ಪ್ರಧಾನಮಂತ್ರಿ ಆವಾಸ್ ಯೋಜನೆ: ಹೆಚ್ಚುವರಿ 1.4 ಲಕ್ಷ ಮನೆ ಸೇರ್ಪಡೆ
ನವದೆಹಲಿ, ಜುಲೈ 26: ನಗರಪ್ರದೇಶದಲ್ಲಿ ಬಡವರಿಗೆ ಸೂರು ಕಲ್ಪಿಸುವ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಹೆಚ್ಚುವರಿಯಾಗಿ 1.4 ಲಕ್ಷ ಮನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
2022ರೊಳಗೆ ದೇಶದ ಪ್ರತಿಯೊಂದು ಕುಟುಂಬಕ್ಕೆ ಸ್ವಂತ ಮನೆ ಇರಬೇಕೆಂಬ ಕೇಂದ್ರ ಸರ್ಕಾರದ ಗುರಿ ಹಿನ್ನೆಲೆಯಲ್ಲಿ ಹೆಚ್ಚುವರಿ ಮನೆಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ.
ಒಟ್ಟು 492 ಕೋಟಿ ಯೋಜನೆಗೆ 6642 ಕೋಟಿ ರೂ ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರದ ಪಾಲು 2102 ಕೋಟಿ ಅನುದಾನ ನೀಡಲಿದೆ.

ಗುರುವಾರ ಅನುಮತಿ ನೀಡಿರುವ ಯೋಜನೆಯಲ್ಲಿ ಗುಜರಾತ್ 26,585 ಉತ್ತರಪ್ರದೇಶ 54577, ಪಶ್ಚಿಮ ಬಂಗಾಲಳ 26585, ಅಸ್ಸಾಂ 9328, ಮಹಾರಾಷ್ಟ್ರ 8499, ಛತ್ತೀಸ್ಗಢ 6507, ರಾಜಸ್ತಾನ 4927, ಹರಿಯಾಣ 3807 ಮನೆಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ.
ಇದರಲ್ಲಿ ಕರ್ನಾಟಕದ ಪಾಲೆಷ್ಟು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ, ಜುಲೈ 5 ರಂದು ಘೋಷಣೆ ಮಾಡಿರುವ ಬಜೆಟ್ನಲ್ಲಿ ಪ್ರಸ್ತಾಪ ಮಾಡಲಾಗಿತ್ತು.
ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, 2020-22 ರ ಒಳಗಾಗಿ ಬರೋಬ್ಬರಿ 1.95 ಕೋಟಿ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ಘೋಷಿಸಿದ್ದರು.
ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಅಷ್ಟೆ ಅಲ್ಲದೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಗಳ ನಿರ್ಮಾಣ ಅವಧಿ 2015 ರಲ್ಲಿ 315 ದಿನಗಳಿತ್ತು, ಅದನ್ನು 2018-19 ರ ವೇಳೆಗೆ ಕೇವಲ 119 ದಿನಗಳಿಗೆ ಇಳಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications