ಜಿಲ್ಲೆಗೊಂದು ವೈದ್ಯಕೀಯ ಕಾಲೇಜು: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ನವದೆಹಲಿ, ಏಪ್ರಿಲ್ 15 : ಮುಂದಿನ 10 ವರ್ಷಗಳಲ್ಲಿ ದಾಖಲೆ ಮಟ್ಟದಲ್ಲಿ ಹೊಸ ವೈದ್ಯರನ್ನು ದೇಶ ಹೊಂದಲಿದೆ ಎಂದ ಪ್ರಧಾನಿ ಮೋದಿ ಹೇಳಿದ್ದಾರೆ.
ಗುಜರಾತ್ನ ಭುಜ್ ಜಿಲ್ಲೆಯಲ್ಲಿರುವ ಕೆಕೆ ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಶುಕ್ರವಾರ ಉದ್ಘಾಟನೆ ಮಾಡಿದರು. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೇಂದ್ರ ಸರ್ಕಾರದ ಹೊಸ ನೀತಿಯ ಅನುಸಾರ ದೇಶದ ಪ್ರತಿಯೊಂದು ಜಿಲ್ಲೆಗಳಲ್ಲೂ ಕನಿಷ್ಟ ಒಂದು ವೈದ್ಯಕೀಯ ಕಾಲೇಜುಗಳನ್ನ ಸ್ಥಾಪಿಸುವ ಗುರಿ ಹೊಂದಿದ್ದು, ವೈದ್ಯಕೀಯ ಶಿಕ್ಷಣ ಎಲ್ಲರಿಗೂ ದೊರೆಯಬೇಕು ಎಂಬ ಉದ್ದೇಶದಿಂದ ಈ ಪ್ರಯತ್ನಕ್ಕೆ ಮುಂದಾಗಿದೆ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಗುಜರಾತ್ ಎರಡು ದಶಕಗಳ ಹಿಂದೆ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಹೊಂದಿತ್ತು ಅದರಲ್ಲಿ ಕೇವಲ 1100 ಸೀಟುಗಳು ಮಾತ್ರ ಇದ್ದವು. ಆದರೆ ಕಳೆದ 20 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಪ್ರಸ್ತುತ ಗುಜರಾತ್ನಲ್ಲಿ 36ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿದ್ದು, ಪ್ರತಿವರ್ಷ 6000 ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಈ ಮೂಲಕ ಯುವಜನತೆಗೆ ವೈದ್ಯಕೀಯ ಶಿಕ್ಷಣವನ್ನು ಮುಕ್ತವಾಗಿ ಪಡೆಯಲು ಅವಕಾಶ ಮಾಡಿಕೊಡಲಾಗಿದೆ ಎಂದರು.
twitter embed:Hospital in Bhuj will make good quality healthcare accessible to people at affordable price. https://t.co/ip4Y9sNVyz
— Narendra Modi (@narendramodi) April 15, 2022
ಇನ್ನು ಇದೇ ಸಂದರ್ಭದಲ್ಲಿ 2001ರಲ್ಲಿ ಉಂಟಾಗಿದ್ದ ಭೀಕರ ಭೂಕಂಪನದ ವಿನಾಶದ ಕುರಿತು ಪ್ರಧಾನಿ ನೆನಪು ಮಾಡಿಕೊಂಡಿದ್ದು, ಆಗಿನ ಸ್ಥಿತಿಯನ್ನ ಎದುರಿಸಿ ಭುಜ್ ಮತ್ತು ಕಚ್ನ ಜನರು ತಮ್ಮ ಪರಿಶ್ರಮದಿಂದ ತಮ್ಮ ಪ್ರದೇಶವನ್ನ ಕಟ್ಟಿದ್ದಾರೆ ಎಂದು ಹೇಳಿದರು. ಇಷ್ಟೇ ಅಲ್ಲದೆ ಭುಜ್ ನಲ್ಲಿ ಸ್ಥಾಪಿಸಿರುವ ವೈದ್ಯಕೀಯ ಆಸ್ಪತ್ರೆ ಜನರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಿದೆ ಎಂದು ಒತ್ತಿ ಹೇಳಿದರು.

ಕೆಕೆ ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನ ಶ್ರೀ ಕುಟ್ಚಿ ಲೇವಾ ಪಟೇಲ್ ಸಮಾಜ ನಿರ್ಮಿಸಿದೆ. 200 ಹಾಸಿಗೆಯನ್ನು ಹೊಂದಿರುವ ಈ ಆಸ್ಪತ್ರೆಯಲ್ಲಿ ಬಡವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನ ಕಡಿಮೆ ದರದಲ್ಲಿ ನೀಡಲಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications