ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕೋರ್ಟಿನ ಮೂಲೆಯಲ್ಲಿ ಕೂರಿ', ನಾಗೇಶ್ವರ್ ರಾವ್ ಗೆ ಸುಪ್ರೀಂ ವಿಲಕ್ಷಣ ಶಿಕ್ಷೆ!

|
Google Oneindia Kannada News

ನವದೆಹಲಿ, ಫೆಬ್ರವರಿ 12: ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸಿಬಿಐ ನ ಮಾಜಿ ಮಧ್ಯಂತರ ನಿರ್ದೇಶಕ ನಾಗೇಶ್ವರ್ ರಾವ್ ಅವರಿಗೆ ಸುಪ್ರೀಂ ಕೋರ್ಟ್ ವಿಲಕ್ಷಣ ಶಿಕ್ಷೆಯೊಂದನ್ನು ನೀಡಿದೆ.

ಬಿಹಾರದ ಮುಜಾಫರ್ಪುರದಲ್ಲಿ ನಡೆದ ಶೆಲ್ಟರ್ ಹೋಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲು ನಾಗೇಶ್ವರ್ ರಾವ್ ತಾವು ಸಿಬಿಐ ನಿರ್ದೇಶಕರಾಗಿದ್ದ ಸಮಯದಲ್ಲಿ ಆದೇಶ ಹೊರಡಿಸಿದ್ದರು.

ನಿಮ್ಮನ್ನು ದೇವರೇ ಕಾಪಾಡಬೇಕು: ಸಿಬಿಐ ಮಾಜಿ ಅಧಿಕಾರಿ ಮೇಲೆ ಸುಪ್ರೀಂಕೋರ್ಟ್ ಸಿಡಿಮಿಡಿನಿಮ್ಮನ್ನು ದೇವರೇ ಕಾಪಾಡಬೇಕು: ಸಿಬಿಐ ಮಾಜಿ ಅಧಿಕಾರಿ ಮೇಲೆ ಸುಪ್ರೀಂಕೋರ್ಟ್ ಸಿಡಿಮಿಡಿ

ಆದರೆ ಸಿಬಿಐ ನ ಮಾಜಿ ಮುಖ್ಯಸ್ಥ ಅಲೋಕ್ ಕುಮಾರ್ ಅವರು ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಸಮಯದಲ್ಲಿ, ಹಂಗಾಮಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ನಾಗೇಶ್ವರ್ ರಾವ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಮಹತ್ವದ ನಿರ್ಣಯ ತೆಗೆದುಕೊಳ್ಳುವಂತಿಲ್ಲ ಎಂದು ಅವರನ್ನು ನೇಮಿಸಿದ ನಂತರ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಆದರೆ ಆ ಆದೇಶವನ್ನೂ ಲೆಕ್ಕಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ನಾಗೇಶ್ವರ್ ರಾವ್ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

CBIs Nageshwar Rao guilty of contempt, SC orders unusual punishment

ಸಿಬಿಐ ಮಾಜಿ ಅಧಿಕಾರಿ ನಾಗೇಶ್ವರ ರಾವ್ ಆಸ್ತಿಗಳ ಮೇಲೆ ಪೊಲೀಸರ ದಾಳಿಸಿಬಿಐ ಮಾಜಿ ಅಧಿಕಾರಿ ನಾಗೇಶ್ವರ ರಾವ್ ಆಸ್ತಿಗಳ ಮೇಲೆ ಪೊಲೀಸರ ದಾಳಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ, ನಾಗೇಶ್ವರ್ ರಾವ್ ನ್ಯಾಯಾಂಗ ನಿಂದನೆ ಮಾಡಿದ್ದು ಸತ್ಯ ಎಂದಿದ್ದು, ಅವರಿಗೆ 1 ಲಕ್ಷ ರೂ. ದಂಡ ವಿಧಿಸಿದೆ. ಮತ್ತು ಒಂದು ದಿನ ಕೂರ್ಟಿನ ಮೂಲೆಯಲ್ಲೇ ಕುಳಿತಿರುವಂತೆ ಶಿಕ್ಷೆ ನೀಡಿದೆ.

English summary
Chief Justice of India Ranjan Gogoi says 'for contempt of court we impose a fine of Rs 1 lakh and direct him(former CBI interim director M Nageshwar Rao) to sit in one corner of the court till the court rises for the day'
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X