ಉತ್ತರಾಧಿಕಾರಿ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಬರೆದ ದೀಪಕ್ ಮಿಶ್ರಾ
ನವದೆಹಲಿ, ಸೆಪ್ಟೆಂಬರ್ 04: ನ್ಯಾ.ರಂಜನ್ ಗೋಗಾಯ್ ಅವರನ್ನು ಸುಪ್ರೀಂ ಕೋರ್ಟಿನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸುವಂತೆ ಹಾಲಿ ಸಿಜೆಐ ದೀಪಕ್ ಮಿಶ್ರಾ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಅಕ್ಟೋಬರ್ 2 ರಂದು ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಅಂತ್ಯಗೊಳ್ಳಲಿದ್ದು, ರಂಜನ್ ಗೋಗಯ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಆರಿಸುವಂತೆ ಮಿಶ್ರಾ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
'ಸುಪ್ರೀಂ' ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ನೇಮಕ ಸಾಧ್ಯತೆ
ತಮ್ಮ ನಿವೃತ್ತಿಗೂ ಮುನ್ನ ಉತ್ತರಾಧಿಕಾರಿಯ ಹೆಸರನ್ನು ಹಾಲಿ ಸಿಜೆಐ ಸರ್ಕಾರಕ್ಕೆ ಶೀಫಾರಸ್ಸು ಮಾಡುವುದು ಸಂಪ್ರದಾಯವಾಗಿದೆ. ಈ ಕುರಿತಂಟೆ ಮುಖ್ಯ ನ್ಯಾಯಮೂರ್ತಿ ಕಚೇರಿಯಿಂದ ಪತ್ರ ಬರೆಯಲಾಗಿದ್ದು, ಹಿರಿತನವನ್ನು ಪರಿಗಣಿಸಿಯೂ ರಂಜನ್ ಗೋಗಯ್ ಅವರನ್ನೇ ಮುಂದಿನ ಸಿಜೆಐ ಆಗಿ ನೇಮಿಸುವುದು ಬಹುತೇಕ ಖಚಿತವಾಗಿದೆ.
"ಸಿಜೆಐ ಪದಚ್ಯತಿಗೆ ನಕಾರ: ಕಾಂಗ್ರೆಸ್ ಕೊಳಕು ರಾಜಕೀಯಕ್ಕೆ ಉತ್ತರ!"
ಸರ್ಕಾರ ಈ ಶಿಫಾರಸ್ಸನ್ನು ಒಪ್ಪಿದ್ದೇ ಆದಲ್ಲಿ, ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೋಗಾಯ್ ಅಧಿಕಾರ ಸ್ವೀಕರಿಸಲಿದ್ದು, ಅವರು 2019 ರ ನವೆಂಬರ್ ವರೆಗೂ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ.