ಹಿಂಸಾಚಾರ ನಿಂತ ಬಳಿಕವೇ ಸಿಎಎ ಕುರಿತಾದ ಅರ್ಜಿಗಳ ವಿಚಾರಣೆ: ಸಿಜೆಐ
ನವದೆಹಲಿ, ಜನವರಿ 9: ರಾಷ್ಟ್ರವ್ಯಾಪಿ ನಡೆಯುತ್ತಿರುವ ಹಿಂಸಾಚಾರಗಳು ನಿಂತ ಬಳಿಕವೇ ಪೌರತ್ವ ತಿದ್ದುಪಡಿ ಕಾಯ್ದೆಯ ಸಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಹೇಳಿದರು.
ವಿವಾದಾತ್ಮಕ ಕಾಯ್ದೆಯನ್ನು ಸಂವಿಧಾನಬದ್ಧ ಎಂದು ಘೋಷಿಸುವಂತೆ ವಕೀಲ ವಿನೀತ್ ಧಂಡ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಸಿಜೆಐ, ಕಾಯ್ದೆ ವಿರುದ್ಧದ ಅರ್ಜಿಗಳ ವಿಚಾರಣೆ ಈಗ ನಡೆಸುವುದಿಲ್ಲ ಎಂದರು.
ಕಾಯ್ದೆ ಕುರಿತಂತೆ ದೇಶದಾದ್ಯಂತ ತೀವ್ರಮಟ್ಟದ ಹಿಂಸಾಚಾರ ನಡೆಯುತ್ತಿದೆ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರನ್ನು ಒಳಗೊಂಡ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

'ಸಂಸತ್ನ ಕಾಯ್ದೆಯನ್ನು ಸಂವಿಧಾನಬದ್ಧವಾಗಿದೆ ಎಂದು ನಾವು ಹೇಗೆ ಘೋಷಿಸಲು ಸಾಧ್ಯವಾಗುತ್ತದೆ? ಸಂವಿಧಾನಾತ್ಮಕತೆ ಕುರಿತು ಯಾವಾಗಲೂ ಕಲ್ಪನೆಗಳಿರುತ್ತವೆ! ಒಂದು ಕಾಲದಲ್ಲಿ ನೀವು ಕಾನೂನು ವಿದ್ಯಾರ್ಥಿಯಾಗಿದ್ದಿರಿ. ನಿಮಗೆ ಅದು ಗೊತ್ತಿರಬೇಕು. ಮೊದಲ ಬಾರಿಗೆ ನಾನು ಇಂತಹ ಪ್ರಾರ್ಥನೆ ಕೇಳುತ್ತಿದ್ದೇನೆ. ಕಾನೂನಿನ ಮಾನ್ಯತೆಯನ್ನು ನ್ಯಾಯಾಲಯ ನಿರ್ಧರಿಸಬೇಕೇ ಹೊರತು ಕಾನೂನು ಸಂವಿಧಾನಾತ್ಮಕ ಎಂದು ಘೋಷಿಸುವುದಲ್ಲ' ಎಂದು ನ್ಯಾಯಪೀಠ ಹೇಳಿತು.
'ದೇಶವು ಸಂಕಷ್ಟದ ಸಮಯವನ್ನು ಎದುರಿಸುತ್ತಿದೆ. ಶಾಂತಿ ಕಾಪಾಡಲು ಪ್ರಯತ್ನಗಳು ನಡೆಬೇಕಿದೆ. ಈ ಅರ್ಜಿಗಳು ಉದ್ದೇಶಕ್ಕೆ ನೆರವು ನೀಡುವುದಿಲ್ಲ' ಎಂದು ಅಭಿಪ್ರಾಯಪಟ್ಟಿತು.
ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸುದ್ದಿಪತ್ರಿಕೆಗಳು, ವಿದ್ಯುನ್ಮಾನ ಮಾಧ್ಯಮಗಳು ಹಾಗೂ ಇತರೆ ಮಾರ್ಗಗಳಲ್ಲಿ ನಿರಂತರ ಜಾಹೀರಾತು ನೀಡಿ ಪ್ರಚಾರ ಕೊಡಬೇಕು ಮತ್ತು ಇದು ಭಾರತದ ಸಂವಿಧಾನದ ಆಶಯ ಹಾಗೂ ಯಾವುದೇ ಪ್ರಜೆಯ ವಿರುದ್ಧವಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ನಿರ್ದೇಶನ ನೀಡುವಂತೆ ಧಂಡ ಕೋರಿದ್ದರು.
ಸಿಎಎ ಹೆಸರಿನಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸುವ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವ ರಾಜಕೀಯ ಪಕ್ಷಗಳನ್ನು ಗುರುತಿಸಿ ಅವುಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸುವಂತೆ ಕೂಡ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಎಲ್ಲ ರಾಜ್ಯ ಸರ್ಕಾರಗಳೂ ಸಿಎಎಯನ್ನು ತಮ್ಮ ರಾಜ್ಯದಲ್ಲಿ ಅಳವಡಿಸಿಕೊಳ್ಳುವಂತೆ ನಿರ್ದೇಶಿಸಲು ಕೋರಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications