ಉ.ಕರ್ನಾಟಕ ಜನರಿಗೆ ಸಿಹಿ ಸುದ್ದಿ: ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಒಪ್ಪಿಗೆ

Recommended Video

      Good news for North Karnataka on Mahadayi dispute | Oneindia Kannada

      ನವದೆಹಲಿ, ಅಕ್ಟೋಬರ್ 23: ಉತ್ತರ ಕರ್ನಾಟಕ ಭಾಗದ ರೈತರ ಆಶಾ ಕಿರಣ ಮಹದಾಯಿ ಯೋಜನೆ ಕೈಗೂಡುವ ಲಕ್ಷಣಗಳೂ ಗೋಚರಿಸುತ್ತಿವೆ. ಕಳಸಾ-ಬಂಡೂರಿ ಯೋಜನೆಗೆ ರಾಜ್ಯ ಇನ್ನಷ್ಟು ಹತ್ತಿರವಾಗಿದೆ.

      ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ ನೀಡಿದ್ದು, 'ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಆಗಿರುವ ಕಾರಣ, 'ಪರಿಸರ ಪರಿಣಾಮ ಅಧ್ಯಯನ ಅಧಿ ಸೂಚನೆ-2006' ರ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಯೋಜನೆ ಅನುಷ್ಠಾನಕ್ಕೆ ತಕರಾರಿಲ್ಲ' ಎಂದು ತಿಳಿಸಿದೆ.

      ಇದೇ ತಿಂಗಳ 17 ರಂದು ಕೇಂದ್ರ ಪರಿಸರ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, 'ಜಲವಿದ್ಯುತ್‌ ಅಥವಾ ನೀರಾವರಿ ಯೋಜನೆ ಹಾಗೂ ಹೊಸ ಅಚ್ಚುಕಟ್ಟು ಪ್ರದೇಶಗಳಿಗೆ ನೀರನ್ನು ಹಾಯಿಸುವ ಉದ್ದೇಶವನ್ನು ಈ ಯೋಜನೆ ಒಳ ಗೊಂಡಿಲ್ಲ. ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಯೋಜನೆ ಆರಂಭಿಸಲು ಅಡ್ಡಿ ಇಲ್ಲ. ಕರ್ನಾಟಕ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಬಹುದಾಗಿದೆ' ಎಂದು ಪತ್ರ ವಿವರಿಸಿದೆ.

      Central Environment Department Approves Kalasa-Banduri Project

      ಮಹದಾಯಿ ನದಿಗೆ ಸಂಬಂಧಿಸಿದಂತೆ ಗೋವಾ-ಕರ್ನಾಟಕ-ಮಹಾರಾಷ್ಟ್ರ ನಡುವೆ ತಿಕ್ಕಾಟ ನಡೆಯುತ್ತಿದ್ದು 2018 ರ ಆಗಸ್ಟ್ 14 ರ ತೀರ್ಪಿನಂತೆ ಮೂರೂ ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಅಷ್ಟೆ ಅಲ್ಲದೆ, ಕಳಸಾ-ಬಂಡೂರಿ ಯೋಜನೆಯನ್ನು ಸಂಬಂಧಪಟ್ಟ ಇಲಾಖೆ ಅನುಮತಿ ಪಡೆದ ನಂತರ ಪ್ರಾರಂಭ ಮಾಡಬಹುದಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+