3 ತಿಂಗಳ ಬಳಿಕ ಕಚೇರಿಗೆ ಮರಳಿದ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ
ನವದೆಹಲಿ, ಜನವರಿ 9: ಮೂರು ತಿಂಗಳ ಬಳಿಕ ಮೊದಲ ಬಾರಿಗೆ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ದೆಹಲಿಯಲ್ಲಿರುವ ಸಿಬಿಐ ಕಚೇರಿಗೆ ಗೆಲುವಿನ ಖುಷಿಯೊಂದಿಗೆ ಬುಧವಾರ ಹಾಜರಾದರು.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಲೋಕ್ ವರ್ಮಾ ಅವರನ್ನು ಅಕ್ಟೋಬರ್ 23ರಂದು ಕೇಂದ್ರ ಸರ್ಕಾರ ರಜೆಯ ಮೇಲೆ ಕಳುಹಿಸಿತ್ತು. ಕೇಂದ್ರದ ನಿರ್ಧಾರದ ವಿರುದ್ಧ ಕಾನೂನು ಸಮರ ನಡೆಸಿದ್ದ ಅಲೋಕ್ ವರ್ಮಾ ಪರ ಸುಪ್ರೀಂಕೋರ್ಟ್ ತೀರ್ಪು ನೀಡಿ ಅವರನ್ನು ಮರುನಿಯೋಜನೆ ಮಾಡಿತ್ತು.
ಸಿಬಿಐನ ಮಧ್ಯಂತರ ಮುಖ್ಯಸ್ಥರಾಗಿ ನೇಮಕವಾಗಿದ್ದ ಎಂ. ನಾಗೇಶ್ವರ ರಾವ್ ಅವರು ಅಲೋಕ್ ವರ್ಮಾ ಅವರನ್ನು ಸ್ವಾಗತಿಸಿದರು.

ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಬಳಿಕ ಅಕ್ಟೊಬರ್ 24ರ ರಾತ್ರಿ 2 ಗಂಟೆಯಿಂದ ಸಿಬಿಐ ಪ್ರಧಾನ ಕಚೇರಿಯ 10ನೇ ಮಹಡಿಯಲ್ಲಿರುವ ಅವರ ಕಚೇರಿಗೆ ಬೀಗ ಜಡಿದು ಸೀಲ್ ಮಾಡಲಾಗಿತ್ತು.
ತಮ್ಮ ಕಚೇರಿಯಲ್ಲಿ ಮರಳಿ ಕುರ್ಚಿಯ ಮೇಲೆ ಕುಳಿತುಕೊಂಡರೂ ವರ್ಮಾ ಅವರಿಗೆ ಈ ಹಿಂದೆ ಇದ್ದ ನಿರ್ಧಾರ ಕೈಗೊಳ್ಳುವ ಅಧಿಕಾರಿಗಳು ಇಲ್ಲ. ಪ್ರಧಾನಿ, ವಿರೋಧ ಪಕ್ಷದ ನಾಯಕ, ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅವರನ್ನು ಒಳಗೊಂಡ ಆಯ್ಕೆ ಸಮಿತಿ ವರ್ಮಾ ಅವರ ಅಧಿಕಾರದ ಬಗ್ಗೆ ಸಮಾಲೋಚನೆ ನಡೆಸಲಿದೆ. ಒಂದು ವಾರದ ಒಳಗೆ ಈ ಸಮಿತಿ ತನ್ನ ವರದಿ ಸಲ್ಲಿಸಲಿದೆ. ಅಲ್ಲಿಯವರೆಗೂ ವರ್ಮಾ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಂತೆ ಇಲ್ಲ.
ಆದರೆ, ವರ್ಮಾ ಅವರು ಈಗಲೂ ಎಫ್ಐಆರ್ಗಳನ್ನು ದಾಖಲು ಮಾಡಲು ಮತ್ತು ವರ್ಗಾವಣೆಯ ಕಾರ್ಯಗಳನ್ನು ಮಾಡಲು ಅವಕಾಶವಿದೆ ಎನ್ನಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications