ರಫೇಲ್ ಡೀಲ್ ಬಗ್ಗೆ ಸುಳ್ಳು ಸಂಗತಿ ಬಿಂಬಿಸಲು ಯತ್ನ: ಸರ್ಕಾರ ಆರೋಪ
ನವದೆಹಲಿ, ಮೇ 4: ರಫೇಲ್ ಜೆಟ್ಗಳ ಖರೀದಿ ಒಪ್ಪಂದ ಪ್ರಕ್ರಿಯೆ ಬಗ್ಗೆ ಪ್ರಧಾನಿ ಕಚೇರಿ ನಿಗಾ ವಹಿಸಿತ್ತು. ಆದರೆ, ಇದರ ಅರ್ಥ ಅದು ಫ್ರಾನ್ಸ್ನೊಂದಿಗೆ ಸಮಾನಾಂತರ ವ್ಯವಹಾರ ನಡೆಸಿದೆ ಎಂದಲ್ಲ ಎಂಬುದಾಗಿ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
'ಸರ್ಕಾರ ಮತ್ತು ಸರ್ಕಾರದ ನಡುವಿನ ಪ್ರಕ್ರಿಯೆಯನ್ನು ಪಿಎಂಒ ನಿರ್ವಹಿಸುವುದನ್ನು ಹಸ್ತಕ್ಷೇಪ ಅಥವಾ ಸಮಾನಾಂತರ ವ್ಯವಹಾರ ಎಂದು ವ್ಯಾಖ್ಯಾನಿಸಲು ಸಾಧ್ಯವಾಗುವುದಿಲ್ಲ' ಎಂದು ಕೇಂದ್ರ ಸರ್ಕಾರ ಶನಿವಾರ ಸುಪ್ರೀಂಕೋರ್ಟ್ಗೆ ಸಲ್ಲಿಸಿದ 13 ಪುಟಗಳ ಪ್ರತಿಕ್ರಿಯೆಯಲ್ಲಿ ಹೇಳಿದೆ.
ಈ ವ್ಯವಹಾರದಲ್ಲಿ ಪ್ರತಿಯೊಂದೂ ಪಾರದರ್ಶಕವಾಗಿದೆ. ಪಿಎಂಒ ಮತ್ತು ಫ್ರಾನ್ಸ್ ಅಧ್ಯಕ್ಷರ ಕಚೇರಿಗಳು ಸಭೆಯಿಂದ ಮೂಡಿಬಂದ ಒಪ್ಪಂದದ ಪ್ರಕ್ರಿಯೆಯನ್ನು ಗಮನಿಸುತ್ತಿವೆ ಎಂದು ಆಗಿನ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರೇ ಹೇಳಿದ್ದರು ಎಂಬುದನ್ನು ಪ್ರಸ್ತಾಪಿಸಿದೆ.

ಮಾಜ ಸಚಿವರಾದ ಅರುಣ್ ಶೌರಿ ಮತ್ತು ಯಶವಂತ್ ಸಿನ್ಹಾ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರು ರಫೇಲ್ ಡೀಲ್ ಕುರಿತ ಸುಪ್ರೀಂಕೋರ್ಟ್ನ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿರುವ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿರುವ ರಕ್ಷಣಾ ಇಲಾಖೆ, ಸರ್ಕಾರ-ಸರ್ಕಾರ ನಡುವಿನ ಆಂತರಿಕ ಖರೀದಿ ಪ್ರಕ್ರಿಯೆಯನ್ನು ಬಹಿರಂಗಪಡಿಸಲು ಮತ್ತು ಅದರ ಬಗ್ಗೆ ಕೆಲವೇ ಆಯ್ದ ಹಾಗೂ ಅಪೂರ್ಣ ಚಿತ್ರಣವನ್ನು ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.
ಅರ್ಜಿದಾರರ ಕ್ರಮಗಳು ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣೆಗೆ ಸಂಬಂಧಿಸಿದ ಸಾರ್ವಭೌಮದ ನಿರ್ಧಾರವನ್ನು ಪ್ರಶ್ನಿಸುವುದಕ್ಕೆ ಸಮವಾಗಿದೆ. ಅರ್ಜಿದಾರರು ಇದಕ್ಕೆ ಸಂಬಂಧಿಸದ ವಿವಾದಗಳನ್ನು ಬೆಸೆಯಲು ಮತ್ತು ಕೆಲವು ಮಾಧ್ಯಮಗಳ ವರದಿ ಆಧಾರದಲ್ಲಿ ವಿವಾದಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ದೂರಿದೆ.
ರಫೇಲ್ ಡೀಲ್ ಮತ್ತು ಅನಿಲ್ ಅಂಬಾನಿ ಅವರ ಆಫ್ಸೆಟ್ಗೆ ಫ್ರೆಂಚ್ ಸರ್ಕಾರ ವಿನಾಯಿತಿ ನೀಡಿರುವುದಕ್ಕೆ ಯಾವ ಸಂಬಂಧವೂ ಇಲ್ಲ ಎಂದು ಹೇಳಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications