ರಾಹುಲ್ ಗಾಂಧಿಯವರಿಗೆ ತಲೆ ಕೆಟ್ಟಿದೆಯಾ ಹೇಗೆ?: ಪ್ರಹ್ಲಾದ್ ಜೋಶಿ ಲೇವಡಿ
ನವದೆಹಲಿ, ಫೆಬ್ರವರಿ 2: ಸಂಸತ್ತಿನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ತಲೆಯನ್ನೇ ಕಳೆದುಕೊಂಡಂತೆ ತೋರುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ.
ಬುಧವಾರ ಸಂಸತ್ತಿನಲ್ಲಿ 45 ನಿಮಿಷಗಳ ಸುದೀರ್ಘ ಭಾಷಣದಲ್ಲಿ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದರು. ಬಡವರು ಮತ್ತು ಶ್ರೀಮಂತರ ನಡುವಿನ ಅಂತರ, ದೇಶವನ್ನು ಬಾಧಿಸುತ್ತಿರುವ ನಿರುದ್ಯೋಗ ಸಮಸ್ಯೆ, ಪೆಗಾಸಸ್ ಹಗರಣ, ಚೀನಾದ ಜೊತೆಗಿನ ಗಡಿ ಗುದ್ದಾಟ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿದರು.
"ರಾಹುಲ್ ಗಾಂಧಿ ಗೊಂದಲಕ್ಕೆ ಒಳಗಾಗಿದ್ದಾರೆ. ಅವರು ಭಾರತ ಒಂದು ರಾಷ್ಟ್ರವಲ್ಲ ಎಂದು ಹೇಳಿದರು. ಅವರು ಭಾರತದ ಇತಿಹಾಸವನ್ನು ತಿಳಿದುಕೊಂಡಿಲ್ಲ, ಅವರು ತಮ್ಮ ಮೆದುಳನ್ನು ಕಳೆದುಕೊಂಡಿದ್ದಾರೆ," ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಪ್ರಹ್ಲಾದ್ ಜೋಶಿ ಜೊತೆಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ರಾಹುಲ್ ಗಾಂಧಿ ಪ್ರಸ್ತಾಪಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತವು ರಾಜ್ಯಗಳ ಒಕ್ಕೂಟವೇ ವಿನಃ ದೇಶವಲ್ಲ
"ನೀವು ಸಂವಿಧಾನವನ್ನು ಓದಿದರೆ ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆಯೇ ವಿನಃ ರಾಷ್ಟ್ರವೆಂದು ವಿವರಿಸಲಾಗಿಲ್ಲ. ಅಂದರೆ ತಮಿಳುನಾಡಿನ ಸಹೋದರನಿಗೆ ಮಹಾರಾಷ್ಟ್ರದ ನನ್ನ ಸಹೋದರನಿಗೆ ಸಮಾನವಾದ ಹಕ್ಕುಗಳಿವೆ ಅದೇ ರೀತಿ ಸಹಜವಾಗಿ ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಲಕ್ಷದ್ವೀಪಕ್ಕೂ ಅನ್ವಯ ಆಗುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಕ್ಷಮಾಪಣೆ ಕೋರುವಂತೆ ರಾಹುಲ್ ಗಾಂಧಿಗೆ ಕಿರಣ್ ರಿಜಿಜು ಒತ್ತಾಯ
ನ್ಯಾಯಾಂಗ, ಚುನಾವಣಾ ಆಯೋಗ ಮತ್ತು ಪೆಗಾಸಸ್ , ಇವೆಲ್ಲವೂ ರಾಜ್ಯಗಳ ಒಕ್ಕೂಟದ ಧ್ವನಿಯನ್ನು ತಡೆಯಲು ಬಳಸುವ ಸಾಧನಗಳಾಗಿವೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಭಾರತದ ಕಾನೂನು ಸಚಿವರಾಗಿ ಮಾತ್ರವಲ್ಲದೆ ಒಬ್ಬ ಸಾಮಾನ್ಯ ಪ್ರಜೆಯಾಗಿಯೂ ನಾನು ಭಾರತದ ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಬಗ್ಗೆ ರಾಹುಲ್ ಗಾಂಧಿ ಹೇಳಿರುವುದನ್ನು ಖಂಡಿಸುತ್ತೇನೆ. ಇವುಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಗಳು. ರಾಹುಲ್ ಗಾಂಧಿ ಅವರು ತಕ್ಷಣವೇ ಚುನಾವಣಾ ಆಯೋಗ ಮತ್ತು ನ್ಯಾಯಾಂಗದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
"ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಅವರಿಗೆ ಸಾಂವಿಧಾನಿಕ ಅಧಿಕಾರಗಳ ಬಗ್ಗೆ ಯಾವುದೇ ಗೌರವವಿಲ್ಲ ಎಂದು ನಮಗೆ ತಿಳಿದಿದೆ. ನಾವು ಅವರ ಅಭ್ಯಾಸವಿಲ್ಲದ ಕಾಮೆಂಟ್ಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಆದರೆ ಸಂಸತ್ತಿನ ಭವನದಿಂದ ಸಾಂವಿಧಾನಿಕ ಅಧಿಕಾರಿಗಳನ್ನು ನಿಂದಿಸಿರುವುದರಿಂದ ಅವರು ಬೇಷರತ್ ಕ್ಷಮೆಯಾಚಿಸಬೇಕು," ಎಂದು ಸಚಿವ ಕಿರಣ್ ರಿಜಿಜು ಆಗ್ರಹಿಸಿದ್ದಾರೆ.

ಚೀನಾ ಮತ್ತು ಭಾರತ ಗಡಿ ವಿವಾದದ ಬಗ್ಗೆ ಕಳವಳ
"ನನ್ನ ದೇಶವು ಎಲ್ಲಿ ನಿಂತಿದೆ ಎಂಬುದರ ಬಗ್ಗೆ ನನಗೆ ತುಂಬಾ ಚಿಂತೆಯಾಗಿದೆ. ನೀವು ಈ ರಾಷ್ಟ್ರ ಮತ್ತು ಜನರನ್ನು ದೊಡ್ಡ ಅಪಾಯಕ್ಕೆ ಸಿಲುಕಿಸುತ್ತಿದ್ದೀರಿ. ನಿಮ್ಮ ಸರ್ಕಾರವು ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಾಗುವಂತೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾರ್ಯತಂತ್ರಗಳ ಹೆಸರಿನಲ್ಲಿ ದೊಡ್ಡ ತಪ್ಪುಗಳನ್ನು ಮಾಡಲಾಗಿದೆ. ಗಣರಾಜ್ಯೋತ್ಸವ ಆಚರಣೆಯ ದಿನ ಅತಿಥಿಯನ್ನು ಆಹ್ವಾನಿಸಲು ಏಕೆ ಸಾಧ್ಯವಾಗಲಿಲ್ಲ ಎಂದು ನಿಮ್ಮನ್ನು ನೀವೇ ಕೇಳಿಕೊಳ್ಳಿರಿ. ಭಾರತವು ಇಂದು ಸಂಪೂರ್ಣ ಐಸೋಲೇಟ್ ಆಗಿದೆ," ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಇತಿಹಾಸದ ಪಾಠ ಮಾಡಿರುವ ಎಸ್ ಜೈಶಂಕರ್
ರಾಹುಲ್ ಗಾಂಧಿ ಭಾಷಣದಲ್ಲಿ ಉಲ್ಲೇಖಿಸಿದ ಅಂಶಗಳಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ಗಳ ಸರಣಿಯಲ್ಲಿ ಉತ್ತರಿಸಿದ್ದಾರೆ. "ಪಾಕಿಸ್ತಾನ ಮತ್ತು ಚೀನಾವನ್ನು ಒಟ್ಟಿಗೆ ತಂದದ್ದು ಇದೇ ಸರ್ಕಾರ ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಆರೋಪಿಸಿದರು. ಬಹುಶಃ, ಕೆಲವು ಇತಿಹಾಸದ ಪಾಠಗಳು ಕ್ರಮಬದ್ಧವಾಗಿವೆ. 1963ರಲ್ಲಿ ಪಾಕಿಸ್ತಾನವು ಶಾಕ್ಸ್ಗಾಮ್ ಕಣಿವೆಯನ್ನು ಅಕ್ರಮವಾಗಿ ಚೀನಾಕ್ಕೆ ಹಸ್ತಾಂತರಿಸಿತು. ಚೀನಾ 1970 ರ ದಶಕದಲ್ಲಿ ಪಿಒಕೆ ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು.
ಲೋಕಸಭೆಯಲ್ಲಿ, ರಾಹುಲ್ ಗಾಂಧಿ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಯನ್ನು ಆಹ್ವಾನಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು. ಭಾರತದಲ್ಲಿ ವಾಸಿಸುವವರಿಗೆ ನಾವು ಕೊರೊನಾವೈರಸ್ ಅಲೆಯ ಮಧ್ಯೆ ಇದ್ದೇವೆ ಎಂದು ತಿಳಿದಿದೆ. ಜನವರಿ 27ರಂದು ಬರಬೇಕಿದ್ದ 5 ಮಧ್ಯ ಏಷ್ಯಾದ ಅಧ್ಯಕ್ಷರು ವರ್ಚುವಲ್ ಶೃಂಗಸಭೆಯನ್ನು ನಡೆಸಿದರು. ರಾಹುಲ್ ಗಾಂಧಿ ಅದನ್ನೂ ತಪ್ಪಿಸಿದ್ದಾರೆಯೇ?, ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರಶ್ನೆ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications