ಅಗಸ್ಟಾ ವೆಸ್ಟ್ ಲ್ಯಾಂಡ್: ಇಟಲಿ ಮಹಿಳೆಯ ಮಗನ ಹೆಸರು ಹೇಳಿದ ಮೈಕಲ್
ನವದೆಹಲಿ, ಡಿಸೆಂಬರ್ 29: ಭಾರಿ ವಿವಾದ ಕೆರಳಿಸಿರುವ ಅಗಸ್ಟಾ ವೆಸ್ಟ್ ಲ್ಯಾಂಡ್ ಅತಿ ಗಣ್ಯರ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಬಂಧಿತನಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್, ವಿಚಾರಣೆ ವೇಳೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಹೆಸರು ಬಹಿರಂಗಪಡಿಸಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿಯ ನ್ಯಾಯಾಲಯವೊಂದಕ್ಕೆ ಶನಿವಾರ ತಿಳಿಸಿದೆ.
ಅಲ್ಲದೆ, 'ಇಟಲಿಯ ಮಹಿಳೆಯ ಮಗ' ಮತ್ತು ಅವರು 'ದೇಶದ ಮುಂದಿನ ಪ್ರಧಾನಿಯಾಗಲು ಹೊರಟಿದ್ದಾರೆ' ಎಂದು ರಾಹುಲ್ ಗಾಂಧಿ ಅವರ ಬಗ್ಗೆ ಮೈಕಲ್ ಉಲ್ಲೇಖಿಸಿದ್ದಾನೆ ಎಂದು ಇ.ಡಿ ವಕೀಲರು ತಿಳಿಸಿದ್ದಾರೆ.
ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಕ್ರಿಶ್ಚಿಯನ್ ಮೈಕಲ್ನನ್ನು ಈ ತಿಂಗಳ ಆರಂಭದಲ್ಲಿ ಯುಎಇಯಿಂದ ಗಡಿಪಾರು ಮಾಡಲಾಗಿತ್ತು. ಮೈಕಲ್ ಭಾರತಕ್ಕೆ ಬಂದಿಳಿಯುತ್ತಿದ್ದಂತೆಯೇ ಬಂಧಿಸಲಾಗಿತ್ತು. ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಇ.ಡಿ ವಶಕ್ಕೆ ನೀಡಿತ್ತು.

ಕ್ರಿಶ್ಚಿಯನ್ ಮೈಕಲ್ ಮತ್ತು ಇತರೆ ವ್ಯಕ್ತಿಗಳ ನಡುವೆ ಸಂವಹನದಲ್ಲಿ ಬಳಕೆಯಾಗಿರುವ 'ಆರ್' ಎಂಬ ದೊಡ್ಡ ವ್ಯಕ್ತಿ ಯಾರು ಎಂಬುದನ್ನು ಭೇದಿಸಬೇಕಿದೆ. ಈ ರಹಸ್ಯ ಭೇದಿಸಲು ಮೈಕಲ್ನನ್ನು ಇತರೆ ಕೆಲವು ವ್ಯಕ್ತಿಗಳೊಂದಿಗೆ ಮುಖಾಮುಖಿಯನ್ನಾಗಿಸಬೇಕಿದೆ ಎಂದು ಇ.ಡಿ. ಕೋರ್ಟ್ಗೆ ತಿಳಿಸಿದೆ.
ವಿವಿಐಪಿ ಹೆಲಿಕಾಪ್ಟರ್ಗಳ ಪೂರೈಕೆಗೆ ಸಂಬಂಧಿಸಿದಂತೆ 2010ರ ಫೆಬ್ರುವರಿ 8ರಂದು ನಡೆದ ಒಪ್ಪಂದದಲ್ಲಿ 2,666 ಕೋಟಿ ನಷ್ಟ ಸಂಭವಿಸಿದೆ ಎಂದು ಸಿಬಿಐ ಆರೋಪಿಸಿತ್ತು. ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪೆನಿಯಿಂದ ಕ್ರಿಶ್ಚಿಯನ್ ಮೈಕಲ್ 225 ಕೋಟಿ ರೂ ಪಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications