ಅರವಿಂದ್ ಕೇಜ್ರಿವಾಲ್ ಪರಮಾಪ್ತನನ್ನು ಬಂಧಿಸಿದ ಸಿಬಿಐ
ನವದೆಹಲಿ, ಜುಲೈ 04: ದೆಹಲಿ ಮುಖ್ಯಮಂತ್ರಿ ಆರವಿಂದ್ ಕೇಜ್ರಿವಾಲ್ ಅವರ ಪರಮಾಪ್ತ ಅಧಿಕಾರಿ (Principal Secretary) ರಾಜೇಂದ್ರ ಕುಮಾರ್ ಅವರನ್ನು ಸಿಬಿಐ ತಂಡ ಸೋಮವಾರ ಸಂಜೆ ಬಂಧಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಂದ್ರ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.
ಕಳೆದ ವರ್ಷ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಸೇರಿದಂತೆ ಪ್ರಧಾನ ಕಾರ್ಯದರ್ಶಿ ಕಚೇರಿ ಮೇಲೆ ದಾಳಿ ನಡೆಸಿದ್ದ ಸಿಬಿಐ ತಂಡ, ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

ಆಶೀಶ್ ಜೋಶಿ ಎಂಬ ಅಧಿಕಾರಿ ಅವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಸಿಬಿಐ ತಂಡ ನೇರವಾಗಿ ಕೇಜ್ರಿವಾಲ್ ಅವರ ಆಪ್ತ ರಾಜೇಂದ್ರ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಿತ್ತು.
ದೆಹಲಿ ಸರ್ಕಾರದ ಅನೇಕ ಯೋಜನೆಗಳನ್ನು ಬೇನಾಮಿ ಕಂಪನಿಗಳಿಗೆ ಯಾವುದೇ ಟೆಂಡರ್ ಕರೆಯದೆ ಮಂಜೂರು ಮಾಡಿದ ಆರೋಪ ಹೊಂದಿದ್ದಾರೆ.












Click it and Unblock the Notifications