ಮೋದಿ ಜತೆ ವಿದೇಶಕ್ಕೆ ಪ್ರಯಾಣಿಸಿದವರ ಹೆಸರು ಬಹಿರಂಗಕ್ಕೆ ಸೂಚನೆ
ನವದೆಹಲಿ, ಆಗಸ್ಟ್ 4: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಭೇಟಿಗಳ ಸಂದರ್ಭದಲ್ಲಿ ಅವರ ಜತೆಗೆ ಪ್ರಯಾಣಿಸಿದ ಖಾಸಗಿ ವ್ಯಕ್ತಿಗಳ ಹೆಸರುಗಳನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗವು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಪ್ರಧಾನಿ ಮೋದಿ ಅವರು 2015-16, 2016-17ನೇ ಸಾಲಿನಲ್ಲಿ ಮಾಡಿದ ವಿದೇಶ ಪ್ರಯಾಣಗಳ ವೆಚ್ಚ ಹಾಗೂ ಅವರ ಜತೆಗೆ ಪ್ರಯಾಣಿಸಿದವರ ಹೆಸರುಗಳ ಪಟ್ಟಿಯ ಮಾಹಿತಿ ನೀಡುವಂತೆ ಕಳೆದ ಅಕ್ಟೋಬರ್ನಲ್ಲಿ ಕರಬಿ ದಾಸ್ ಎಂಬುವವರು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.
ಆದರೆ, ಸಚಿವಾಲಯದಿಂದ ತೃಪ್ತಿಕರ ಉತ್ತರ ದೊರಕದ ಹಿನ್ನೆಲೆಯಲ್ಲಿ ಅವರು ಕೇಂದ್ರ ಮಾಹಿತಿ ಆಯೋಗದ ಮೊರೆ ಹೋಗಿದ್ದರು.

ಮಾಹಿತಿ ಒದಗಿಸಲು 224 ರೂ. ಠೇವಣಿ ಇರಿಸುವಂತೆ ಸಚಿವಾಲಯ ಸೂಚಿಸಿತ್ತು ಎಂದು ಅರ್ಜಿದಾರರ ಪರ ಹಾಜರಿದ್ದ ಕಾರ್ಯಕರ್ತ ಸುಭಾಷ್ ಅಗರ್ವಾಲ್ ಮಾಹಿತಿ ಆಯುಕ್ತ ಆರ್ಕೆ ಮಾಥೂರ್ ಅವರಿಗೆ ವಿಚಾರಣೆ ವೇಳೆ ತಿಳಿಸಿದರು.
ಪ್ರಧಾನಿಯವರ ಪ್ರಯಾಣದ ದಿನಾಂಕ, ಭೇಟಿಯ ಸ್ಥಳ ಮತ್ತು ವಿಮಾನ ಪ್ರಯಾಣದ ವೆಚ್ಚ ಹೊರತುಪಡಿಸಿ ಉಳಿದ ಯಾವುದೇ ಮಾಹಿತಿಗಳನ್ನು ನಿರ್ವಹಿಸಿಲ್ಲ. 224 ರೂ ಹಣ ಪಾವತಿಯ ಬಗ್ಗೆ ಮರುಪರಿಶೀಲನೆ ನಡೆಸಿ ಹೊಸ ಮಾಹಿತಿಯನ್ನು ಒದಗಿಸುವುದಾಗಿ ಸಚಿವಾಲಯ ಆಯೋಗಕ್ಕೆ ತಿಳಿಸಿತು.
ಆದರೆ, ಅರ್ಜಿದಾರರ ವಾದವನ್ನು ಮಾನ್ಯ ಮಾಡಿದ ಆಯುಕ್ತರು, ಸರ್ಕಾರಿ ವೆಚ್ಚದಲ್ಲಿ ಮೋದಿ ಅವರೊಂದಿಗೆ ಪ್ರಯಾಣಿಸಿದ ಖಾಸಗಿ ವ್ಯಕ್ತಿಗಳಿಗೆ (ಭದ್ರತೆಗೆ ಸಂಬಂಧಿಸದವರು) ಮಾಡಿದ ವೆಚ್ಚ ಮತ್ತು ಹೆಸರುಗಳನ್ನು ಅರ್ಜಿದಾರರಿಗೆ ಒದಗಿಸುವಂತೆ ಆದೇಶಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications