗುತ್ತದೆ ಎಂದು ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
-
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications