ಗುಂಪು ಹತ್ಯೆ ತಡೆಗೆ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ನವದೆಹಲಿ, ಜುಲೈ 24: ಗುಂಪು ಹತ್ಯೆ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ಸೋಮವಾರ ರಚಿಸಿದೆ.
ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದ ಸಮಿತಿಯು ನಾಲ್ಕು ವಾರಗಳ ಒಳಗೆ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಲಿದೆ.
ಈ ಸಂಬಂಧ ಹೇಳಿಕೆ ಹೊರಡಿಸಿರುವ ಕೇಂದ್ರ ಸರ್ಕಾರ, ದೇಶದ ಕೆಲವು ಭಾಗಗಳಲ್ಲಿ ಜನರ ಗುಂಪುಗಳು ನಡೆಸುತ್ತಿರುವ ಹಿಂಸಾಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಳವಳವಿದೆ.

ಇಂತಹ ಘಟನೆಗಳನ್ನು ಸರ್ಕಾರ ಈಗಾಗಲೇ ಖಂಡಿಸಿದೆ. ಇಂತಹ ಘಟನಾವಳಿಗಳನ್ನು ತಡೆಗಟ್ಟುವ ಉದ್ದೇಶದಿಂದ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲು ಹಾಗೂ ಸೂಕ್ತ ಕಾನೂನುಗಳನ್ನು ಜಾರಿಗೊಳಿಸಲು ಬದ್ಧವಾಗಿದೆ ಎಂದು ಸಂಸತ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತಿದೆ ಎಂದು ಹೇಳಿಕೆ ತಿಳಿಸಿದೆ.
ಸಂವಿಧಾನದ ಪ್ರಕಾರ ಪೊಲೀಸ್ ಮತ್ತು ಸಾರ್ವಜನಿಕ ಸುವ್ಯವಸ್ಥೆ ಎನ್ನುವುದು ರಾಜ್ಯಗಳ ವಿಚಾರ. ಅಪರಾಧಗಳನ್ನು ನಿಯಂತ್ರಿಸುವುದು, ಕಾನೂನು ಹಾಗೂ ಸುವ್ಯವಸ್ಥೆಗಳನ್ನು ನಿಭಾಯಿಸುವುದು ಹಾಗೂ ನಾಗರಿಕರ ಜೀವ ಮತ್ತು ಆಸ್ತಿಗಳಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರಗಳ ಹೊಣೆ.
ತಮ್ಮ ಕಾನೂನು ವ್ಯಾಪ್ತಿಯೊಳಗೆ ಅಪರಾಧಗಳನ್ನು ತಡೆಗಟ್ಟಲು ಕಾನೂನುಗಳನ್ನು ರೂಪಿಸಲು ಹಾಗೂ ಜಾರಿ ಮಾಡಲು ಅವರಿಗೆ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ನ್ಯಾಯಾಂಗ ಇಲಾಖೆ, ಕಾನೂನು ವ್ಯವಹಾರಗಳ ಇಲಾಖೆ, ಸಂಸದೀಯ ಇಲಾಖೆ, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಗಳ ಕಾರ್ಯದರ್ಶಿಗಳು ಈ ಸಮಿತಿಯ ಸದಸ್ಯರಾಗಿರುತ್ತಾರೆ.
ಗುಂಪು ಹತ್ಯೆ ಮತ್ತು ಹಿಂಸಾಚಾರದಂತಹ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕಾನೂನನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ ವಾರದ ಬಳಿಕ ಕೇಂದ್ರ ಈ ಕ್ರಮ ಕೈಗೊಂಡಿದೆ.
-
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications