ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಶೌರಿ, ಭೂಷಣ್ ಸಿಬಿಐ ಭೇಟಿ!
ನವದೆಹಲಿ, ಅಕ್ಟೋಬರ್ 10: ಇತ್ತೀಚೆಗಷ್ಟೇ ಕೇಂದ್ರ ತನಿಖಾ ದಳ (ಸಿಬಿಐ)ದ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಭೇಟಿಯಾಗಿದ್ದು ಕೇಮದ್ರ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ.
ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಕೋರಿ ಈ ಇಬ್ಬರೂ ನಾಯಕರು ಅಲೋಕ್ ವರ್ಮಾ ಅವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ. ಅಕ್ಟೋಬರ್ 4 ರಂದೇ ಅಲೋಕ್ ಅವರನ್ನು ಶೌರಿ ಮತ್ತು ಭೂಷಣ್ ಭೇಟಿಯಾಗಿದ್ದರು. ಆದರೆ ಈ ಕುರಿತು ಕೇಂದ್ರ ಸರ್ಕಾರ ಈಗ ಪ್ರತಿಕ್ರಿಯಿಸಿದೆ.
ಆದರೆ ಶೌರಿ ಮತ್ತು ಪ್ರಶಾಂತ್ ಭೂಷಣ್ ತಮ್ಮನ್ನು ಭೇಟಿಯಾಗಲು ಅಲೋಕ್ ವರ್ಮಾ ಅನುಮತಿ ನೀಡಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಸಿಬಿಐ ನಿರ್ದೇಶಕರು ತಮ್ಮ ಕಚೇರಿಯಲ್ಲಿಯೇ ರಾಜಕಾರಣಿಗಳನ್ನು ಬೇಟಿ ಮಾಡಿದ್ದು ಸರಿಯೇ ಎಂದು ಸರ್ಕಾರ ಪ್ರಶ್ನಿಸುತ್ತಿದೆ.

ವಿರಳಾತಿವಿರಳ ಪ್ರಕರಣ
ರಾಜಕಾರಣಿಗಳನ್ನು ಭೇಟಿ ಮಾಡಲು ಸಿಬಿಐ ನಿರ್ದೇಶಕರು ಒಪ್ಪಿಗೆ ಸೂಚಿಸಿದ್ದೇ ಸರಿಯಲ್ಲ, ಇಂಥ ಪ್ರಕರಣಗಳು ತೀರಾ ಅಪರೂಪ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಅಲೋಕ್ ವರ್ಮಾ ಅವರು ತಮ್ಮ ಕಚೇರಿಯಲ್ಲಿಯೇ ಈ ಇಬ್ಬರು ನಾಯಕರನ್ನು ಭೇಟಿ ಮಾಡಿದ್ದು ಸರ್ಕಾರಕ್ಕೆ ಮತ್ತಷ್ಟು ಅಚ್ಚರಿ ಮೂಡಿಸಿದೆ.

ಭೇಟಿಯಾಗಿದ್ದಕ್ಕೆ ಕಾರಣವೇನು?
ಕಳೆದ ವಾರ ಶೌರಿ ಮತ್ತು ಪ್ರಶಾಂತ್ ಭೂಷಣ್ ಇಬ್ಬರೂ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಭೇಟಿಯಗಿದ್ದರು. ರಫೇಲ್ ಡೀಲ್ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ತನಿಖೆ ನಡೆಸುವಂತೆ ಸಿಬಿಐ ನಿರ್ದೇಶಕರನ್ನು ಇಬ್ಬರು ನಾಯಕರೂ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಪರಿಗಣಿಸಿದ ಸರ್ಕಾರ
ಆದರೆ ಈ ಕುರಿತು ಸಿಬಿಐ ನಿರ್ದೇಶಕರನ್ನು ಶೌರಿ ಮತ್ತು ಭೂಷಣ್ ಭೇಟಿಯಾಗಲು, ಅಲೋಕ್ ವರ್ಮಾ ಒಪ್ಪಿಗೆ ನೀಡಿದ್ದೇ ಸರ್ಕಾರದ ಮುನಿಸಿಗೆ ಕಾರಣವಾಗಿದೆ. ಈ ಘಟನೆಯನ್ನು ತೀರಾ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, 'ರಾಜಕಾರಣಿಗಳನ್ನು ಸಿಬಿಐ ನಿರ್ದೇಶಕರು ತಮ್ಮ ಆಫೀಸಿನಲ್ಲಿಯೇ ಭೇಟಿಯಾಗಿದ್ದು ಅಚ್ಚರಿ ತಂದಿದೆ. ಇದು ವಿರಳಾತಿವಿರಳ ಪ್ರಕರಣ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಿಲ್ಲ' ಎಂದಿದೆ.

ಮೋದಿ ವಿರುದ್ಧ ಯಶವಂತ ಸಿನ್ಹಾ ದೂರು
ಫ್ರಾನ್ಸ್ ನೊಂದಿಗೆ ರಫೇಲ್ ಯುದ್ಧ ವಿಮಾನ ಖರೀದಿಗಾಗಿ ನಡೆದ ಒಪ್ಪಂದದ ನಂತರ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ದೂರಲಾಗಿದೆ. ಈ ಕುರಿತು ಬಿಜೆಪಿಯ ಮಾಜಿ ಮುಖಂಡ ಯಶವಂತ ಸಿನ್ಹಾ ಅವರು ಇತ್ತೀಚೆಗಷ್ಟೇ ಸಿಬಿಐ ಗೆ ದೂರು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications