ದೆಹಲಿಯಲ್ಲಿ ಶೀತಗಾಳಿ: ಎರಡು ದಿನ ಹಳದಿ ಅಲರ್ಟ್
ನವದೆಹಲಿ, ಜನವರಿ 25: ರಾಷ್ಟ್ರ ರಾಜಧಾನಿಯಲ್ಲಿ ಚಳಿಯ ಪರಿಸ್ಥಿತಿ ಇಂದೂ ಕೂಡ ಮುಂದುವರೆದಿದೆ. ದೆಹಲಿಯಲ್ಲಿ ಮಂಗಳವಾರ ಚಳಿಯ ವಾತಾವರಣವಿದ್ದು, ಗರಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 16 ಡಿಗ್ರಿ ಸೆಲ್ಸಿಯಸ್ನಲ್ಲಿ ನೆಲೆಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮಂಗಳವಾರ ಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಮುಂಜಾನೆ ಪ್ರಯಾಣಿಕರು ತೊಂದರೆ ಅನುಭವಿಸಿದರು. ದೆಹಲಿಯ ಬಹುತೇಕ ಎಲ್ಲಾ ಭಾಗಗಳಲ್ಲಿ ಮಂಜು ಕವಿತ ವಾತಾವರಣ ತೀವ್ರ ಚಳಿ ಇಂದು ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಮತ್ತು ಬುಧವಾರದಂದು ಹಳದಿ ಅಲರ್ಟ್ನೊಂದಿಗೆ ಮುಂದಿನ ಎರಡು ದಿನಗಳವರೆಗೆ ದೆಹಲಿಯಲ್ಲಿ "ಕೋಲ್ಡ್ ಡೇ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರದಂದು ಭಾಗಶಃ ಮೋಡ ಕವಿದ ವಾತಾವರಣವಿದ್ದು, ಬೆಳಗ್ಗೆ ಸಾಧಾರಣ ಮಂಜು ಇರುತ್ತದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದರು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 16 ಡಿಗ್ರಿ ಸೆಲ್ಸಿಯಸ್ ಮತ್ತು ಏಳು ಡಿಗ್ರಿ ಸೆಲ್ಸಿಯಸ್ನಲ್ಲಿ ನೆಲೆಗೊಳ್ಳುವ ಸಾಧ್ಯತೆಯೊಂದಿಗೆ ಕೆಲವು ಸ್ಥಳಗಳಲ್ಲಿ ಶೀತ ದಿನದ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
IMD ಪ್ರಕಾರ, "ಶೀತ ದಿನ" ಎಂದರೆ ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಮತ್ತು ಗರಿಷ್ಠವು ಸಾಮಾನ್ಯಕ್ಕಿಂತ ಕನಿಷ್ಠ 4.5 ಡಿಗ್ರಿ ಸೆಲ್ಸಿಯಸ್ನಷ್ಟಿರುತ್ತದೆ. "ತೀವ್ರ" ಶೀತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕನಿಷ್ಠ 6.5 ಡಿಗ್ರಿ ಸೆಲ್ಸಿಯಸ್ನಷ್ಟಿರುತ್ತದೆ. ಜನವರಿ ಎರಡನೇ ವಾರದಿಂದ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹತ್ತಿರದಲ್ಲಿದೆ ಅಥವಾ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೆಹಲಿ ಅರ್ಬನ್ ಶೆಲ್ಟರ್ ಇಂಪ್ರೂವ್ಮೆಂಟ್ ಬೋರ್ಡ್ (DUSIB) ಯ ಅಧಿಕಾರಿಗಳು ಶೀತದಿಂದ ಸಾವುಗಳು ಸಂಭವಿಸಿವೆ ಎಂದು ನಿರಾಕರಿಸಿದರೆ, ದೆಹಲಿ ಪೊಲೀಸ್ ಅಧಿಕಾರಿಗಳು ವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿರುವ ನಿರಾಶ್ರಿತರಲ್ಲಿ ಸಾವಿನ ಸಂಖ್ಯೆ ಚಳಿಗಾಲದಲ್ಲಿ ಹೆಚ್ಚಾಗುತ್ತದೆ ಎಂದು ಒಪ್ಪಿಕೊಂಡಿದ್ದಾರೆ.
ಎನ್ಜಿಒ ಸಿದ್ಧಪಡಿಸಿದ ವರದಿಯ ಪ್ರಕಾರ, ಜನವರಿ 1 ರಿಂದ ಜನವರಿ 19 ರ ನಡುವೆ ದೆಹಲಿಯಲ್ಲಿ 106 ಜನರು ಚಳಿಯಿಂದ ಸಾವನ್ನಪ್ಪಿದ್ದಾರೆ. ಈ ಪೈಕಿ ಉತ್ತರ ದೆಹಲಿ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯ ಸಾವುಗಳು (33) ದಾಖಲಾಗಿವೆ. ವಾಯುವ್ಯ ದೆಹಲಿಯಲ್ಲಿ 13 ಮತ್ತು ನೈಋತ್ಯ ಮತ್ತು ಮಧ್ಯ ದೆಹಲಿಯಲ್ಲಿ ತಲಾ ಒಂಬತ್ತು ಸಾವುಗಳು ಸಂಭವಿಸಿವೆ. ಪಶ್ಚಿಮ ದೆಹಲಿ ಮತ್ತು ನವದೆಹಲಿ ಈ ಅವಧಿಯಲ್ಲಿ ತಲಾ ಎಂಟು ಸಾವುಗಳನ್ನು ವರದಿ ಮಾಡಿದೆ ಎಂದು ವರದಿ ಹೇಳಿದೆ.
ಉತ್ತರ ಭಾರತದಲ್ಲೆಡೆ ಚಳಿಯಿಂದ ನಡುಗುತ್ತಿರುವ ಜನರು ಚಳಿಯಿಂದ ಪಾರಾಗಲು ಸ್ವೆಟರ್, ಕಂಬಳಿಯ ಮೊರೆ ಹೋಗಿದ್ದಾರೆ. ಬೆಂಕಿ ಹಾಕಿ ಮೈ ಕಾಯಿಸಿಕೊಳ್ಳುತ್ತಿರುವ ದೃಶ್ಯಗಳು ಉತ್ತರ ಪ್ರದೇಶ, ರಾಜಸ್ಥಾನ ಇತರೆಡೆಗಳಲ್ಲಿ ಕಂಡುಬಂದಿದೆ. ಜೊತೆಗೆ, ಜಮ್ಮು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಹಿಮಪಾತ ಕೂಡ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ಬೆಳಿಗ್ಗೆ ದೆಹಲಿಯ ಗಾಳಿಯ ಗುಣಮಟ್ಟವು "ಕಳಪೆ" ವಿಭಾಗದಲ್ಲಿತ್ತು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ, ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಗೆ 241 ಆಗಿತ್ತು. ಭಾನುವಾರ AQI 202 ಆಗಿತ್ತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications