9 ರಿಂದ 10ನೇ ತರಗತಿ ಸಿಬಿಎಸ್ಇ ಪಠ್ಯಕ್ರಮದಲ್ಲಿ ಶೇಕಡಾ 30ರಷ್ಟು ಕಡಿತ
ದೆಹಲಿ, ಜುಲೈ 8: ಕೊರೊನಾ ವೈರಸ್ ಭೀತಿ ಹಿನ್ನೆಲೆ ಸಿಬಿಎಸ್ಇ (ಕೇಂದ್ರಿಯ ಫ್ರೌಢ ಶಿಕ್ಷಣ ಮಂಡಳಿ) 9 ರಿಂದ 12ನೇ ತರಗತಿವರೆಗಿನ ಪಠ್ಯಕ್ರಮದಲ್ಲಿ ಶೇಕಡಾ 30ರಷ್ಟು ಕಡಿತಗೊಳಿಸಿದೆ. ಈ ನಿಯಮ 2020-21 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅನ್ವಯವಾಗಲಿದೆ ಎಂದು ಸಿಬಿಎಸ್ಇ ಆಡಳಿತ ಮಂಡಳಿ ತಿಳಿಸಿದೆ.
'ದೇಶ ಹಾಗೂ ಜಗತ್ತಿನಲ್ಲಿ ಎದುರಾಗಿರುವ ಪರಿಸ್ಥಿತಿಯನ್ನು ಅವಲೋಕಿಸಿ, ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆಗೊಳಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ' ಕೇಂದ್ರ ಮಾನವ ಸಂಪನ್ಮೂಲ ಸಚಿವ ಎಂದು ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ಈ ಕುರಿತು ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. ''ಸಿಬಿಎಸ್ಇ ಪಠ್ಯಕ್ರಮ ಕಡಿತಗೊಳಿಸುವ ಬಗ್ಗೆ ತಜ್ಞರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. 1500ಕ್ಕೂ ಹೆಚ್ಚು ಸಲಹೆಗಳು ಸ್ವೀಕರಿಸಿದ್ದೇವೆ. ಎಲ್ಲರಿಗೂ ಧನ್ಯವಾದ'' ಎಂದು ತಿಳಿಸಿದ್ದಾರೆ ಸಚಿವರು.

ಈ ವರ್ಷ ಶಾಲೆಗಳು ನಿಗದಿಯಂತೆ ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪಠ್ಯಕ್ರಮ ಕಡಿತಗೊಳಿಸಲಾಗಿದೆ. ಬೇರೆ ಯಾವುದೇ ಬದಲಾವಣೆ ಇಲ್ಲ. ಅಂಕಗಳು, ಶ್ರೇಣಿ ಎಲ್ಲವೂ ಈ ಹಿಂದಿನಂತೆ ಮುಂದುವರಿಯಲಿದೆ ಎಂದು ಸಿಬಿಎಸ್ಇ ತಿಳಿಸಿದೆ.
ಈ ಹಿಂದೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕೊರೊನಾ ವೈರಸ್ ಸಾಂಕ್ರಾಮಿಕದಿಂದ ಉಂಟಾಗುವ ನಷ್ಟವನ್ನು ಸರಿದೂಗಿಸಲು ಎಲ್ಲಾ ಶ್ರೇಣಿಗಳಿಗೆ ಪಠ್ಯಕ್ರಮವನ್ನು ಶೇಕಡಾ 30ರಷ್ಟು ಕಡಿತಗೊಳಿಸುವಂತೆ ಸಲಹೆ ನೀಡಿದ್ದರು.

ಕರ್ನಾಟಕದಲ್ಲಿ ಆನ್ಲೈನ್ ಶಿಕ್ಷಣಕ್ಕೆ ಖಾಸಗಿ ಶಾಲೆಗಳು ಮುಂದಾಗಿವೆ. 1 ರಿಂದ 5ನೇ ತರಗತಿ ಹಾಗೂ 6 ರಿಂದ 10 ನೇ ತರಗತಿವರೆಗೂ ಆನ್ಲೈನ್ ಶಿಕ್ಷಣ ಕುರಿತು ಹೈ ಕೋರ್ಟ್ ಮಾರ್ಗಸೂಚಿಗಳನ್ನು ನೀಡಿದೆ. ಆದರೆ, ಸರ್ಕಾರದಿಂದ ಅಂತಿಮ ನಿರ್ಧಾರ ಪ್ರಕಟಗೊಂಡಿಲ್ಲ.
-
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications