ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣ ಕೊಡಲ್ಲ!

|
Google Oneindia Kannada News

ನವದೆಹಲಿ, ಡಿಸೆಂಬರ್ 19: 'ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯಾವುದೇ ರೀತಿಯ ಹಣಕಾಸಿನ ಸಹಾಯ ಮಾಡುವುದಿಲ್ಲ' ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ನಾಲ್ಕು ತಿಂಗಳೊಳಗೆ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ:ಅಮಿತ್ ಶಾನಾಲ್ಕು ತಿಂಗಳೊಳಗೆ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ:ಅಮಿತ್ ಶಾ

ಬುಧವಾರ ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿರುವ ಅವರು, 'ಮಂದಿರ ಕಟ್ಟಲು ಸರ್ಕಾರದ ಹಣ ವಿನಿಯೋಗಿಸುವುದಿಲ್ಲ. ಮಂದಿರ ನಿರ್ಮಾಣಕ್ಕೆ ರಚನೆಯಾಗುವ ಟ್ರಸ್ಟ್ ನಲ್ಲಿ ಬಿಜೆಪಿ ಸದಸ್ಯರೂ ಇರುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. 'ಸಮಾಜದಿಂದ ಹಣ ಸಂಗ್ರಹಿಸಿ ಮಂದಿರ ನಿರ್ಮಿಸುತ್ತಾರೆ. ನಾವೇನು ಅದರಲ್ಲಿ ತಲೆ ಹಾಕುವುದಿಲ್ಲ' ಎಂದು ಹೇಳಿದ್ದಾರೆ.

Central BJP Government Will Not Spend The Money For Rama mandira

ಇತ್ತೀಚೆಗೆ ರಾಮಮಂದಿರ ವಿವಾದ ಬಗೆಹರಿಸಿ, ನಾಲ್ಕು ತಿಂಗಳೊಳಗೆ ಟ್ರಸ್ಟ್ ನಿರ್ಮಿಸಬೇಕು ಎಂದು ಆದೇಶ ನೀಡಿತ್ತು. ಟ್ರಸ್ಟ್ ರಚನೆ ಸಂಬಂಧ ಬಿರುಸಿನ ಚಟುವಟಿಕೆಗಳು ನಡೆದಿದ್ದು, ನಾಲ್ಕು ತಿಂಗಳಲ್ಲಿ ಟ್ರಸ್ಟ್ ರಚನೆಯಾಗುತ್ತೆ ಎಂಬ ವಿಶ್ವಾಸವನ್ನು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ. ಮಂದಿರ ನಿರ್ಮಾಣಕ್ಕೆ ವಿವಿಧ ಹಿಂದೂ ಸಂಘಟನೆಗಳು ಈಗಾಗಲೇ ಸಮಾಜದಿಂದ ಹಣ ಸಂಗ್ರಹಿಸಲು ಆರಂಭಿಸಿವೆ. 100 ಕೋಟಿ ರುಪಾಯಿಯಲ್ಲಿ ಮಂದಿರ ನಿರ್ಮಿಸಲಾಗುತ್ತೆ ಎಂದು ಹೇಳಲಾಗುತ್ತಿದೆ.

English summary
Central BJP Government Will Not Spend The Money For Rama mandira in Ayodhya, BJP President Amit Shah said in TV channel interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X