ಪ್ಯಾನ್-ಆಧಾರ್ ಸಂಖ್ಯೆ ಜೋಡಣೆ ಅವಧಿ ವಿಸ್ತರಣೆ
ನವದೆಹಲಿ, ಡಿಸೆಂಬರ್ 31: ಪ್ಯಾನ್ ಕಾರ್ಡ್ಗೆ ಆಧಾರ್ ಗುರುತಿನ ಸಂಖ್ಯೆಯನ್ನು ಜೋಡಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಸಿಬಿಡಿಟಿಯ ನೂತನ ಆದೇಶದ ಪ್ರಕಾರ ಪ್ಯಾನ್ ಕಾರ್ಡ್ ಬಳಕೆದಾರರು ಮಾರ್ಚ್ 31ರ ಒಳಗೆ ಪ್ಯಾನ್ ಕಾರ್ಡ್ಗೆ ಆಧಾರ್ ಗುರುತಿನ ಸಂಖ್ಯೆಯನ್ನು ಜೋಡಿಸಬೇಕು ಎಂದು ಸಿಬಿಡಿಟಿ ಸ್ಪಷ್ಟಪಡಿಸಿದೆ.
ಸಧ್ಯಕ್ಕೆ ಇಂದು ಅಂದರೆ ಡಿಸೆಂಬರ್ 31ರಂದು ಈ ಪ್ರಕ್ರಿಯೆಗೆ ಕೊನೆಯ ದಿನವಾಗಿತ್ತು. ಈ ಸಂಬಂಧ ಅವಧಿ ವಿಸ್ತರಣೆಯಾಗುತ್ತಿರುವುದು ಸತತ ಎರಡನೇ ಬಾರಿಯಾಗಿದೆ.

ಇನ್ನೂ ಸಾಕಷ್ಟು ಬಳಕೆದಾರರು ಆಧಾರ್ ಸಂಖ್ಯೆ ಜೋಡಣೆ ಮಾಡದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ.
ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 139 ಎಎ(2) ಪ್ರಕಾರ ಎಲ್ಲಾ ಪ್ಯಾನ್ ಕಾರ್ಡ್ ಬಳಕೆದಾರರು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಿಸಬೇಕು ಎಂದು 2017ರ ಜುಲೈ 1ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.
ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಆಧಾರ್ ಜೋಡಣೆ ಪ್ರಕ್ರಿಯೆ ಸಂವಿಧಾನಾತ್ಮಕವಾಗಿದೆ, ತೆರಿಗೆದಾರರ ಹಕ್ಕುಗಳ ಉಲ್ಲಂಘನೆ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತ್ತು.
ಸುಪ್ರೀಂಕೋರ್ಟ್ನ ಈ ಆದೇಶದ ಬಳಿಕ ಆಧಾರ್ ಜೋಡಣೆ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿತ್ತು. ಆ ಗಡುವಿನ ಬಳಿಕವೂ ಅಷ್ಟೊಂದು ಜೋಡಣೆ ನಡೆಯದಿರುವ ಹಿನ್ನೆಲೆಯಲ್ಲಿ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿತ್ತು.
ನೋಟು ಅಮಾನ್ಯೀಕರಣದ ಬಳಿಕ ಕಪ್ಪು ಹಣ ವ್ಯವಹಾರ ನಿಯಂತ್ರಣ ಹಾಗೂ ನಕಲಿ ಪ್ಯಾನ್ ಕಾರ್ಡ್ ಬಳಕೆದಾರರನ್ನು ನಿರ್ಬಂಧಿಸುವುದಕ್ಕಾಗಿ ಆಧಾರ್ ಜೋಡಣೆಯ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications