ದೆಹಲಿಯಲ್ಲಿ ಕುಮಾರಸ್ವಾಮಿ ಹಲವರ ಭೇಟಿ, ಹಲವು ಚರ್ಚೆ, ನೆರವಿಗೆ ಮನವಿ
ನವದೆಹಲಿ, ಆಗಸ್ಟ್ 30: ಕೊಡಗಿನ ಪ್ರವಾಹಕ್ಕೆ ನೆರವು ಕೇಳಲು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಚರ್ಚೆಗೆಂದು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಹಲವು ಸಚಿವರನ್ನು ಭೇಟಿಯಾಗಿ ರಾಜ್ಯದ ಕುರಿತು ಚರ್ಚೆ ನಡೆಸಿದರು.
ಕೊಡಗು ಪ್ರವಾಹ, ಸಾಲಮನ್ನಾ, ಸಾಲ ಋಣಮುಕ್ತ ಸುಗ್ರೀವಾಜ್ಞೆ, 100 ದಿನ ಪೂರೈಸಿದ ಸಮ್ಮಿಶ್ರ ಸರ್ಕಾರ ಹೀಗೆ ಹಲವು ಕಾರಣಗಳನ್ನು ಇಟ್ಟುಕೊಂಡು ದೆಹಲಿಗೆ ತೆರಳಿದ್ದ ಸಿಎಂ ಹಲವು ಮಂತ್ರಿಗಳನ್ನು ಇಂದು ಭೇಟಿ ಮಾಡಿದರು.
ಋಣಮುಕ್ತ ಪರಿಹಾರ ಸುಗ್ರೀವಾಜ್ಞೆ: ರಾಷ್ಟ್ರಪತಿಗೆ ಮನವಿ ಮಾಡಿದ ಎಚ್ಡಿಕೆ
ಮುಖ್ಯಮಂತ್ರಿ ಅವರ ಜೊತೆಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಸಚಿವರಾದ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶೆಂಪುರ ಅವರುಗಳು ಇದ್ದರು.
ರಾಷ್ಟ್ರಪತಿ ಭೇಟಿ
ರಾಷ್ಟ್ರಪತಿ ರಮಾನಂದ ಕೋವಿಂದ್ ಅವರನ್ನು ಭೇಟಿಯಾದ ಕುಮಾರಸ್ವಾಮಿ, ಋಣಮುಕ್ತ ಪರಿಹಾರ ಸುಗ್ರೀವಾಜ್ಞೆ ಸಾಧಕ ಬಾಧಕಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು, ಸುಗ್ರೀವಾಜ್ಞೆಗೆ ಸಮ್ಮತಿ ಸೂಚಿಸುವಂತೆ ರಾಷ್ಟ್ರಪತಿಗೆ ಮನವಿ ಮಾಡಿದರು.
ಗೃಹ ಸಚಿವರಿಗೆ ಮನವಿ
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಮತ್ತು ಸಚಿವರು ಪ್ರವಾಹದಿಂದ ರಾಜ್ಯದಲ್ಲಿ ಆಗಿರುವ ಹಾನಿಯ ಬಗ್ಗೆ ವರದಿ ಸಲ್ಲಿಸಿ ನೆರವಿಗೆ ಮನವಿ ಮಾಡಿದರು. ಅಷ್ಟೆ ಅಲ್ಲದೆ ಗೃಹ ಇಲಾಖೆ ನವೀಕರಣಕ್ಕೆ ಮನವಿ ಮಾಡಿದರು ಮತ್ತು ಪ್ರವಾಹ ಪರಿಸ್ಥಿತಿಗೆ ರಾಜ್ಯ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಆರ್.ವಿ.ದೇಶಪಾಂಡೆ ಸಿಎಂ, ಕುಮಾರಸ್ವಾಮಿ ಹೇಳಿಕೆಗೆ ನೂರೆಂಟು ಅರ್ಥ!
ರಾಜ್ಯ ಸಚಿವರ ಭೇಟಿ
ಪ್ರಧಾನ ಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಕರ್ನಾಟಕದ ನೆರೆ ಹಾಗೂ ಬರ ಪರಿಸ್ಥಿತಿ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಇದ್ದರು.
ರಾಹುಲ್ ಗಾಂಧಿ ಭೇಟಿ
ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿದ ಬೆನ್ನಲ್ಲೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೂ ಸಹ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ಮಾಡಿ ಸರ್ಕಾರದ ಬಗ್ಗೆ ಚರ್ಚೆ ನಡೆಸಿದರು. ರಾಹುಲ್ ಗಾಂಧಿ ಅವರು ಸರ್ಕಾರದ ಕಾರ್ಯಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು ಎಂದು ಎಚ್ಡಿಕೆ ಈ ಸಂದರ್ಭದಲ್ಲಿ ಹೇಳಿದ್ದಾರೆ.
'ಕುಮಾರಸ್ವಾಮಿ ಹಾಗೂ ರಾಹುಲ್ ನಡುವೆ ರಾಜಕೀಯ ವಿಚಾರ ಬಂದಿಲ್ಲ'
ಮೋದಿ ಭೇಟಿ ಇಲ್ಲ
ದೆಹಲಿಗೆ ತೆರಳಿದ್ದ ಕುಮಾರಸ್ವಾಮಿ ಅವರು ಮೋದಿ ಅವರನ್ನು ಭೇಟಿ ಮಾಡುತ್ತಾರೆ ಎಂದು ಎಣಿಸಲಾಗಿತ್ತು, ಮೋದಿ ಅವರು ನೇಪಾಳ ಪ್ರವಾಸದಲ್ಲಿರುವ ಕಾರಣ ಮೋದಿ ಅವರ ಭೇಟಿ ಸಾಧ್ಯವಾಗಿಲ್ಲ.