ಹೋಟೆಲ್, ರೆಸ್ಟೋರೆಂಟ್ ತೆರೆಯಲು ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ
ದೆಹಲಿ, ಜೂನ್ 4: ಕೊರೊನಾ ವೈರಸ್ ಲಾಕ್ಡೌನ್ನಿಂದ ತಿಂಗಳುಗಳ ಕಾಲ ಮುಚ್ಚಲಾಗಿದ್ದ ರೆಸ್ಟೋರೆಂಟ್, ಹೋಟೆಲ್ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಜೂನ್ 8 ರಿಂದ ದೇಶಾದ್ಯಂತ ರೆಸ್ಟೋರೆಂಟ್ ಮತ್ತು ಹೋಟೆಲ್ ಉದ್ಯಮ ಪುನಾರಂಭವಾಗುತ್ತಿದೆ.
ಅದಕ್ಕಾಗಿ ಗೃಹ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಪ್ರಮುಖ ಕರ್ತವ್ಯ ಎಂದು ತಿಳಿಸಿದೆ. ರೆಸ್ಟೋರೆಂಟ್ ಮತ್ತು ಹೋಟೆಲ್ಗಳಿಗೆ ಕೊರೊನಾ ರೋಗಲಕ್ಷಣ ಹೊಂದಿಲ್ಲದ ಸಿಬ್ಬಂದಿ ಮತ್ತು ಗ್ರಾಹಕರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಸೂಚಿಸಿದೆ.
ಆರೋಗ್ಯ ದೃಷ್ಟಿಯಿಂದ ತೊಂದರೆಯಲ್ಲಿರುವ ಸಿಬ್ಬಂದಿ, ಹಿರಿಯ ಸಿಬ್ಬಿಂದಿ, ಗರ್ಭಿಣಿ ಮಹಿಳೆಯರ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ಸಚಿವಾಲಯ ತಿಳಿಸಿದೆ. ಮುಂದೆ ಓದಿ...
|
ಪ್ರತ್ಯೇಕ ಪ್ರವೇಶ, ಪ್ರತ್ಯೇಕ ನಿರ್ಗಮನ
* ಹೋಟೆಲ್ ಹಾಗೂ ರೆಸ್ಟೋರೆಂಟ್ ರಿಸಪ್ಷನ್ನಲ್ಲಿ ಮಾಸ್ಕ್, ಗ್ಲೌಸ್ ಕಡ್ಡಾಯವಾಗಿ ಧರಿಸಬೇಕು
* ಗ್ರಾಹಕರೊಂದಿಗೆ ನೇರ ಸಂವಹನ ಮಾಡಬಾರದು
* ವಾಹನ ನಿಲುಗಡೆ ಸ್ಥಳಗಳಲ್ಲಿ ಮತ್ತು ಆವರಣದ ಹೊರಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು.
* ಹೋಟೆಲ್, ರೆಸ್ಟೋರೆಂಟ್ಗಳಿಗೆ ಬರುವವರಿಗೆ ಪ್ರತ್ಯೇಕ ಪ್ರವೇಶ ಮತ್ತು ಪ್ರತ್ಯೇಕ ನಿರ್ಗಮನದ ವ್ಯವಸ್ಥೆ ಮಾಡಿಕೊಳ್ಳಬೇಕು.
* ಆನ್ಲೈನ್ ಪಾವತಿ, ಡಿಜಿಟಲ್ ಪಾವತಿಯನ್ನು ಪ್ರೋತ್ಸಾಹಿಸಬೇಕು

ಗ್ರಾಹಕರ ವಿಳಾಸ, ಪ್ರಯಾಣದ ಮಾಹಿತಿ ಪಡೆಯಬೇಕು
* ಹೋಟೆಲ್ ಮತ್ತು ರೆಸ್ಟೋರೆಂಟ್ ಬರುವ ಗ್ರಾಹಕರ ಐಡಿ, ವಿಳಾಸ, ಪ್ರಯಾಣದ ಹಿನ್ನೆಲೆ, ವೈದ್ಯಕೀಯ ಸ್ಥಿತಿ ಬಗ್ಗೆ ಸರಿಯಾದ ದಾಖಲೆ ಅಥವಾ ಮಾಹಿತಿ ಪಡೆದುಕೊಳ್ಳಬೇಕು.
* ಲಗೇಜ್ಗಳನ್ನು ಕೋಣೆಗಳಿಗೆ ಕಳುಹಿಸುವ ಮೊದಲು ಸೋಂಕು ರಹಿತಗೊಳಿಸಬೇಕು.
* ಕೊಠಡಿ ಸೇವೆಗಾಗಿ, ಅತಿಥಿಗಳು ಮತ್ತು ಸಿಬ್ಬಂದಿಗಳ ನಡುವಿನ ಸಂವಹನವು ಇಂಟರ್ಕಾಮ್ / ಮೊಬೈಲ್ ಫೋನ್ ಮೂಲಕ ಇರಬೇಕು.
* ಸಾಮಾಜಿಕ ಅಂತರ ಕಾಯ್ದುಕೊಂಡು ಕೊಠಡಿ ಸೇವೆ ನೀಡಬೇಕು.

ಮಕ್ಕಳ ಆಟದ ಕೇಂದ್ರ ಬಂದ್
* ಮಕ್ಕಳು ಆಡುವ ಪ್ರದೇಶಗಳು (ಗೇಮಿಂಗ್ ಆರ್ಕೇಡ್ಗಳು) ಮುಚ್ಚಲ್ಪಡುತ್ತವೆ.
* ರೆಸ್ಟೋರೆಂಟ್ಗಳ ಆಸನ ಸಾಮರ್ಥ್ಯವನ್ನು ಶೇಕಡಾ 50ಕ್ಕೆ ಇಳಿಸಿದೆ.
* ಆಹಾರ ವಿತರಣಾ ಸಿಬ್ಬಂದಿ ಪ್ಯಾಕೆಟ್ಗಳನ್ನು ಗ್ರಾಹಕರ ಬಾಗಿಲಲ್ಲಿ ಇಡಬೇಕು. ಆಹಾರ ಪ್ಯಾಕೆಟ್ ಅನ್ನು ನೇರವಾಗಿ ಗ್ರಾಹಕರಿಗೆ ಹಸ್ತಾಂತರಿಸಬಾರದು.
* ಹೋಮ್ ಡಿಲವರಿ ಮಾಡುವ ಸಿಬ್ಬಂದಿಯ ಉಷ್ಣಾಂಶ ಪರೀಕ್ಷಿಸಬೇಕಾಗುವುದು ರೆಸ್ಟೋರೆಂಟ್ ಅಧಿಕಾರಿಗಳು ಕರ್ತವ್ಯ ಎಂದು ಸಚಿವಾಲಯ ಹೇಳಿದೆ.

ಹವಾನಿಯಂತ್ರಣ 24-30 ಡಿಗ್ರಿ
* ಕ್ಯೂ ವ್ಯವಸ್ಥೆ ನಿರ್ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆವರಣದಲ್ಲಿ ನಿರ್ದಿಷ್ಟ ಗುರುತುಗಳನ್ನು ಹಾಕಬೇಕು.
* ರೆಸ್ಟೋರೆಂಟ್ ಒಳಗೆ ಪ್ರವೇಶ ಸಂದರ್ಭದಲ್ಲಿ ಕನಿಷ್ಠ 6 ಅಡಿಗಳಷ್ಟು ದೈಹಿಕ ಅಂತರ ಕಾಪಾಡಿಕೊಳ್ಳುವುದು.
* ಎಲ್ಲಾ ಹವಾನಿಯಂತ್ರಣ ಸಾಧನಗಳ ತಾಪಮಾನ ಸೆಟ್ಟಿಂಗ್ 24-30 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರಬೇಕು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications