ಸಿಬಿಐ ವಿವಾದ: ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದ ಸಿವಿಸಿ
ನವದೆಹಲಿ, ನವೆಂಬರ್ 12: ಸಿಬಿಐ ನಿರ್ದೇಶಕ ಮತ್ತು ವಿಶೇಷ ನಿರ್ದೇಶಕರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿರುವ ಕೇಂದ್ರ ಸರ್ಕಾರದ ಕ್ರಮ ಮತ್ತು ಸಿಬಿಐನ ಆಯಕಟ್ಟಿನ ಹುದ್ದೆಯಲ್ಲಿರುವವರ ವಿರುದ್ಧ ಕೇಳಿ ಬಂದ ಆರೋಪದ ಕುರಿತು ಕೇಂದ್ರ ವಿಚಕ್ಷಣಾ ದಳ(ಸಿವಿಸಿ) ಸುಪ್ರೀಂ ಕೋರ್ಟಿಗೆ ವರದಿ ನೀಡಿದೆ.
ಅಲೋಕ್ ವರ್ಮಾ ವಿರುದ್ಧ ಕೇಳಿಬಂದ ಆರೋಪಕ್ಕೆ ಸಂಬಂಧಿಸಿದಂತೆರ್ಟಿರ್ತಿಗೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸೀಲ್ ಮಾಡಲಾದ ಲಕೋಟೆಯಲ್ಲಿ ಸಿವಿಸಿಯು ಪ್ರಾಥಮಿಕ ತನಿಖಾ ವರದಿಯನ್ನು ನೀಡಿದೆ.
ಅಕ್ಟೋಬರ್ 26 ರಂದು ವರದಿ ತಯಾರಿಸಲು ಸಿವಿಸಿಗೆ ಎರಡು ವಾರಗಳ ಗಡುವನ್ನು ಸುಪ್ರೀಂ ಕೋರ್ಟ್ ನೀಡಿತ್ತು. ಈ ವರದಿಯನ್ನು ಆಧರಿಸಿ, ನವೆಂಬರ್ 16 ರಂದು ಕೇಂದ್ರ ಸರ್ಕಾರ ಸಿಬಿಐ ವಿವಾದದ ಕುರಿತು ವಿಚಾರಣೆ ನಡೆಸಲಿದೆ.

ಸಿಬಿಐ ನಿರ್ದೇಶಕ ಮತ್ತು ವಿಶೇಷ ನಿರ್ದೇಶಕರು ಪರಸ್ಪರ ಭ್ರಷ್ಟಾಚಾರ ಆರೋಪದಲ್ಲಿ ತೊಡಗಿಕೊಂಡ ಹಿನ್ನೆಲೆಯಲ್ಲಿ ಈ ಇಬ್ಬರನ್ನೂ ಕಡ್ಡಾಯ ರಜೆಯ ಮೇಲೆ ಕಳಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು.












Click it and Unblock the Notifications