ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಯುಗುಣಮಟ್ಟ ನಿರ್ವಹಣೆಗಾಗಿ ರಚನೆಯಾಗಿದ್ದ ಆಯೋಗ 5 ತಿಂಗಳಲ್ಲೇ ಸ್ಥಗಿತ

|
Google Oneindia Kannada News

ನವದೆಹಲಿ, ಮಾರ್ಚ್‌ 13: ಎನ್‌ಸಿಆರ್ ವಾಯುಗುಣಮಟ್ಟ ನಿರ್ವಹಣೆಗಾಗಿ ಕೇಂದ್ರ ಸರ್ಕಾರ ರಚನೆ ಮಾಡಿದ್ದ ಆಯೋಗ ಐದು ತಿಂಗಳಲ್ಲೇ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಆಯೋಗವು ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಆಯೋಗ ರಚನೆಗೊಂಡಿತ್ತು. ಆದರೆ, ಅದರ ಸ್ಥಾಪನೆಗೆ ಸಂಬಂಧಿಸಿದ ಸುಗ್ರೀವಾಜ್ಞೆ ಸಂಸತ್ತಿನಲ್ಲಿ ಮಂಡನೆಯಾಗದ ಹಿನ್ನೆಲೆಯಲ್ಲಿ ಆಯೋಗ ಮುಚ್ಚಲ್ಪಟ್ಟಿದೆ.

ದೆಹಲಿಯಲ್ಲಿ ಅಪಾಯಕಾರಿ ಮಟ್ಟ ತಲುಪಿದ ವಾಯು ಮಾಲಿನ್ಯದೆಹಲಿಯಲ್ಲಿ ಅಪಾಯಕಾರಿ ಮಟ್ಟ ತಲುಪಿದ ವಾಯು ಮಾಲಿನ್ಯ

ರಾಷ್ಟ್ರೀಯ ರಾಜಧಾನಿ ಮತ್ತು ಅದಕ್ಕೆ ಹೊಂದಿಕೊಂಡಂತ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆಗಾಗಿ ರಚನೆಯಾದ ಕೇಂದ್ರ ಸರ್ಕಾರದ ಆಯೋಗ ಐದು ತಿಂಗಳಲ್ಲಿಯೇ ಸ್ಥಗಿತಗೊಂಡಿದೆ.

Centres Panel For Air Quality Management In NCR Shuts Down Within 5 Months Of Formation

ಸುಗ್ರೀವಾಜ್ಞೆ ಎಂದಿಗೂ ಕಾಯಿದೆಯಾಗಲಿಲ್ಲ. ಯಾವುದೇ ಸುಗ್ರೀವಾಜ್ಞೆಯನ್ನು ಆರು ವಾರಗಳಲ್ಲಿ ಸಂಸತ್ತಿನಲ್ಲಿ ಮಂಡಿಸಬೇಕಾಗುತ್ತದೆ. ಅದು ಆಗಲಿಲ್ಲ, ಆದ್ದರಿಂದ ಸುಗ್ರೀವಾಜ್ಞೆ ಮಹತ್ವ ಕಳೆದುಕೊಂಡಿದ್ದು, ಆಯೋಗವನ್ನು ವಿಸರ್ಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಯೋಗ ರಚನೆಯಾದ ಆರು ವಾರಗಳಲ್ಲಿ ಸುಗ್ರೀವಾಜ್ಞೆ ಸಂಸತ್ತಿನಲ್ಲಿ ಮಂಡನೆಯಾಗದ ಹಿನ್ನೆಲೆಯಲ್ಲಿ ಅದು ಮುಚ್ಚಲ್ಪಟ್ಟಿದೆ ಎಂದು ಕೇಂದ್ರ ಪರಿಸರ ಕಾರ್ಯದರ್ಶಿ ಆರ್ ಪಿ ಗುಪ್ತಾ ಮಾಹಿತಿ ನೀಡಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಮಾಜಿ ಕಾರ್ಯದರ್ಶಿ ಎಂಎಂ ಕುಟ್ಟಿ ಆಯೋಗದ ಅಧ್ಯಕ್ಷರಾಗಿದ್ದರು. ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಗುಣಮಟ್ಟ ತೀರಾ ಕಳಪೆಯಾಗಿದೆ. ಚಳಿಗಾಲ ಹಾಗೂ ಬೇಸಿಗೆ ಕಾಲದಲ್ಲಿ ಮಾಲಿನ್ಯ ವಿಪರೀತವಾಗುತ್ತದೆ, ಇದರಿಂದ ಹಲವು ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ.

English summary
The central government''s Commission for Air Quality Management in National Capital Region and Adjoining Areas has been shut down within five months of its constitution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X