ಸಿಖ್ ದಂಗೆ ಆರೋಪಿಗಳಿಗೆ ಮತ್ತೆ ನಡುಕ ಶುರು
ನವದೆಹಲಿ, ಫೆ.1: 1984ರಲ್ಲಿ ನಡೆದಿದ್ದ ಸಿಖ್ ದಂಗೆಯ ಸಂದರ್ಭ ಹಿಂಸಾಚಾರಕ್ಕೆ ಬಲಿಯಾದ ಕುಟುಂಬಗಳ ನೋವಿಗೆ ಮತ್ತೆ ಸ್ಪಂದನೆ ಸಿಗುತ್ತಿದೆ. ಮೂರು ದಶಕಗಳ ಹಿಂದಿನ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಹಿಂದೆ ತನಿಖೆ ನಡೆಸಿದ್ದ ಪೊಲೀಸರು ಈ ಪ್ರಕರಣಕ್ಕೆ ಆಗಲೇ ಮುಕ್ತಾಯ ಹಾಡಿದ್ದಾರೆ. ಆರೋಪಿಗಳಾದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್ ಟೈಟ್ಲರ್, ಸೋನಿಯಾ ಗಾಂಧಿ ವಿರುದ್ಧ ಕೂಡಾ ಪ್ರಕರಣಗಳು ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಸದ್ಯಕ್ಕೆ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ಬಿಸಿ ಇದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸುತ್ತಿಲ್ಲ. ಚುನಾವಣಾ ಪ್ರಕ್ರಿಯೆಗಳು ಮುಗಿದ ನಂತರ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ ಎಂದು ತಿಳಿದು ಬಂದಿದೆ. [ಸಿಖ್ ನರಮೇಧ : ಸಜ್ಜನ್ ಕುಮಾರ್ ಖುಲಾಸೆ]

ಇಂಥ ಹಲವು ಪ್ರಕರಣಗಳನ್ನು ಕುರಿತಂತೆ ವರದಿ ನೀಡಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಿ.ಸಿ.ಮಾಥುರ್ ನೇತೃತ್ವದ ಸಮಿತಿಯು ಅಧ್ಯಯನ ನಡೆಸಿ, ಸುಮಾರು 225 ಇದೇ ರೀತಿಯ ಮರು ಪರಿಶೀಲನೆಗೆ ಅರ್ಹವಾದ ಪ್ರಕರಣದ ಕಡತಗಳು ಬಾಕಿ ಇವೆ ಎಂದು ಹೇಳಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಖಾತೆ ಸಚಿವಾಲಯ ಈ ಸಮಿತಿ ರಚಿಸಿದೆ. [ಸಿಖ್ ದಂಗೆ: ರಾಹುಲ್ ಗೆ ವಿಶ್ವೇಶ್ವರ್ ಭಟ್ ಪ್ರಶ್ನೆಗಳು]
ಹಲವು ಪ್ರಕರಣಗಳಲ್ಲಿ ನಿರ್ಣಾಯಕ ಸಾಕ್ಷಿ ಪುರಾವೆಗಳನ್ನು ನಿರ್ಲಕ್ಷಿಸಲಾಗಿದ್ದು, ಅವನ್ನು ಮರು ಪರಿಶೀಲಿಸುವ ಅಗತ್ಯವಿದೆ. ಪ್ರಕರಣಗಳ ಮರು ಪರಿಶೀಲನೆಗೆ ಕಳೆದ ಡಿಸೆಂಬರ್ನಲ್ಲಿ ನ್ಯಾಯಮೂರ್ತಿ ಜಿ.ಸಿ.ಮಾಥುರ್ ಸಮಿತಿ ರಚಿಸಿ 45 ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸಜ್ಜನ್ ಕುಮಾರ್ ಹಾಗೂ ಜಗದೀಶ್ ಟೈಟ್ಲರ್ ಅವರ ಹೆಸರುಗಳು ಪ್ರಮುಖವಾಗಿವೆ.
ಏನಿದು ಪ್ರಕರಣ?: 1984ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರು ಪ್ರಮುಖ ಆರೋಪಿಯಾಗಿದ್ದರು.
ಸಜ್ಜನ್ ಕುಮಾರ್ ಅವರು ದೆಹಲಿಯ ಕಂಟೋನ್ಮೆಂಟ್ ಬಳಿ ಸಿಖ್ ಧರ್ಮೀಯರ ಮೇಲೆ ತಮ್ಮ ಬೆಂಬಲಿಗರಿಂದ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಅಲ್ಲದೆ ಹಿಂಸಾಚಾರಕ್ಕೆ ಬೆಂಬಲ ನೀಡಿದ್ದರೂ ಎಂದು ಅವರ ವಿರುದ್ಧ 2 ಪ್ರಕರಣಗಳನ್ನು ದಾಖಲಿಸಲಾಗಿತ್ತು.
ನ್ಯಾಯಮೂರ್ತಿ ನಾನಾವತಿ ಆಯೋಗದ ಶಿಫಾರಸ್ಸಿನ ಆಧಾರದ ಮೇಲೆ ಸಜ್ಜನ್ ಕುಮಾರ್ ವಿರುದ್ಧ 2005ರಲ್ಲಿ ಮೊಕದ್ದಮೆ ದಾಖಲಾಗಿತ್ತು. ಅಲ್ಲದೆ ಸಿಬಿಐ 2010 ಜನವರಿಯಲ್ಲಿ ಕುಮಾರ್ ವಿರುದ್ಧ 2 ಚಾರ್ಜ್ಶೀಟ್ಗಳನ್ನು ಸಲ್ಲಿಸಿತ್ತು. (ಪಿಟಿಐ)
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications