ಇಂಡಿಗೋ ಪ್ರಯಾಣಕ್ಕೆ ಅವಕಾಶವಿಲ್ಲವೇ ಹಾಗಿದ್ರೆ 25 ಲಕ್ಷ ಕೊಡಿ!
ನವದೆಹಲಿ, ಫೆಬ್ರವರಿ.01: ಇಂಡಿಗೋ ವಿಮಾನ ಪ್ರಯಾಣಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹಾಸ್ಯ ಕಲಾವಿದ ಕುನಾಲ್ ಕಮ್ರಾ ವಿಮಾನಯಾನ ಸಂಸ್ಥೆಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. 6 ತಿಂಗಳ ಪ್ರಯಾಣ ನಿರ್ಬಂಧವನ್ನು ವಿರೋಧಿಸಿ 25 ಲಕ್ಷ ರುಪಾಯಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಇಂಡಿಗೋ ವಿಮಾನಯಾನ ಸಂಸ್ಥೆ ತಮ್ಮ ವಿರುದ್ಧ ತೆಗೆದುಕೊಂಡಿರುವ ಕ್ರಮದಿಂದ ಮಾನಸಿಕವಾಗಿ ನೊಂದಿದ್ದೇನೆ. ಮನಸಿಗೆ ನೋವು ಉಂಟು ಮಾಡುವಂತಾ ಕ್ರಮಕ್ಕೆ ದಂಡವಾಗಿ ಸಂಸ್ಥೆಯು ತಮಗೆ ಪರಿಹಾರ ನೀಡಬೇಕು ಎಂದು ಕುನಾಲ್ ಕಮ್ರಾ ನೋಟಿಸ್ ನಲ್ಲಿ ತಿಳಿಸಿದ್ದಾರೆ.
ಕಳೆದ ಜನವರಿ.28ರಂದು ಮುಂಬೈ ಟು ಲಕ್ನೋಗೆ ತೆರಳುತ್ತಿದ್ದ 6E 5317 ಇಂಡಿಗೋ ವಿಮಾನದಲ್ಲಿ ಹಾಸ್ಯ ಕಲಾವಿದ ಕುನಾಲ್ ಕಮ್ರಾ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಸಹ ಪ್ರಯಾಣಿಕರಾಗಿದ್ದ ಖಾಸಗಿ ಸುದ್ದಿ ವಾಹಿನಿಯ ಸಂಪಾದಕರಾದ ಅರ್ನಬ್ ಗೋಸ್ವಾಮಿ ಅವರಿಗೆ ಕಿರಿಕಿರಿ ಉಂಟು ಮಾಡುವ ರೀತಿಯಲ್ಲಿ ವರ್ತಿಸಿದ್ದರು ಎಂದು ಆರೋಪಿಸಲಾಗಿದೆ.

6 ತಿಂಗಳ ನಿರ್ಬಂಧ ವಿಧಿಸಿದ್ದ ಇಂಡಿಗೋ:
ಇಂಡಿಗೋ ವಿಮಾನದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಜೊತೆ ಅತಿರೇಕದ ವರ್ತನೆ ತೋರಿದ ಆರೋಪ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಯು ಕುನಾಲ್ ಕಮ್ರಾ ಮೇಲೆ ನಿರ್ಬಂಧ ವಿಧಿಸಿತ್ತು. ಆರು ತಿಂಗಳ ಕಾಲ ಇಂಡಿಗೋ ಸಂಸ್ಥೆಯ ವಿಮಾನಗಳಲ್ಲಿ ಪ್ರಯಾಣಕ್ಕೆ ನಿಷೇಧ ವಿಧಿಸಲಾಗಿತ್ತು. ಇದರ ಬೆನ್ನಲ್ಲೇ ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಗಳು ಕೂಡಾ ಕುನಾಲ್ ಕಮ್ರಾ ವಿರುದ್ಧ ಕ್ರಮ ತೆಗೆದುಕೊಂಡಿದ್ದವು. ಸಂಸ್ಥೆಯು ಅಧಿಕೃತವಾಗಿ ಆದೇಶಿಸುವವರೆಗೂ ತಮ್ಮ ಸಂಸ್ಥೆಯ ವಿಮಾನಗಳಲ್ಲಿ ಪ್ರಯಾಣಕ್ಕೆ ನಿಷೇಧವನ್ನು ವಿಧಿಸಿದ್ದವು.
ಯಾವ ಅಪರಾಧಕ್ಕೆ ಎಷ್ಟು ಅವಧಿ ನಿರ್ಬಂಧ:
ಭಾರತೀಯ ವಿಮಾನಯಾನ ಪ್ರಾಧಿಕಾರವು ಮೂರು ವಿಭಾಗಗಳಲ್ಲಿ ಅಪರಾಧವನ್ನು ವಿಂಗಡಿಸಿದೆ. ಮೊದಲ ವಿಭಾಗದಲ್ಲಿ ಮೌಖಿಕ ನಿಂದನೆಗೈದ ಪ್ರಯಾಣಿಕರಿಗೆ 3 ತಿಂಗಳವರೆಗೂ ನಿರ್ಬಂಧಿಸಲಾಗುತ್ತದೆ. ಎರಡನೇ ವಿಭಾಗದಲ್ಲಿ ದೈಹಿಕವಾಗಿ ಹಲ್ಲೆ ನಡೆಸಿದ ಅಪರಾಧಕ್ಕೆ 6 ತಿಂಗಳವರೆಗೂ ನಿರ್ಬಂಧ ವಿಧಿಸಲಾಗುತ್ತದೆ. ಪ್ರಾಣ ಬೆದರಿಕೆ ಹಾಗೂ ವಿಮಾನದ ಸುರಕ್ಷತೆಗೆ ಧಕ್ಕೆ ಉಂಟು ಮಾಡುವಂತಾ ನಡುವಳಿಕೆಯನ್ನು ಮೂರನೇ ವಿಭಾಗದಲ್ಲಿ ಸೇರಿಸಿದ್ದು, ಈ ಅಪರಾಧಕ್ಕೆ ಕನಿಷ್ಠ 2 ವರ್ಷಗಳ ಕಾಲ ನಿರ್ಬಂಧ ವಿಧಿಸಲಾಗುತ್ತದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications