CBSE ಬೋರ್ಡ್ ಪರೀಕ್ಷೆಗಳು ನಡೆಯುತ್ತೋ? ಇಲ್ಲವೋ? : ಇಂದೇ ನಿರ್ಧಾರ
ದೆಹಲಿ, ಜೂನ್ 24: ರಾಷ್ಟ್ರ ರಾಜಧಾನಿಯಲ್ಲಿ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ಮತ್ತು ಉಳಿದ 12 ನೇ ತರಗತಿ ಪರೀಕ್ಷೆಗಳನ್ನು ಮರು ನಿಗದಿಪಡಿಸುವ ಬಗ್ಗೆ, ಐಐಟಿಗಳಿಗೆ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ವೈದ್ಯಕೀಯ ಕಾಲೇಜುಗಳಿಗೆ ನೀಟ್ ಪರೀಕ್ಷೆಯನ್ನು ಯಾವಾಗ ನಡೆಸಬೇಕು ಎಂಬ ಎಲ್ಲಾ ನಿರ್ಧಾರಗಳನ್ನು ಸರ್ಕಾರ ಇದು ಸಂಜೆ ವೇಳೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
Recommended Video
ಕೊರೊನಾವೈರಸ್ ಬಿಕ್ಕಟ್ಟಿನಿಂದಾಗಿ ಸಿಬಿಎಸ್ಇಯ 10 ಮತ್ತು 12 ನೇ ತರಗತಿಗಳ ಉಳಿದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ವಿಚಾರಣೆ ನಡೆಸಲಾಯಿತು. ಇದರಲ್ಲಿ ಕೇಂದ್ರ ಸರ್ಕಾರ ಮತ್ತು ಸಿಬಿಎಸ್ಇ ಮಂಡಳಿ ಈ ಕುರಿತು ಅಧಿಕಾರಿಗಳ ಸಭೆ ನಡೆಯುತ್ತಿದೆ ಮತ್ತು ಬುಧವಾರ ಸಂಜೆ ವೇಳೆಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ. ಇದರ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
ವಿಚಾರಣೆಯ ಸಮಯದಲ್ಲಿ ಸಿಬಿಎಸ್ಸಿ ಮಂಡಳಿಯ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ಮೊಹರು ಮಾಡಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ಇದರ ನಂತರ ಸಿಬಿಎಸ್ಇ ಮತ್ತು ಐಸಿಎಸ್ಇ ಪರೀಕ್ಷೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸರ್ಕಾರವನ್ನು ಕೇಳಿದೆ.

ಮಾಹಿತಿಯ ಪ್ರಕಾರ, ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ ಸಿಬಿಎಸ್ಇಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಜುಲೈನಲ್ಲಿ ನಡೆಯಲಿರುವ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲು ಪ್ರಸ್ತುತ ಒಪ್ಪಂದವಿದೆ, ಇದರಲ್ಲಿ ಸಿಬಿಎಸ್ಇ ಮಂಡಳಿಯು 10 ನೇ ತರಗತಿ ಮತ್ತು 12 ನೇ ತರಗತಿಯ ಉಳಿದ 29 ವಿಷಯಗಳ ಪರೀಕ್ಷೆಗಳನ್ನು ನಡೆಸುತ್ತದೆ. ವಿದ್ಯಾರ್ಥಿಗಳ ಮೌಲ್ಯಮಾಪನದಿಂದ ಫಲಿತಾಂಶವನ್ನು ಸಿದ್ಧಪಡಿಸುವ ಮತ್ತು ಪರೀಕ್ಷೆಯ ದಿನಾಂಕವನ್ನು ವಿಸ್ತರಿಸುವ ಯೋಜನೆ ಇದೆ.
ಕೊರೊನಾ ಬಿಕ್ಕಟ್ಟಿನ ನಡುವೆಯೂ ಜುಲೈನಲ್ಲಿ ಪರೀಕ್ಷೆಯನ್ನು ನಡೆಸುತ್ತಿರುವ ಸಿಬಿಎಸ್ಇ ಮಂಡಳಿಯ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಇದರಲ್ಲಿ ಸಿಬಿಎಸ್ಇ ಮಂಡಳಿಯಿಂದ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ಕೋರಿದೆ. ಈ ವರ್ಷದ ಮಂಡಳಿಯ ಉಳಿದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಸಿಬಿಎಸ್ಇ ಮಂಡಳಿಯ ವಿದ್ಯಾರ್ಥಿಗಳ ಫಲಿತಾಂಶವನ್ನು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಘೋಷಿಸಬೇಕು ಎಂದೂ ಸಹ ಕೋರಲಾಗಿದೆ.
ಜುಲೈ 1 ರಿಂದ ಪ್ರಾರಂಭವಾಗಲಿರುವ ಈ ವರ್ಷದ ಸಿಬಿಎಸ್ಇ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಜೂನ್ 25 ರವರೆಗೆ ಮುಂದೂಡಿದ ನಂತರ ಅಧಿಕಾರಿಗಳು ಇಂದು ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications