ಚಿದಂಬರಂಗೆ ಜಾಮೀನು ನೀಡಿದರೆ ತಪ್ಪು ಸಂದೇಶ ರವಾನೆ: ಸಿಬಿಐ
ನವದೆಹಲಿ, ಸೆಪ್ಟೆಂಬರ್ 20: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಸದ್ಯ ಜೈಲಿನಲ್ಲಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿದೆ.
ತಿಹಾರ್ ಜೈಲಿನಲ್ಲಿರುವ ಚಿದಂಬರಂ ಅವರು ಜಾಮೀನಿಗಾಗಿ ಕೋರಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಸೆ. 23ರಂದು ವಿಚಾರಣೆಗೆ ಬರಲಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಿಬಿಐ ಪ್ರತಿಕ್ರಿಯೆ ನೀಡಿದೆ.
'ಪಿ. ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಅಕ್ರಮ ಪ್ರತಿಫಲಕ್ಕೆ ಬೇಡಿಕೆ ಇರಿಸಿದ್ದರು. ಇಂದ್ರಾಣಿ ಮುಖರ್ಜಿ ಮತ್ತು ಪ್ರತಿಮ್ ಮುಖರ್ಜಿ ಅವರು ಆರೋಪಿ ಹಾಗೂ ಅವರ ಮಗ ಕಾರ್ತಿ ಚಿದಂಬರಂ ಅವರಿಗೆ ಭಾರತ ಮತ್ತು ವಿದೇಶದಿಂದ ಅಕ್ರಮ ಹಣವನ್ನು ಪಾವತಿ ಮಾಡಿದ್ದಾರೆ ಎನ್ನುವುದು ಇದುವರೆಗೆ ನಡೆದಿರುವ ವಿಚಾರಣೆಗಳಿಂದ ತಿಳಿದುಬಂದಿದೆ' ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

'ಚಿದಂಬರಂ ಅವರು ಮಾಡಿರುವ ಹಣದ ದುರುಪಯೋಗದ ಮಟ್ಟ ಮತ್ತು ಸಾರ್ವಜನಿಕ ಕಚೇರಿಯ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡಿರುವ ರೀತಿ ಅವರು ಯಾವುದೇ ನಿರಾಳತೆ ಪಡೆಯುವ ಹಕ್ಕನ್ನು ಕಸಿದುಕೊಂಡಿವೆ' ಎಂದು ಸಿಬಿಐ ಹೇಳಿದೆ.
ಚಿದಂಬರಂ ಅವರಿಗೆ ಜಾಮೀನು ನೀಡುವುದು ಭ್ರಷ್ಟಾಚಾರ ವಿಚಾರಗಳಿಗೆ ಸಂಬಂಧಿಸಿದಂತೆ ತಪ್ಪು ಸಂದೇಶ ನೀಡುತ್ತದೆ. ಏಕೆಂದರೆ ಅವರದು ಸಾರ್ವಜನಿಕ ನಂಬಿಕೆಗೆ ದ್ರೋಹ ಎಸಗಿದ ಸ್ಪಷ್ಟ ಪ್ರಕರಣವಾಗಿದೆ ಎಂದು ವಾದಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications