ಸಿಬಿಐ,ಇಡಿ,ಎನ್ಐಎ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ: ಸುಪ್ರೀಂ
ನವದೆಹಲಿ,ಡಿಸೆಂಬರ್ 02: ಇನ್ನುಮುಂದೆ ಸಿಬಿಐ, ಇಡಿ, ಎನ್ಐಎ ಏಜೆನ್ಸಿಗಳ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾವನ್ನು ಅಳವಿಡಸಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ.
ಮಾನವ ಹಕ್ಕುಗಳ ಉಲ್ಲಂಘನೆ ಪರಿಶೀಲನೆಗಾಗಿ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ಉನ್ನತ ನ್ಯಾಯಾಲಯ 2018ರಲ್ಲಿ ಆದೇಶಿಸಿತ್ತು.
6 ತಿಂಗಳಿಗೂ ಕಡಿಮೆ ಇಲ್ಲದ ರೀತಿಯಲ್ಲಿ ಒಂದು ನಿರ್ದಿಷ್ಟ ಸಮಯದವರೆಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು, ಮಾನವ ಹಕ್ಕುಗಳ ಉಲ್ಲಂಘನೆ ಸಂದರ್ಭದಲ್ಲಿ ಸಂತ್ರಸ್ತರು ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ ಎಂದು ನ್ಯಾಯಪೀಠ ತಿಳಿಸಿದೆ.

ಪ್ರತಿಯೊಂದು ಪೊಲೀಸ್ ಠಾಣೆಗಳ ಎಲ್ಲಾ ಆಗಮನ, ನಿರ್ಗಮನ ದ್ವಾರಗಳು, ಮುಖ್ಯ ದ್ವಾರ, ಲಾಕ್ ಆಪ್ ಗಳು, ಕಾರಿಡಾರ್ ಗಳು, ರಿಸೆಫ್ ಸನ್, ಮತ್ತು ಲಾಕ್ ಆಪ್ ಕೊಠಡಿಗಳ ಹೊರಗಡೆಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಖಾತ್ರಿಪಡಿಸಿಕೊಳ್ಳಬೇಕು ಎಂದು ನ್ಯಾಯಾಧೀಶ ಆರ್.ಎಫ್. ನಾರಿಮನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಹೇಳಿದೆ.
ರಾತ್ರಿಯಲ್ಲೂ ನೋಡಬಹುದಾದ ಸಾಧನಗಳನ್ನು ಸಿಸಿಟಿವಿ ವ್ಯವಸ್ಥೆಗಳು ಹೊಂದಿರಬೇಕು, ಆಡಿಯೋ, ವಿಡಿಯೋ ಫುಟೇಜ್ ಹೊಂದಿರಬೇಕು.
ಕನಿಷ್ಠವೆಂದರೂ ಒಂದು ವರ್ಷದವರೆಗೂ ಮಾಹಿತಿಯನ್ನು ಸಂಗ್ರಹಿಸಿಡಬಲ್ಲಾ ಇಂತಹ ಸಿಸಿಟಿವಿ ಕ್ಯಾಮರಾಗಳನ್ನು ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕಡ್ಡಾಯವಾಗಿ ಖರೀದಿಸಬೇಕು ಎಂದು ನ್ಯಾಯಪೀಠ ಹೇಳಿತು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications