ಸುಶಾಂತ್ ಸಿಂಗ್ ಆತ್ಮಹತ್ಯೆ ಬಗ್ಗೆ ಸಿಬಿಐ ತನಿಖೆ?
ನವದೆಹಲಿ, ಜುಲೈ 15 : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಗೆ ಬಂದಿದ್ದ ಮನವಿಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ರವಾನೆ ಮಾಡಿದ್ದಾರೆ.
ಬಿಹಾರದ ಮಾಜಿ ಸಂಸದ ಪಪ್ಪು ಯಾದವ್ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದರು. ಈ ಪತ್ರವನ್ನು ಅಮಿತ್ ಶಾ ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.
ಮಂಗಳವಾರ ಅಮಿತ್ ಶಾ ಪತ್ರವನ್ನು ಕಳುಹಿಸಿಕೊಟ್ಟಿರುವ ಚಿತ್ರಗಳನ್ನು ಪಪ್ಪು ಯಾದವ್ ಟ್ವೀಟ್ ಮಾಡಿದ್ದಾರೆ. ಹಲವು ನಟರು, ಸಂಘ ಸಂಸ್ಥೆಗಳು ಸುಶಾಂತ್ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದವು. ಈ ಕುರಿತು ಗೃಹ ಇಲಾಖೆ ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ಜೂನ್ 14ರಂದು ಮುಂಬೈನ ಅಪಾರ್ಟ್ಮೆಂಟ್ನಲ್ಲಿ ಸುಶಾಂತ್ ಸಿಂಗ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಪತ್ರವನ್ನು ನಿರ್ಲಕ್ಷಿಸಬಾರದು ಎಂದು ಪಪ್ಪು ಯಾದವ್ ಅಮಿತ್ ಶಾಗೆ ಮನವಿ ಮಾಡಿದ್ದರು.
ಪ್ರಸ್ತುತ ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ. 30 ಸಾಕ್ಷಿಗಳ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ. ಇವರಲ್ಲಿ ಸುಶಾಂತ್ ಕುಟುಂಬ ಸದಸ್ಯರು, ಸ್ನೇಹಿತರು, ಸಿನಿಮಾ ಕ್ಷೇತ್ರದ ಹಲವು ಜನರು ಸೇರಿದ್ದಾರೆ.
अमित शाह जी आप चाहें तो एक मिनट में सुशांत मामले की CBI जांच हो सकती है। इसे टालें नहीं!
— Sewak Pappu Yadav (@pappuyadavjapl) July 14, 2020
बिहार के गौरव फ़िल्म अभिनेता सुशांत सिंह राजपूत जी की संदिग्ध मृत्यु की CBI जांच के लिए केंद्रीय गृह मंत्री जी को पत्र लिख आग्रह किया था।
उन्होंने कार्रवाई के लिए पत्र अग्रसारित कर दिया है। pic.twitter.com/MWsFBFNN8p












Click it and Unblock the Notifications