ಸುಪ್ರೀಂ ಮೆಟ್ಟಿಲೇರದಿರಲು ಸಿಬಿಎಸ್ ಇ ನಿರ್ಧಾರ?
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಮಾತುಕತೆಯ ಪರಿಣಾಮವಾಗಿ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರದಿರಲು ಸಿಬಿಎಸ್ ಇ ನಿರ್ಧಾರ ಮಾಡಿದೆ ಎನ್ನಲಾಗಿದೆ.
ನವದೆಹಲಿ, ಮೇ 26: ತಾನು ಕೈ ಬಿಟ್ಟಿದ್ದ ಅಂಕ ಮಿತಿ ನಿಯಮವನ್ನು ಪುನಃ ಅಳವಡಿಸಿಕೊಳ್ಳಬೇಕೆಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದ ಕೇಂದ್ರೀಯ ಪ್ರೌಢ ಶಿಕ್ಷಣಾ ಮಂಡಳಿ (ಸಿಬಿಎಸ್ ಇ) ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸಿಬಿಎಸ್ ಇ ಅಡಿಯಲ್ಲಿ 12ನೇ ತರಗತಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ತುದಿಗಾಲಲ್ಲಿ ನಿಂತಿದ್ದಾರೆ. ಇಡೀ ಫಲಿತಾಂಶವೇ ಆ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ದಿಕ್ಸೂಚಿಯಾಗಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಮುಂದೂಡಬಾರದು ಹಾಗೂ ನಿಗದಿತ ಸಮಯದಲ್ಲೇ ಫಲಿತಾಂಶ ಪ್ರಕಟಿಸಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಈಗಾಗಲೇ ಮಂಡಳಿಗೆ ತಾಕೀತು ಮಾಡಿದೆ.[ಸಿಬಿಎಸ್ ಇ ಫಲಿತಾಂಶ ಮತ್ತಷ್ಟು ತಡ: ಆತಂಕದಲ್ಲಿ ವಿದ್ಯಾರ್ಥಿಗಳು]

ಗುರುವಾರ (ಮೇ 25) ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಿಎಸ್ ಇ ಆಡಳಿತ ಮಂಡಳಿಯ ಪದಾಧಿಕಾರಿಗಳ ನಡುವೆ ಎರಡು ಸುತ್ತಿನ ಮಾತುಕತೆಗಳು ನಡೆದವು.
ಗುರುವಾರ ಸಂಜೆ ವೇಳೆಗೆ ನಡೆದ 2ನೇ ಸುತ್ತಿನ ಮಾತುಕತೆ ವೇಳೆ, ಸುಪ್ರೀಂ ಕೋರ್ಟ್ ಗೆ ಹೋಗುವುದರಿಂದ ಫಲಿತಾಂಶವು ಮುಂದೂಡಲ್ಪಟ್ಟು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಇದರಿಂದ ಮಂಡಳಿಯ ಕಾರ್ಯವೈಖರಿಗೆ ಕಪ್ಪುಚುಕ್ಕೆ ಅಂಟಿದಂತಾಗುತ್ತದೆ ಎಂದು ಕೇಂದ್ರದ ಅಧಿಕಾರಿಗಳು ಸಿಬಿಎಸ್ ಇ ಆಡಳಿತ ಮಂಡಳಿಗೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.[ಏನಿದು 'CBSE ಅಂಕ ನಿಯಮ' ? ನೀವು ತಿಳಿಯಬೇಕಾದ 5 ವಿಚಾರ]
ಅದಲ್ಲದೆ, ಸುಪ್ರೀಂ ಕೋರ್ಟ್ ಒಂದು ವೇಳೆ, ಈ ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಲು ನಿರಾಕರಿಸಿದರೆ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದೂ ತಿಳಿಸಿದರು.
ಈ ಎಲ್ಲಾ ಕಾರಣಗಳಿಂದಾಗಿ, ಸಿಬಿಎಸ್ ಇಯು ಸುಪ್ರೀಂ ಕೋರ್ಟ್ ಗೆ ಹೋಗುವ ತನ್ನ ನಿಲುವನ್ನು ಕೊಂಚ ಸಡಿಲಿಸಿದೆ ಎಂದು ಹೇಳಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications