ಸರ್ಕಾರಿ ಕಚೇರಿಗಳಲ್ಲಿ ಜಿಮೇಲ್, ಯಾಹೂಗೆ ನಿಷೇಧ

ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸರ್ಕಾರಿ ಕಚೇರಿಗಳಲ್ಲಿ ಈ ಮೇಲ್ ಬಳಕೆ ನಿಷೇಧಿಸುವ ಕುರಿತು ಕರಡು ಪ್ರತಿ ಸಿದ್ಧಗೊಳಿಸಿದೆ. ಅದರಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಜಿ ಮೇಲ್, ಯಾಹೂ ಸೇರಿದಂತೆ ವಿವಿಧ ಇಮೇಲ್ ಬಳಕೆ ನಿಷೇಧಿಸಲಾಗುತ್ತದೆ. ಸರ್ಕಾರಿ ಇಲಾಖೆಗಳು ರಾಷ್ಟ್ರೀಯ ಸೂಚನಾ ಕೇಂದ್ರದ (ಎನ್ ಐಸಿ) ಮೂಲಕ ತಮ್ಮ ಇ ಮೇಲ್ ಕಳಿಸಬೇಕಾಗಿದೆ.
ಈ ಪ್ರಸ್ತಾವನೆ ಸದ್ಯ ಪ್ರಾಯೋಗಿಕ ಹಂತದಲ್ಲಿದ್ದು, ವರ್ಷಾಂತ್ಯದಲ್ಲಿ ಜಾರಿಗೆ ಬರಬಹುದು ಎಂದು ಅಂದಾಜಿಸಲಾಗಿದೆ. ಈ ನೀತಿ ಜಾರಿಗೆ ಬಂದರೆ ಕಡ್ಡಾಯವಾಗಿ ಸರ್ಕಾರಿ ನೌಕರರು ಎನ್ ಐಸಿ ಮೂಲಕವೇ ಇಮೇಲ್ ವ್ಯವಹಾರ ನಡೆಸಬೇಕಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕರದ ಸುಮಾರು 5-6 ಲಕ್ಷ ಜನರು ಈ ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಮಾಹಿತಿ ಸಂಗ್ರಹಿಸಲಾಗಿದೆ.
ಕೇಂದ್ರ ಸರ್ಕಾರ ಎನ್ ಐಸಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು 4 ಅಥವ 5 ಕೋಟಿ ಅನುದಾನ ಒದಗಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಆದರೆ, ನೀತಿ ಜಾರಿಗೆ ಬಂದ ನಂತರ ಸರ್ಕಾರಿ ಮಾಹಿತಿಗಳನ್ನು ಸಂಗ್ರಹಿಸಲು, ಇ ಮೇಲ್ ಸೇವೆ ಒದಗಿಸಲು ಉಪಕರಣಗಳ ಖರೀದಿಗಾಗಿ ಸುಮಾರು 50 ಕೋಟಿ ಅನುದಾನಬೇಕಾಗಬಹುದು ಎಂದು ಪ್ರಸ್ತಾವನೆ ರಚಿಸಲಾಗಿದೆ.
ಜಿಮೇಲ್, ಯಾಹೂ, ಹಾಟ್ ಮೇಲ್ ಮುಂತಾದವುಗಳ ಮೂಲಕ ಸರ್ಕಾರಿ ಮಾಹಿತಿಗಳನ್ನು ಇಮೇಲ್ ಕಳಿಸಲಾಗುತ್ತಿದೆ. ವಿವಿಧ ಇಲಾಖೆಗಳು ಇದನ್ನು ಬಳಸುತ್ತಿವೆ. ಆದರೆ, ಇದು ಹ್ಯಾಕರ್ ಗಳ ಕೈ ಸೇರುತ್ತಿರುವುದರಿಂದ ಸರ್ಕಾರ ಎನ್ ಐಸಿ ಮೂಲಕ ಸರ್ಕಾರಿ ಮಾಹಿತಿಗಳನ್ನು ಇಮೇಲ್ ಕಳುಹಿಸುವುದನ್ನು ಕಡ್ಡಾಯಗೊಳಿಸಲು ಚಿಂತನೆ ಯೋಜನೆ ರೂಪಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications