ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲ ಮನ್ನಾ ಮಾಡಿದ ಬೆನ್ನಲ್ಲೇ ಎಚ್ಡಿಕೆ ದೆಹಲಿಗೆ ಹೊರಟಿದ್ದೇಕೆ?

By Nayana
|
Google Oneindia Kannada News

Recommended Video

3 ದಿನಗಳ ದೆಹಲಿ ಪ್ರವಾಸದಲ್ಲಿ ಎಚ್ ಡಿ ಕುಮಾರಸ್ವಾಮಿ ಏನು ಮಾಡಲಿದ್ದಾರೆ | Oneindia Kannada

ಬೆಂಗಳೂರು, ಜು.17: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು(ಜು.17)ರಂದು ದೆಹಲಿಗೆ ತೆರಳಲಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ.

ಮಂಗಳವಾರ ಕೇಂದ್ರ ಆಹಾರ ಸಚಿವ ರಾಮ್‌ವಿಲಾಸ್‌ ಪಾಸ್ವಾನ್‌, ಕೇಂದ್ರ ರಸ್ತೆ ಸಾರಿಗೆ ಸಚಿವ ಮತ್ತು ಹೆದ್ದಾರಿಗಳು ಹಾಗೂ ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಬುಧವಾರ (ಜು.18)ರಂದು ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಜತೆ ಸಭೆ ನಡೆಸಲಿದ್ದಾರೆ.

ಸಂಪುಟ ವಿಸ್ತರಣೆ: ಜು.18ಕ್ಕೆ ಕಾಂಗ್ರೆಸ್‌ ಹೈಕಮಾಂಡ್ ಜತೆ ಚರ್ಚೆ ಸಂಪುಟ ವಿಸ್ತರಣೆ: ಜು.18ಕ್ಕೆ ಕಾಂಗ್ರೆಸ್‌ ಹೈಕಮಾಂಡ್ ಜತೆ ಚರ್ಚೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ರಾಜ್ಯದ ಹಿತಾಸಕ್ತಿ ರಕ್ಷಣೆ ತೀರ್ಪು ಇನ್ನಿತರೆ ವಿಚಾರಗಳ ಕುರಿತು ಸಮಾಲೋಚನೆ ನಡೆಯಲಿದೆ. ಅದಕ್ಕೂ ಮುನ್ನ ಬುಧವಾರ ಬೆಳಗ್ಗೆ ಸಂಸದರೊಂದಿಗೆ ಸಭೆ ನಡೆಯಲಿದೆ. ಈ ಕುರಿತು ಈಗಾಗಲೇ ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದಾರೆ.

CM to leave Delhi for three days

ಕಾವೇರಿ ವಿಚಾರದಲ್ಲಿ ರಾಜ್ಯದ ಹೋರಾಟಕ್ಕೆ ಸಂಸದರ ಒಗ್ಗಟ್ಟಿನ ಬೆಂಬಲ ಪಡೆಯುವುದು ಒಳಗೊಂಡು ಏನೆಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಬೇಕು ಎಂಬುದರ ಕುರಿತು ದೇವೇಗೌಡರಿಂದ ಮಾರ್ಗದರ್ಶನ ಪಡೆದುಕೊಂಡಿದ್ದಾರೆ.

ಜು.19ರಂದು ಹಾರಂಗಿಗೆ ಬಾಗಿನ: ಗುರುವಾರ ದೆಹಲಿ ಪ್ರವಾದಿಂದ ಮರಳಲಿರುವ ಕುಮಾರಸ್ವಾಮಿ ಅದೇ ದಿನ ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಪ್ರವಾಸಕ್ಕೆ ತೆರಳಲಿದ್ದಾರೆ, ಗುರುವಾರ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

English summary
Chief minister H.D. Kumaraswamy is leaving for Delhi for three days on Tuesday and will meet union ministers regarding various issues. Meanwhile he will have meeting MPs from the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X