Get Updates
Get notified of breaking news, exclusive insights, and must-see stories!

ರಾಹುಲ್ ಗಾಂಧಿಯವರಿಗೆ ತಲೆ ಕೆಟ್ಟಿದೆಯಾ ಹೇಗೆ?: ಪ್ರಹ್ಲಾದ್ ಜೋಶಿ ಲೇವಡಿ

ನವದೆಹಲಿ, ಫೆಬ್ರವರಿ 2: ಸಂಸತ್ತಿನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ತಲೆಯನ್ನೇ ಕಳೆದುಕೊಂಡಂತೆ ತೋರುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ.

ಬುಧವಾರ ಸಂಸತ್ತಿನಲ್ಲಿ 45 ನಿಮಿಷಗಳ ಸುದೀರ್ಘ ಭಾಷಣದಲ್ಲಿ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದರು. ಬಡವರು ಮತ್ತು ಶ್ರೀಮಂತರ ನಡುವಿನ ಅಂತರ, ದೇಶವನ್ನು ಬಾಧಿಸುತ್ತಿರುವ ನಿರುದ್ಯೋಗ ಸಮಸ್ಯೆ, ಪೆಗಾಸಸ್ ಹಗರಣ, ಚೀನಾದ ಜೊತೆಗಿನ ಗಡಿ ಗುದ್ದಾಟ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿದರು.

"ರಾಹುಲ್ ಗಾಂಧಿ ಗೊಂದಲಕ್ಕೆ ಒಳಗಾಗಿದ್ದಾರೆ. ಅವರು ಭಾರತ ಒಂದು ರಾಷ್ಟ್ರವಲ್ಲ ಎಂದು ಹೇಳಿದರು. ಅವರು ಭಾರತದ ಇತಿಹಾಸವನ್ನು ತಿಳಿದುಕೊಂಡಿಲ್ಲ, ಅವರು ತಮ್ಮ ಮೆದುಳನ್ನು ಕಳೆದುಕೊಂಡಿದ್ದಾರೆ," ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಪ್ರಹ್ಲಾದ್ ಜೋಶಿ ಜೊತೆಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ರಾಹುಲ್ ಗಾಂಧಿ ಪ್ರಸ್ತಾಪಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತವು ರಾಜ್ಯಗಳ ಒಕ್ಕೂಟವೇ ವಿನಃ ದೇಶವಲ್ಲ

ಭಾರತವು ರಾಜ್ಯಗಳ ಒಕ್ಕೂಟವೇ ವಿನಃ ದೇಶವಲ್ಲ

"ನೀವು ಸಂವಿಧಾನವನ್ನು ಓದಿದರೆ ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆಯೇ ವಿನಃ ರಾಷ್ಟ್ರವೆಂದು ವಿವರಿಸಲಾಗಿಲ್ಲ. ಅಂದರೆ ತಮಿಳುನಾಡಿನ ಸಹೋದರನಿಗೆ ಮಹಾರಾಷ್ಟ್ರದ ನನ್ನ ಸಹೋದರನಿಗೆ ಸಮಾನವಾದ ಹಕ್ಕುಗಳಿವೆ ಅದೇ ರೀತಿ ಸಹಜವಾಗಿ ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಲಕ್ಷದ್ವೀಪಕ್ಕೂ ಅನ್ವಯ ಆಗುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಕ್ಷಮಾಪಣೆ ಕೋರುವಂತೆ ರಾಹುಲ್ ಗಾಂಧಿಗೆ ಕಿರಣ್ ರಿಜಿಜು ಒತ್ತಾಯ

ಕ್ಷಮಾಪಣೆ ಕೋರುವಂತೆ ರಾಹುಲ್ ಗಾಂಧಿಗೆ ಕಿರಣ್ ರಿಜಿಜು ಒತ್ತಾಯ

ನ್ಯಾಯಾಂಗ, ಚುನಾವಣಾ ಆಯೋಗ ಮತ್ತು ಪೆಗಾಸಸ್ , ಇವೆಲ್ಲವೂ ರಾಜ್ಯಗಳ ಒಕ್ಕೂಟದ ಧ್ವನಿಯನ್ನು ತಡೆಯಲು ಬಳಸುವ ಸಾಧನಗಳಾಗಿವೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಭಾರತದ ಕಾನೂನು ಸಚಿವರಾಗಿ ಮಾತ್ರವಲ್ಲದೆ ಒಬ್ಬ ಸಾಮಾನ್ಯ ಪ್ರಜೆಯಾಗಿಯೂ ನಾನು ಭಾರತದ ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಬಗ್ಗೆ ರಾಹುಲ್ ಗಾಂಧಿ ಹೇಳಿರುವುದನ್ನು ಖಂಡಿಸುತ್ತೇನೆ. ಇವುಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಗಳು. ರಾಹುಲ್ ಗಾಂಧಿ ಅವರು ತಕ್ಷಣವೇ ಚುನಾವಣಾ ಆಯೋಗ ಮತ್ತು ನ್ಯಾಯಾಂಗದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

"ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಅವರಿಗೆ ಸಾಂವಿಧಾನಿಕ ಅಧಿಕಾರಗಳ ಬಗ್ಗೆ ಯಾವುದೇ ಗೌರವವಿಲ್ಲ ಎಂದು ನಮಗೆ ತಿಳಿದಿದೆ. ನಾವು ಅವರ ಅಭ್ಯಾಸವಿಲ್ಲದ ಕಾಮೆಂಟ್‌ಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಆದರೆ ಸಂಸತ್ತಿನ ಭವನದಿಂದ ಸಾಂವಿಧಾನಿಕ ಅಧಿಕಾರಿಗಳನ್ನು ನಿಂದಿಸಿರುವುದರಿಂದ ಅವರು ಬೇಷರತ್ ಕ್ಷಮೆಯಾಚಿಸಬೇಕು," ಎಂದು ಸಚಿವ ಕಿರಣ್ ರಿಜಿಜು ಆಗ್ರಹಿಸಿದ್ದಾರೆ.

ಚೀನಾ ಮತ್ತು ಭಾರತ ಗಡಿ ವಿವಾದದ ಬಗ್ಗೆ ಕಳವಳ

ಚೀನಾ ಮತ್ತು ಭಾರತ ಗಡಿ ವಿವಾದದ ಬಗ್ಗೆ ಕಳವಳ

"ನನ್ನ ದೇಶವು ಎಲ್ಲಿ ನಿಂತಿದೆ ಎಂಬುದರ ಬಗ್ಗೆ ನನಗೆ ತುಂಬಾ ಚಿಂತೆಯಾಗಿದೆ. ನೀವು ಈ ರಾಷ್ಟ್ರ ಮತ್ತು ಜನರನ್ನು ದೊಡ್ಡ ಅಪಾಯಕ್ಕೆ ಸಿಲುಕಿಸುತ್ತಿದ್ದೀರಿ. ನಿಮ್ಮ ಸರ್ಕಾರವು ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಾಗುವಂತೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾರ್ಯತಂತ್ರಗಳ ಹೆಸರಿನಲ್ಲಿ ದೊಡ್ಡ ತಪ್ಪುಗಳನ್ನು ಮಾಡಲಾಗಿದೆ. ಗಣರಾಜ್ಯೋತ್ಸವ ಆಚರಣೆಯ ದಿನ ಅತಿಥಿಯನ್ನು ಆಹ್ವಾನಿಸಲು ಏಕೆ ಸಾಧ್ಯವಾಗಲಿಲ್ಲ ಎಂದು ನಿಮ್ಮನ್ನು ನೀವೇ ಕೇಳಿಕೊಳ್ಳಿರಿ. ಭಾರತವು ಇಂದು ಸಂಪೂರ್ಣ ಐಸೋಲೇಟ್ ಆಗಿದೆ," ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಇತಿಹಾಸದ ಪಾಠ ಮಾಡಿರುವ ಎಸ್ ಜೈಶಂಕರ್

ಇತಿಹಾಸದ ಪಾಠ ಮಾಡಿರುವ ಎಸ್ ಜೈಶಂಕರ್

ರಾಹುಲ್ ಗಾಂಧಿ ಭಾಷಣದಲ್ಲಿ ಉಲ್ಲೇಖಿಸಿದ ಅಂಶಗಳಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್‌ಗಳ ಸರಣಿಯಲ್ಲಿ ಉತ್ತರಿಸಿದ್ದಾರೆ. "ಪಾಕಿಸ್ತಾನ ಮತ್ತು ಚೀನಾವನ್ನು ಒಟ್ಟಿಗೆ ತಂದದ್ದು ಇದೇ ಸರ್ಕಾರ ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಆರೋಪಿಸಿದರು. ಬಹುಶಃ, ಕೆಲವು ಇತಿಹಾಸದ ಪಾಠಗಳು ಕ್ರಮಬದ್ಧವಾಗಿವೆ. 1963ರಲ್ಲಿ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಅಕ್ರಮವಾಗಿ ಚೀನಾಕ್ಕೆ ಹಸ್ತಾಂತರಿಸಿತು. ಚೀನಾ 1970 ರ ದಶಕದಲ್ಲಿ ಪಿಒಕೆ ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು.

ಲೋಕಸಭೆಯಲ್ಲಿ, ರಾಹುಲ್ ಗಾಂಧಿ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಯನ್ನು ಆಹ್ವಾನಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು. ಭಾರತದಲ್ಲಿ ವಾಸಿಸುವವರಿಗೆ ನಾವು ಕೊರೊನಾವೈರಸ್ ಅಲೆಯ ಮಧ್ಯೆ ಇದ್ದೇವೆ ಎಂದು ತಿಳಿದಿದೆ. ಜನವರಿ 27ರಂದು ಬರಬೇಕಿದ್ದ 5 ಮಧ್ಯ ಏಷ್ಯಾದ ಅಧ್ಯಕ್ಷರು ವರ್ಚುವಲ್ ಶೃಂಗಸಭೆಯನ್ನು ನಡೆಸಿದರು. ರಾಹುಲ್ ಗಾಂಧಿ ಅದನ್ನೂ ತಪ್ಪಿಸಿದ್ದಾರೆಯೇ?, ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರಶ್ನೆ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+