ಸಿಖ್ ದಂಗೆ ಆರೋಪಿಗಳಿಗೆ ಮತ್ತೆ ನಡುಕ ಶುರು
ನವದೆಹಲಿ, ಫೆ.1: 1984ರಲ್ಲಿ ನಡೆದಿದ್ದ ಸಿಖ್ ದಂಗೆಯ ಸಂದರ್ಭ ಹಿಂಸಾಚಾರಕ್ಕೆ ಬಲಿಯಾದ ಕುಟುಂಬಗಳ ನೋವಿಗೆ ಮತ್ತೆ ಸ್ಪಂದನೆ ಸಿಗುತ್ತಿದೆ. ಮೂರು ದಶಕಗಳ ಹಿಂದಿನ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಹಿಂದೆ ತನಿಖೆ ನಡೆಸಿದ್ದ ಪೊಲೀಸರು ಈ ಪ್ರಕರಣಕ್ಕೆ ಆಗಲೇ ಮುಕ್ತಾಯ ಹಾಡಿದ್ದಾರೆ. ಆರೋಪಿಗಳಾದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್ ಟೈಟ್ಲರ್, ಸೋನಿಯಾ ಗಾಂಧಿ ವಿರುದ್ಧ ಕೂಡಾ ಪ್ರಕರಣಗಳು ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಸದ್ಯಕ್ಕೆ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ಬಿಸಿ ಇದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸುತ್ತಿಲ್ಲ. ಚುನಾವಣಾ ಪ್ರಕ್ರಿಯೆಗಳು ಮುಗಿದ ನಂತರ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ ಎಂದು ತಿಳಿದು ಬಂದಿದೆ. [ಸಿಖ್ ನರಮೇಧ : ಸಜ್ಜನ್ ಕುಮಾರ್ ಖುಲಾಸೆ]

ಇಂಥ ಹಲವು ಪ್ರಕರಣಗಳನ್ನು ಕುರಿತಂತೆ ವರದಿ ನೀಡಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಿ.ಸಿ.ಮಾಥುರ್ ನೇತೃತ್ವದ ಸಮಿತಿಯು ಅಧ್ಯಯನ ನಡೆಸಿ, ಸುಮಾರು 225 ಇದೇ ರೀತಿಯ ಮರು ಪರಿಶೀಲನೆಗೆ ಅರ್ಹವಾದ ಪ್ರಕರಣದ ಕಡತಗಳು ಬಾಕಿ ಇವೆ ಎಂದು ಹೇಳಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಖಾತೆ ಸಚಿವಾಲಯ ಈ ಸಮಿತಿ ರಚಿಸಿದೆ. [ಸಿಖ್ ದಂಗೆ: ರಾಹುಲ್ ಗೆ ವಿಶ್ವೇಶ್ವರ್ ಭಟ್ ಪ್ರಶ್ನೆಗಳು]
ಹಲವು ಪ್ರಕರಣಗಳಲ್ಲಿ ನಿರ್ಣಾಯಕ ಸಾಕ್ಷಿ ಪುರಾವೆಗಳನ್ನು ನಿರ್ಲಕ್ಷಿಸಲಾಗಿದ್ದು, ಅವನ್ನು ಮರು ಪರಿಶೀಲಿಸುವ ಅಗತ್ಯವಿದೆ. ಪ್ರಕರಣಗಳ ಮರು ಪರಿಶೀಲನೆಗೆ ಕಳೆದ ಡಿಸೆಂಬರ್ನಲ್ಲಿ ನ್ಯಾಯಮೂರ್ತಿ ಜಿ.ಸಿ.ಮಾಥುರ್ ಸಮಿತಿ ರಚಿಸಿ 45 ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸಜ್ಜನ್ ಕುಮಾರ್ ಹಾಗೂ ಜಗದೀಶ್ ಟೈಟ್ಲರ್ ಅವರ ಹೆಸರುಗಳು ಪ್ರಮುಖವಾಗಿವೆ.
ಏನಿದು ಪ್ರಕರಣ?: 1984ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರು ಪ್ರಮುಖ ಆರೋಪಿಯಾಗಿದ್ದರು.
ಸಜ್ಜನ್ ಕುಮಾರ್ ಅವರು ದೆಹಲಿಯ ಕಂಟೋನ್ಮೆಂಟ್ ಬಳಿ ಸಿಖ್ ಧರ್ಮೀಯರ ಮೇಲೆ ತಮ್ಮ ಬೆಂಬಲಿಗರಿಂದ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಅಲ್ಲದೆ ಹಿಂಸಾಚಾರಕ್ಕೆ ಬೆಂಬಲ ನೀಡಿದ್ದರೂ ಎಂದು ಅವರ ವಿರುದ್ಧ 2 ಪ್ರಕರಣಗಳನ್ನು ದಾಖಲಿಸಲಾಗಿತ್ತು.
ನ್ಯಾಯಮೂರ್ತಿ ನಾನಾವತಿ ಆಯೋಗದ ಶಿಫಾರಸ್ಸಿನ ಆಧಾರದ ಮೇಲೆ ಸಜ್ಜನ್ ಕುಮಾರ್ ವಿರುದ್ಧ 2005ರಲ್ಲಿ ಮೊಕದ್ದಮೆ ದಾಖಲಾಗಿತ್ತು. ಅಲ್ಲದೆ ಸಿಬಿಐ 2010 ಜನವರಿಯಲ್ಲಿ ಕುಮಾರ್ ವಿರುದ್ಧ 2 ಚಾರ್ಜ್ಶೀಟ್ಗಳನ್ನು ಸಲ್ಲಿಸಿತ್ತು. (ಪಿಟಿಐ)
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications