ಕರ್ನಾಟಕದಲ್ಲಿ 750 ಮೆ.ವ್ಯಾಟ್ ಬೃಹತ್ ಸೌರಶಕ್ತಿ ಪಾರ್ಕ್
ನವದೆಹಲಿ, ನ. 25: ದೇಶದಲ್ಲಿರುವ ತೀವ್ರ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೃಹತ್ ಸೌರಶಕ್ತಿ ಪಾರ್ಕ್ಗಳ ಸ್ಥಾಪನೆಗೆ ಮುಂದಾಗಿದೆ. ಕರ್ನಾಟಕ ಸೇರಿದಂತೆ 12 ವಿವಿಧ ರಾಜ್ಯಗಳಲ್ಲಿ 25 ಬೃಹತ್ ಸೌರಶಕ್ತಿ ಪಾರ್ಕ್ಗಳನ್ನು ನಿರ್ಮಿಸಲು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಯೋಜಿಸಿದೆ.
ಈ ಕುರಿತು ಮಾಧ್ಯಮಕ್ಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ತರುಣ್ ಕಪೂರ್ ಮಾಹಿತಿ ನೀಡಿದ್ದಾರೆ. ಕರ್ನಾಟಕ, ಆಂದ್ರ ಪ್ರದೇಶ, ತೆಲಂಗಾಣ, ಮದ್ಯ ಪ್ರದೇಶ, ರಾಜಸ್ತಾನ, ಓಡಿಶಾ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸೌರಶಕ್ತಿ ಪಾರ್ಕ್ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. [ಕರ್ನಾಟಕದಲ್ಲಿ ಹರ್ಭಜನ್ ಸೌರ ಘಟಕ]
ಕರ್ನಾಟಕದಲ್ಲಿ 750 ಮೆ.ವ್ಯಾಟ್, ತೆಲಂಗಾಣ 1 ಸಾವಿರ, ಮಧ್ಯಪ್ರದೇಶದಲ್ಲಿ 750 ಮೆ.ವ್ಯಾಟ್ನ ಎರಡು ಪಾರ್ಕ್, ಓಡಿಶಾ ಮತ್ತು ಪಂಜಾಬ್ನಲ್ಲಿ 3 ಸಾವಿರ, ಆಂದ್ರ ಪ್ರದೇಶದಲ್ಲಿ 2,500 ಹಾಗೂ ರಾಜಸ್ಥಾನದಲ್ಲಿ ಅತ್ಯಂತ ದೊಡ್ಡದಾಗ 4-5 ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಸೌರಶಕ್ತಿ ಪಾರ್ಕ್ ಸ್ಥಾಪಿಸಲಾಗುವುದು.

ಗುಜರಾತ್, ರಾಜಸ್ಥಾನ ಮಾದರಿ: ಗುಜರಾತ್ ಹಾಗೂ ರಾಜಸ್ಥಾನದಲ್ಲಿರುವ ಸೌರಶಕ್ತಿ ಪಾರ್ಕ್ ಮಾದರಿಯಲ್ಲಿ ನಿರ್ಮಿಸಲಾಗುವುದು. ಐದು ವರ್ಷಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲು ಸಚಿವಾಲಯ ಉದ್ದೇಶಿಸಿದೆ.
25 ವಿವಿಧ ಸೋಲಾರ್ ಪಾರ್ಕ್ಗಳಲ್ಲಿ 20 ಸಾವಿರ ಮೆ. ವ್ಯಾಟ್ ವಿದ್ಯುತ್ ಉತ್ಪಾದಿಸುವುದು ಸರ್ಕಾರದ ಗುರಿಯಾಗಿದೆ. ಪ್ರತಿ ಪಾರ್ಕ್ನಲ್ಲಿ 500ರಿಂದ 1000 ಮೆ.ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು. ಸರ್ಕಾರ ಈಗಾಗಲೇ ಆರಂಭಿಸಿರುವ ಸೋಲಾರ್ ಪಾರ್ಕ್ಗಳಲ್ಲಿ ಪ್ರಸ್ತುತ ಮೂರು ಸಾವಿರ ಮೆ. ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಇದನ್ನು 2022ರ ಹೊತ್ತಿಗೆ ಒಂದು ಲಕ್ಷ ಮೆ.ವ್ಯಾಟ್ಗೆ ಹೆಚ್ಚಿಸಲು ಸರ್ಕಾರ ಯೋಜಿಸಿದೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಗಾಗಿ ಶೀಘ್ರ ಸಚಿವ ಸಂಪುಟಕ್ಕೆ ಕಳುಹಿಸಲಾಗುವುದೆಂದು ತರುಣ್ ಕಪೂರ್ ತಿಳಿಸಿದ್ದಾರೆ. [ಕರ್ನಾಟಕದಲ್ಲಿ 5 ಸೋಲಾರ್ ವಿದ್ಯುತ್ ಘಟಕ]
ರಾಜ್ಯ ಸರ್ಕಾರ ಸಹಯೋಗ: ಸೌರಶಕ್ತಿ ಪಾರ್ಕ್ಗಳನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ನಿರ್ಮಿಸಲಾಗುವುದು. ಭಾರತದ ಸೌರ ಶಕ್ತಿ ಸಂಸ್ಥೆಯು ಕೇಂದ್ರ ಸರ್ಕಾರದ ಪರವಾಗಿ ಯೋಜನೆಯ ಅನುಷ್ಠಾನ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ.
ಸೋಲಾರ್ ಪಾರ್ಕ್ ಒಂದು ಕೇಂದ್ರೀಕೃತ ವಲಯವಾಗಿದೆ. ಯೋಜನೆ ಆರಂಭ ಹಾಗೂ ವಿದ್ಯುತ್ ಸಾಗಿಸಲು ಸರ್ಕಾರವು ಭೂಮಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸಬೇಕಾಗುತ್ತದೆ.
ಕೇಂದ್ರ ಸರ್ಕಾರವು ಅತಿ ದೊಡ್ಡ ಸೌರಶಕ್ತಿ ಯೋಜನೆಗಳಿಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ 1,000 ಕೋಟಿ ರೂ.ಗಳನ್ನು ತೆಗೆದಿರಿಸಿದೆ ಎಂದು ತರುಣ್ ಕಪೂರ್ ವಿವರಿಸಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications