ಸೆಲ್ಫೀ ನಿಷೇಧಿತ ವಲಯಗಳ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸೂಚನೆ
ನವದೆಹಲಿ, ಏಪ್ರಿಲ್ 04: ಸೆಲ್ಫೀ ತೆಗೆದುಕೊಳ್ಳುವುದು ಒಂದು ರೋಗವಾಗಿದೆ. ದಿನನಿತ್ಯದ ಅಭ್ಯಾಸವಾದಂತಾಗಿದೆ. ಅದರಲ್ಲಿಯೂ ಯಾರೂ ಹೋಗಲು ಸಾಧ್ಯವಾಗಂತಹ ಜಾಗಗಳಿಗೆ ಹೋಗಿ ಸೆಲ್ಫೀ ತೆಗೆಯುವುದಂತೂ ಸಾಮಾನ್ಯವಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಇದರಿಂದ ಸಾಕಷ್ಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಎಷ್ಟೇ ಸಾವುಘಲು ಸಂಭವಿಸಿದರೂ ತಮಗೇನೂ ತಿಳಿದೇ ಇಲ್ಲ ಎಂಬಂತೆ ಸೆಲ್ಫೀ ತೆಗೆಯುವುದರಲ್ಲಿ ಮುಳಿಗಿರುತ್ತಾರೆ. ನೀರು, ಎತ್ತರದ ಬೆಟ್ಟ, ಮರದ ಮೇಲೆ, ನೀರಿನೊಳಗೆ, ಜಾರುವ ಬಂಡೆಯ ತುದಿಯಲ್ಲಿ ಹೀಗೆ ಹಲವಾರು ಅಪಾಯದ ಸ್ಥಳಗಳಲ್ಲಿ ಸೆಲ್ಪೀ ತೆಗೆಯುವ ಕ್ರೇಜ್ ಹೆಚ್ಚಾಗಿದೆ.
ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಪ್ರವಾಸಿ ತಾಣಗಳಲ್ಲಿ ಸೆಲ್ಫೀ ನಿಷೇಧಿತ ವಲಯವನ್ನು ಗುರುತಿಸಿ ಮಾಹಿತಿ ನೀಡುವಂತೆ ಎಲ್ಲಾ ಸರ್ಕಾರಗಳಿಗೆ ಸೂಚನೆ ನೀಡಿದೆ.

ಈ ಕುರಿತು ಮಂಗಳವಾರ ಲೋಕಸಭೆಯಲ್ಲಿ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗರಾಮ್ ಅಹಿರ್ ಉತ್ತರಿಸಿ, ಸೆಲ್ಫಿ ತೆಗೆಯುವಾಗ ಸಂಭವಿಸುವ ಅನಾಹುತಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಪ್ರವಾಸೋದ್ಯಮ ಸಚಿವಾಲಯವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರವಾಸಿಗರನ್ನು ರಕ್ಷಿಸಲು ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಜನಪ್ರಿಯ ಪ್ರವಾಸಿ ತಾಣಗಳಲ್ಲಿ ನೋ-ಸೆಲ್ಫಿ-ಝೋನ್ ಫಲಕ ಹಾಕುವುದು ಮತ್ತು ಅಪಘಾತ ವಲಯಗಳಲ್ಲಿ ಎಚ್ಚರಿಕೆ ಫಲಕಗಳನ್ನು ಹಾಕುವ ಮೂಲಕ ಪ್ರವಾಸಿಗರ ರಕ್ಷಣೆಗಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಮೂಲಕ ಸಂಭವನೀಯ ಅಪಾಯವನ್ನು ತಡೆಗಟ್ಟುವುದು ಆಯಾ ರಾಜ್ಯಗಳ ಜವಾಬ್ದಾರಿ ಎಂದು ಹೇಳಿದ್ದಾರೆ.
ಪ್ರವಾಸೋದ್ಯಮ ತಾಣಗಳಲ್ಲಿ ಸ್ವಯಂ ಸೇವಕರಾಗಲು ಉದ್ದೇಶಿಸುವವರನ್ನು ಮತ್ತು ಪ್ರವಾಸಿ ಪೊಲೀಸರನ್ನು ನಿಯೋಜಿಸುವ ಕುರಿತು ಚಿಂತಿಸಲು ರಾಜ್ಯಗಳಿಗೆ ಮನವಿ ಮಾಡಿದ್ದು, ಈ ಕುರಿತು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ಸಲಹೆ ನೀಡಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications