ರಾಜ್ಯಸಭೆಯಲ್ಲೂ ಪೌರತ್ವ ಮಸೂದೆ ಅಂಗೀಕಾರ ಅಕ್ರಮ ವಲಸೆಗೆ ಶೀಘ್ರವೇ ಬ್ರೇಕ್
ನವದೆಹಲಿ, ಡಿಸೆಂಬರ್ 11: ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ರಾಜ್ಯಭೆಯಲ್ಲಿ ಮಂಡಿಸಿದ್ದಾರೆ.
ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೂ ಲೋಕಸಭೆಯಲ್ಲಿ ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ, 2019 (ಕ್ಯಾಬ್) ಸೋಮವಾರ ಅಂಗೀಕಾರವಾಗಿತ್ತು.
ದೇಶದಾದ್ಯಂತ ಈ ಮಸೂದೆ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ. ಈಶಾನ್ಯ ರಾಜ್ಯಗಳಲ್ಲಿ ನಿರಂತರ ಪ್ರತಿಭಟನೆ ಮುಷ್ಕರಗಳು ನಡೆಯುತ್ತಿವೆ. ಅದರ ನಡುವೆಯೇ ಗೃಹ ಸಚಿವ ಅಮಿತ್ ಶಾ ಮಸೂದೆಯನ್ನು ಮಂಡಿಸಿದರು.
ಪೌರತ್ವ ತಿದ್ದುಪಡಿ ಮಸೂದೆ, 2019ರ (ಕ್ಯಾಬ್) ಪ್ರಕಾರ 2014ರ ಡಿ. 31ರ ಒಳಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನಗಳಿಂದ ಧಾರ್ಮಿಕ ಶೋಷಣೆಗೆ ಒಳಪಟ್ಟು ಭಾರತಕ್ಕೆ ನಿರಾಶ್ರಿತರಾಗಿ ಬಂದ ಹಿಂದೂ, ಕ್ರೈಸ್ತ, ಸಿಖ್, ಬೌದ್ಧ, ಜೈನ ಮತ್ತು ಪಾರ್ಸಿ ಸಮುದಾಯಗಳ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸದೆ ಅವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಮಿಜೋರಾಂ ಈ ಮಸೂದೆಯಿಂದ ಸಂಪೂರ್ಣವಾಗಿ ವಿನಾಯಿತಿ ಪಡೆದಿವೆ. ಮೇಘಾಲಯ, ಅಸ್ಸಾಂನ ಕೆಲವು ಭಾಗಗಳು ಮತ್ತು ತ್ರಿಪುರಾ ಬಹುತೇಕ ವಿನಾಯಿತಿ ಪಡೆದಿವೆ. ಆದರೆ ಮಣಿಪುರ ಸಂಪೂರ್ಣವಾಗಿ ಈ ಮಸೂದೆ ವ್ಯಾಪ್ತಿಗೆ ಒಳಪಡಲಿದೆ. ಮಣಿಪುರಕ್ಕೆ ಸಂಬಂಧಿಸಿದಂತೆ ಸರ್ಕಾರವು ವಿಶೇಷ ಪ್ರಾತಿನಿಧ್ಯಗಳನ್ನು ಘೋಷಿಸುವ ಸಾಧ್ಯತೆ ಇದೆ.
A landmark day for India and our nation’s ethos of compassion and brotherhood!
— Narendra Modi (@narendramodi) December 11, 2019
Glad that the #CAB2019 has been passed in the #RajyaSabha. Gratitude to all the MPs who voted in favour of the Bill.
This Bill will alleviate the suffering of many who faced persecution for years.