ಪ್ರಧಾನಿ ಮೋದಿಗೆ ಸಿಎಂ ಎಚ್ಡಿಕೆ ನೀಡಿದ ಉಡುಗೊರೆ ಏನು ಗೊತ್ತಾ?
ನವದೆಹಲಿ, ಸೆಪ್ಟೆಂಬರ್ 10: ಕರ್ನಾಟಕದ ನೆರೆ-ಬರ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನಿಯೋಗ ಸೋಮವಾರ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು.
ರಾಜ್ಯದಲ್ಲಿ ನೆರೆ-ಬರ: ಸಿಎಂ ನೇತೃತ್ವದ ನಿಯೋಗದಿಂದ ಮೋದಿ ಭೇಟಿ
ಕುಮಾರಸ್ವಾಮಿಯವರು ಖ್ಯಾತ ಪ್ರವಾಸಿ ಲೇಖಕ ಡಾಮ್ ಮೊರೇಸ್ ಅವರು ಬರೆದ 'ದಿ ಓಪನ್ ಐಸ್: ಎ ಜರ್ನಿ ಥ್ರೂ ಕರ್ನಾಟಕ' ಎನ್ನುವ ವಿಶಿಷ್ಟ ಪುಸ್ತಕವನ್ನು ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.
ಕೇರಳ ಪ್ರವಾಹ: ಎಂಟು ದಿನ ಜತೆಗಿದ್ದರೂ ಇವರ ಗುರುತು ಯಾರಿಗೂ ಸಿಗಲಿಲ್ಲ!
ಕರ್ನಾಟಕ ಸರ್ಕಾರದ ಪರವಾಗಿ ವಾರ್ತಾ ಇಲಾಖೆಯು ಈ ಪುಸ್ತಕವನ್ನು 1976ರಲ್ಲಿ ಪ್ರಕಟಿಸಿತ್ತು. ಇದರ ಲೇಖಕ ಡಾಮ್ ಮೊರೇಸ್ ಭಾರತದ ಪ್ರತಿಭಾನ್ವಿತ ಕವಿ, ಅಂಕಣಕಾರ ಹಾಗೂ ಪ್ರವಾಸಿ ಲೇಖಕರಾಗಿದ್ದರು, ಕರ್ನಾಟಕದ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಈ ಕೃತಿಗೆ ಅಂತಾರಾಷ್ಟ್ರೀಯ ಮಟ್ಟದ ವ್ಯಂಗ್ಯಚಿತ್ರಕಾರ ಹಾಗೂ ಚಿತ್ರ ಕಲಾವಿದ ಪದ್ಮಭೂಷಣ ಮಾಡಿಯೋ ಮಿರಾಂಡ ಅವರು ಚಿತ್ರಗಳನ್ನು ಒದಗಿಸಿದ್ದರು.
ಕರ್ನಾಟಕದ ಪ್ರವಾಹ ಹಾಗೂ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಂಟಾಗಿರುವ ಬರದ ಕುರಿತು ವರದಿ ನೀಡಲು ಸಿಎಂ ಎಚ್ಡಿ ಕುಮಾರಸ್ವಾಮಿ , ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಸಂಸದ ಪ್ರತಾಪ್ ಸಿಂಹ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ ಅನೇಕರು ತೆರಳಿದ್ದರು. ತೆರಳಿದ್ದ ವೇಳೆ ರಾಜ್ಯಕ್ಕೆ 2 ಸಾವಿರ ರೂ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಲು ಒತ್ತಾಯಿಸಿದರು.