ಸತತ ಐದನೇ ದಿನ ಚಂದಾ ಕೊಚ್ಚರ್ ದಂಪತಿ ವಿಚಾರಣೆ ನಡೆಸಿದ ಇ.ಡಿ.
ನವದೆಹಲಿ, ಮೇ 17: ಜಾರಿ ನಿರ್ದೇಶನಾಲಯವು (ಇಡಿ) ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಆಕೆಯ ಪತಿ ದೀಪಕ್ ಕೊಚ್ಚರ್ ನನ್ನು ಸತತ ಐದನೇ ದಿನವಾದ ಶುಕ್ರವಾರವೂ ವಿಚಾರಣೆ ನಡೆಸಿದೆ. ವಿಡಿಯೋಕಾನ್ ನ 1875 ಕೋಟಿ ರುಪಾಯಿ ಸಾಲ ಹಗರಣದ ಸಂಬಂಧ ಈ ವಿಚಾರಣೆ ನಡೆದಿದೆ.
ದಕ್ಷಿಣ ದೆಹಲಿಯ ಖಾನ್ ಮಾರ್ಕೆಟ್ ನಲ್ಲಿರುವ ಜಾರಿ ನಿರ್ದೇಶನಾಲಯದ ಮುಖ್ಯ ಕಚೇರಿಗೆ ಬೆಳಗ್ಗೆ 11 ಗಂಟೆ ಹೊತ್ತಿಗೆ ಈ ದಂಪತಿ ಬಂದರು. ಇಡಿಯಿಂದ ಕೇಳಲಾಗಿದ್ದ ದಾಖಲಾತಿಗಳ ಹೊಸ ಸೆಟ್ ಗಳನ್ನು ತಂದಿದ್ದರು. ವಿಡಿಯೋಕಾನ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಜತೆಗಿನ ವ್ಯಾಪಾರಗಳು ಹಾಗೂ ಹಣಕಾಸು ವ್ಯವಹಾರಗಳನ್ನು ಅಧಿಕಾರಿಗಳು ಪ್ರಶ್ನಿಸಿದ್ದಾರೆ.
ಐಸಿಐಸಿಐ ಬ್ಯಾಂಕ್ ನಿಂದ ವಿಡಿಯೋಕಾನ್ ಗೆ ಮಂಜೂರಾದ 1875 ಕೋಟಿ ರುಪಾಯಿಯಲ್ಲಿನ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಬಗ್ಗೆ ಆರೋಪ ಇದೆ. ಇದು ಎಂಟರಿಂದ ಹತ್ತು ವರ್ಷಗಳ ಹಿಂದೆ ಐಸಿಐಸಿಐ ಬ್ಯಾಂಕ್ ಹಾಗೂ ವಿಡಿಯೋಕಾನ್ ನ ಮಧ್ಯೆ ನಡೆದ ವ್ಯವಹಾರವಾಗಿದೆ.

ಒಂದು ಕಡೆ ಬ್ಯಾಂಕ್ ನಿಂದ ಸಾಲ ಕೊಡಿಸಿ, ಆಗ ಸಿಇಒ ಆಗಿದ್ದ ಚಂದಾ ಕೊಚ್ಚರ್ ತಮ್ಮ ಪತಿಗೆ ಸೇರಿದ ನ್ಯೂಪವರ್ ರೀನಿವಬಲ್ಸ್ ಕಂಪೆನಿಗೆ ಕಾನೂನು ಬಾಹಿರವಾಗಿ ಕೋಟ್ಯಂತರ ರುಪಾಯಿ ಪಡೆದಿದ್ದಾರೆ ಎಂಬುದು ಆರೋಪ. ಕಳೆದ ತಿಂಗಳು ಕೂಡ ಕೊಚ್ಚರ್ ದಂಪತಿಯನ್ನು ಮುಂಬೈನಲ್ಲಿ ಹಲವು ಬಾರಿ ವಿಚಾರಣೆಗೆ ಒಳಪಡಿಸಲಾಗಿದೆ. ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ವಿಚಾರಣೆ ನಡೆಸಲಾಗಿದೆ.
ಮೇ ಹದಿಮೂರನೇ ತಾರೀಕಿನಿಂದ ಪ್ರತಿ ದಿನ ಎಂಟರಿಂದ ಒಂಬತ್ತು ಗಂಟೆ ವಿಚಾರಣೆ ನಡೆಸಲಾಗುತ್ತಿದೆ. 2017ರ ಕೊನೆಗೆ 40 ಸಾವಿರ ಕೋಟಿ ರುಪಾಯಿಯನ್ನು ವಿಡಿಯೋಕಾನ್ ಗ್ರೂಪ್ ಬಾಕಿ ಉಳಿಸಿಕೊಂಡಿತ್ತು. ಆ ನಂತರ ಬ್ಯಾಂಕ್ ನಿಂದ 2810 ಕೋಟಿ ರುಪಾಯಿಯನ್ನು ಅನುತ್ಪಾದಕ ಸಾಲ (ನಾನ್ ಪರ್ ಫಾರ್ಮಿಂಗ್ ಅಸೆಟ್ಸ್) ಎಂದು ಘೋಷಿಸಲಾಯಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications