ಲಸಿಕೆಗಳ ನಡುವಿನ ಅಂತರ ಕಡಿಮೆಗೊಳಿಸುವ ಬಗ್ಗೆ ಕೇಂದ್ರ ಹೇಳಿದ್ದಿಷ್ಟು!
ನವದೆಹಲಿ, ಜೂನ್ 11: ಇಂಗ್ಲೆಂಡ್ನಲ್ಲಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ವರದಿಗಳ ಆಧಾರದಲ್ಲಿ ಲಸಿಕೆಯ ಎರಡು ಡೋಸ್ಗಳ ನಡುವಿನ ಆಂತರವನ್ನು ಕಡಿಮೆಗೊಳಿಸಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ. ಆದರೆ ಇದಕ್ಕೆ ಕೇಂದ್ರ ಆರೋಗ್ಯ ಸಂಸ್ಥೆ ಪ್ರತಿಕ್ರಿಯಿಸಿದ್ದು ಈ ವರದಿಯಿಂದ ಆತಂಕಗೊಳ್ಳುವ ಸಂಗತಿಗಳು ಇಲ್ಲ. ಈ ನಿರ್ಧಾರಗಳನ್ನು ತಜ್ಞರ ಕೂಲಂಕುಷ ಪರೀಕ್ಷೆಗಳ ನಂತರವೇ ತೆಗೆದುಕೊಳ್ಳಲಾಗಿದೆ ಎಂದು ನೀತಿ ಆಯೋಗದ ಸದಸ್ಯ ಡಾ ವಿಕೆ ಪೌಲ್ ತಿಳಿಸಿದ್ದಾರೆ.
ಇನ್ನು ಕೊರೊನಾವೈರಸ್ನಿಂದ ಚೇತರಿಸಿಕೊಂಡವರನ್ನು ಲಸಿಕೆ ಅಭಿಯಾನದಿಂದ ಹೊರಗಿಡಬಹುದು ಎಂಬ ತಜ್ಞರ ಸಲಹೆಗಳ ಬಗ್ಗೆಯೂ ಡಾ.ಪೌಲ್ ಪ್ರತಿಕ್ರಿಯಿಸಿದ್ದು ಇಂತಾ ಚರ್ಚೆಗಳು ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆಯಾಗಬೇಕು ಎಂದು ತಿಳಿಸಿದ್ದಾರೆ. ವಿಸ್ತಾರ ದೃಷ್ಟಿಕೋನದಲ್ಲಿ ಈ ವಿಚಾರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಇಂತಾ ವಿಚಾರಗಳಲ್ಲಿ ಯಾವುದೇ ಹಾರ್ಡ್ಕೋರ್ ಸಿದ್ಧಾಂತಗಳು ಇಲ್ಲ. ಇತ್ತೀಚಿನ ಬೆಳವಣಿಗೆಗಳೊಂದಿಗೆ ನಮ್ಮ ತಜ್ಞರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ಭಾರತದಲ್ಲಿ ಕೋವಿಶೀಲ್ಡ್ನ ಎರಡು ಲಸಿಕೆಗಳ ನಡುವಿನ ಅಂತರವನ್ನು 12 ರಿಂದ 16 ವಾರಗಳಿಗೆ ವಿಸ್ತರಿಸಲಾಯಿತು. ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ನೀಡುವ ರಕ್ಷಣೆ ದೀರ್ಘಕಾಲ ಇರುತ್ತದೆ ಎಂಬ ಅಂತಾರಾಷ್ಟ್ರೀಯ ಅಧ್ಯಯನಗಳ ಆಧಾರದ ಮೇಲೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಆದ್ದರಿಂದ, ಎರಡನೇ ಡೋಸ್ ವಿಳಂಬಗೊಳಿಸಬಹುದು ಎಂದು ಡಾ. ಪೌಲ್ ಹೇಳಿದ್ದಾರೆ.

ಆದರೆ ಇಂಗ್ಲೆಂಡ್ನ ಆರೋಗ್ಯ ಇಲಾಖೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಲಸಿಕೆಯ ಮೊದಲ ಡೋಸ್ ರಕ್ಷಣೆ ನೀಡುವ ಪ್ರಮಾಣ ಈ ಮೊದಲು ಅಂದಾಜಿಸಿರುವುದಕ್ಕಿಂತ ಕಡಿಮೆಯಾಗಿದೆ. ಈ ವರದಿಯ ಆಧಾರದಲ್ಲಿ ಅಲ್ಲಿ ಲಸಿಕೆಯ ನಡುವಿನ ಅಂತರವನ್ನು ಈಗಾಗಲೇ ಕಡಿಮೆಗೊಳಿಸಲಾಗಿದೆ. ಉತ್ತರ ಐರ್ಲೆಂಡ್ನಲ್ಲಿ ಲಭ್ಯವಿರುವ ಎಲ್ಲಾ ಲಸಿಕೆಗಳಿಗೆ ಇದ್ದ 10 ರಿಂದ 12 ವಾರಗಳ ಅಂತರವನ್ನು ಎಂಟು ವಾರಗಳಿಗೆ ಇಳಿಸಿದೆ.
ಹೊಸ ಅಧ್ಯಯನದ ವರದಿಯ ಪ್ರಕಾರ ಆಸ್ಟ್ರಜನಿಕಾ(ಭಾರತದಲ್ಲಿ ಕೋವಿಶೀಲ್ಡ್) ಲಸಿಕೆಯ ಮೊದಲ ಡೋಸ್ ಭಾರತದಲ್ಲಿ ಮೊದಲಿಗೆ ಪತ್ತೆಯಾದ 'ಡೆಲ್ಟಾ' ಮಾದರಿಯ ವಿರುದ್ಧ 33 ಪ್ರತಿಶತದಷ್ಟು ಮಾತ್ರ ರಕ್ಷಣೆಯನ್ನು ನೀಡುತ್ತದೆ. ಎರಡನೇ ಡೋಸ್ ಇದರ ಪ್ರಮಾಣವನ್ನು ಹೆಚ್ಚುಗೊಳಿಸಿ 60 ಶೇಕಡಾದಷ್ಟು ರಕ್ಷಣೆಯನ್ನು ನೀಡುತ್ತದೆ ಎಂದು ತಿಳಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications