ಜಿಎಸ್ಟಿ ಪರಿಹಾರ: ಕೇಂದ್ರವು ರಾಜ್ಯಗಳಿಗೆ ದ್ರೋಹವೆಸಗಿದೆ ಎಂದ ಮನೀಶ್ ಸಿಸೋಡಿಯಾ
ನವದೆಹಲಿ, ಆಗಸ್ಟ್ 28: ಗುರುವಾರ 41ನೇ ಜಿಎಸ್ಟಿ ಮಂಡಳಿ ಸಭೆ ಬಳಿಕ ಮಾತನಾಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೇಂದ್ರ ಸರಕಾರವು ಜಿಎಸ್ಟಿ ನಷ್ಟ ಪರಿಹಾರಕ್ಕೆ ತಿರಸ್ಕರಿಸುವ ಮೂಲಕ ರಾಜ್ಯಗಳಿಗೆ ಮಹಾ ದ್ರೋಹ ಎಸಗಿದೆ ಎಂದು ಖಂಡಿಸಿದ್ದಾರೆ.
ಜಿಎಸ್ಟಿ ಪರಿಹಾರವನ್ನು ಕೊಡುವುದರ ಬದಲಿಗೆ ಸಾಲ ತೆಗೆದುಕೊಳ್ಳಿ ಎನ್ನುವ ಮೂಲಕ ಕೇಂದ್ರ ಸರಕಾರ ಒಕ್ಕೂಟ ವ್ಯವಸ್ಥೆಯ ಸಹಕಾರ ತತ್ತ್ವವನ್ನೇ ಗಾಳಿಗೆ ತೂರಿದೆ ಎಂದು ಸಿಸೋಡಿಯಾ ಕಿಡಿಕಾರಿದ್ದಾರೆ.
ಕೇಂದ್ರದಿಂದ ಅತಿ ಕಳಪೆ ರೀತಿಯಲ್ಲಿ ಜಿಎಸ್ಟಿ ಜಾರಿಯಾಗಿದೆ. ಕೇಂದ್ರವು ರಾಜ್ಯಗಳ ದಿಕ್ಕು ತಪ್ಪಿಸುತ್ತಿದೆ. ರಾಜ್ಯಗಳ ಆದಾಯವನ್ನು ಹದಗೆಡಿಸುತ್ತಿದೆ ಎಂದು ಅವರು ಟೀಕಿಸಿದರು. ಕೇಂದ್ರ ಸರಕಾರ ರಾಜ್ಯಗಳಿಗೆ ನೆರವಾಗುತ್ತಿಲ್ಲ ಎಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಹಣಕಾಸು ಮಂತ್ರಿಗಳು ಮಂಡಳಿ ಸಭೆಯ ನಂತರ ಅಸಮಾಧಾನ ವ್ಯಕ್ತಪಡಿಸಿದರು.

ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ 2.35 ಲಕ್ಷ ಕೋಟಿ ರೂ.ಗಳ ಅಂದಾಜು ಜಿಎಸ್ಟಿ ಪರಿಹಾರದ ಕೊರತೆಯನ್ನು ಪೂರೈಸಲು ರಾಜ್ಯಗಳು ಸಾಲ ಪಡೆಯಲು ಕೇಂದ್ರವು ಎರಡು ಆಯ್ಕೆಗಳನ್ನು ನೀಡಿದೆ.
ಆಯ್ಕೆ 1:
ಆರ್ಬಿಐನೊಂದಿಗೆ ಚರ್ಚಿಸಿ ರಾಜ್ಯಗಳಿಗೆ ವಿಶೇಷ ಸವಲತ್ತು ಒದಗಿಸಲಾಗುತ್ತದೆ. 97 ಸಾವಿರ ಕೋಟಿ ರುಪಾಯಿಯನ್ನು ಉತ್ತಮ ಬಡ್ಡಿ ದರದಲ್ಲಿ ಕೊಡಿಸಲಾಗುತ್ತದೆ. ಅದನ್ನು ಐದು ವರ್ಷಗಳ ಅವಧಿಗೆ ಸೆಸ್ ಸಂಗ್ರಹದ ಮೂಲಕ ಮರುಪಾವತಿಗೆ ಅವಕಾಶ ಇರುತ್ತದೆ.
ಆಯ್ಕೆ 2:
ಒಟ್ಟಾರೆ ಜಿಎಸ್ ಟಿ ಪರಿಹಾರ ಕೊರತೆಯಾದ 2.35 ಲಕ್ಷ ಕೋಟಿ ರುಪಾಯಿ ಮೊತ್ತವನ್ನು ಆರ್ ಬಿಐ ಜತೆಗೆ ಚರ್ಚೆ ನಡೆಸಿ, ಸಾಲ ಪಡೆಯುವ ಮೂಲಕ ರಾಜ್ಯಗಳೇ ಅದನ್ನು ತುಂಬಿಕೊಳ್ಳಬಹುದು ಎಂದು ಅವರು ಹೇಳಿದರು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications